Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:1 - ಪರಿಶುದ್ದ ಬೈಬಲ್‌

1 ಮೋಶೆ ಪವಿತ್ರಗುಡಾರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿದ ಮೇಲೆ ಅದನ್ನು ಅದರ ವಸ್ತುಗಳೊಡನೆ, ಯಜ್ಞವೇದಿಕೆಯೊಡನೆ ಮತ್ತು ಅದರ ಎಲ್ಲಾ ಉಪಕರಣಗಳೊಡನೆ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಇವು ಯೆಹೋವನ ಆರಾಧನೆಗಾಗಿ ಮಾತ್ರ ಉಪಯೋಗಿಸಲ್ಪಡುತ್ತವೆಂದು ಹೀಗೆ ಪ್ರತ್ಯೇಕಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ, ಅದರ ಸಾಮಾನುಗಳನ್ನೂ, ಯಜ್ಞವೇದಿಯನ್ನೂ ಮತ್ತು ಯಜ್ಞವೇದಿಯ ಉಪಕರಣಗಳನ್ನೂ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನು ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ ಅದರ ಸಾಮಾನುಗಳನ್ನೂ ಯಜ್ಞವೇದಿಯನ್ನೂ ವೇದಿಯ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆಯು ದೇವದರ್ಶನ ಗುಡಾರವನ್ನು ನಿಲ್ಲಿಸಿ, ಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ಅದರ ಎಲ್ಲಾ ಸಲಕರಣೆಗಳನ್ನೂ, ಬಲಿಪೀಠವನ್ನೂ, ಅದರ ಎಲ್ಲಾ ಸಾಮಗ್ರಿಗಳನ್ನೂ ಅಭಿಷೇಕಿಸಿ ಪರಿಶುದ್ಧ ಮಾಡಿದನು. ಅನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:1
15 ತಿಳಿವುಗಳ ಹೋಲಿಕೆ  

ಇವೆಲ್ಲವೂ ಇಸ್ರೇಲರ ಪ್ರಧಾನರು ತಂದ ಕಾಣಿಕೆಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಯಜ್ಞವೇದಿಕೆಗೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವುಗಳೇ. ಅವರು ಹನ್ನೆರಡು ಬೆಳ್ಳಿಯ ತಟ್ಟೆಗಳನ್ನೂ ಹನ್ನೆರಡು ಬೆಳ್ಳಿಯ ಬಟ್ಟಲುಗಳನ್ನೂ ಹನ್ನೆರಡು ಚಿನ್ನದ ಧೂಪಾರತಿಗಳನ್ನೂ ತಂದರು.


ನೀವು ಕುರುಡರು. ನಿಮಗೇನೂ ಅರ್ಥವಾಗುವುದಿಲ್ಲ. ಯಾವುದು ಹೆಚ್ಚಿನದು? ಕಾಣಿಕೆಯೋ ಅಥವಾ ಯಜ್ಞವೇದಿಕೆಯೋ? ಕಾಣಿಕೆ ಪರಿಶುದ್ಧಗೊಂಡದ್ದು ಯಜ್ಞವೇದಿಕೆಯಿಂದಲೇ. ಆದ್ದರಿಂದ ಯಜ್ಞವೇದಿಕೆಯೇ ಹೆಚ್ಚಿನದು.


ಅಂದು ರಾಜನಾದ ಸೊಲೊಮೋನನು ಆಲಯದ ಮುಂದಿನ ಅಂಗಳವನ್ನು ಪ್ರತಿಷ್ಠಿಸಿದನು. ಅವನು ಸರ್ವಾಂಗಹೋಮಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸಿದ್ದ ಪಶುಗಳ ಕೊಬ್ಬನ್ನು ಅಂಗಳದಲ್ಲಿ ಅರ್ಪಿಸಿದನು. ಯಾಕೆಂದರೆ ಯೆಹೋವನ ಮುಂದೆ ಇದ್ದ ಹಿತ್ತಾಳೆಯ ಯಜ್ಞವೇದಿಕೆಯು ಈ ಎಲ್ಲವನ್ನು ಹಿಡಿಸಲಾರದಷ್ಟು ಚಿಕ್ಕದಾಗಿತ್ತು.


ಸಮಾಧಾನಯಜ್ಞಕ್ಕಾಗಿಯೂ ಪ್ರಧಾನರು ಪಶುಗಳನ್ನು ಕೊಟ್ಟರು. ಅವುಗಳ ಒಟ್ಟು ಸಂಖ್ಯೆ ಇಪ್ಪತ್ನಾಲ್ಕು ಹೋರಿಗಳು, ಅರವತ್ತು ಟಗರುಗಳು, ಅರವತ್ತು ಹೋತಗಳು, ಒಂದು ವರ್ಷದ ಅರವತ್ತು ಗಂಡು ಕುರಿಮರಿಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಅದಕೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವೇ.


“ಇಸ್ರೇಲರಲ್ಲಿ ಹುಟ್ಟಿದ ಚೊಚ್ಚಲು ಗಂಡುಮಕ್ಕಳೆಲ್ಲಾ ನನಗೆ ಮೀಸಲಾಗಿರಬೇಕು; ಪ್ರತಿಯೊಬ್ಬ ಚೊಚ್ಚಲು ಮಗನು ನನ್ನವನೇ. ಪ್ರತಿಯೊಂದು ಚೊಚ್ಚಲು ಪಶುವು ನನ್ನದೇ” ಎಂದು ಹೇಳಿದನು.


ದೇವರು ತನ್ನ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ಆ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು.


ವೇದಿಕೆಯು ಅಭಿಷೇಕಿಸಲ್ಪಟ್ಟಾಗ, ಯಜ್ಞವೇದಿಕೆಯ ಆರಂಭಕ್ಕಾಗಿ ಪ್ರಧಾನರು ಸಹ ತಮ್ಮ ಕಾಣಿಕೆಗಳನ್ನು ವೇದಿಕೆಯ ಮುಂದೆ ತಂದರು.


ಏಳು ದಿನಗಳವರೆಗೆ ಪ್ರತಿದಿನ ಒಂದು ಹೋರಿಯನ್ನು ವಧಿಸು. ಇದು ಆರೋನನ ಮತ್ತು ಅವನ ಪುತ್ರರ ಪಾಪನಿವಾರಣೆಯ ಸಮರ್ಪಣೆಯಾಗಿರುವುದು. ಅದಲ್ಲದೆ ಯಜ್ಞವೇದಿಕೆಯನ್ನು ಪರಿಶುದ್ಧಗೊಳಿಸಲು ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ ಅದನ್ನು ದೇವರ ಸೇವೆಗೋಸ್ಕರ ಅಭಿಷೇಕಿಸಬೇಕು.


ಬಳಿಕ ಗಂಗಾಳವನ್ನೂ ಅದರ ಕೆಳಗಿರುವ ಪೀಠವನ್ನೂ ಅಭಿಷೇಕಿಸಿ ಪವಿತ್ರಗೊಳಿಸು.


“ಇಸ್ರೇಲರ ಸಂಗಡ ಮಾತಾಡಿ ಹೀಗೆ ಮಾಡಬೇಕು: ಅವರ ಕುಲಗಳ ಪ್ರತಿಯೊಬ್ಬ ಪ್ರಧಾನನಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಪ್ರಧಾನನ ಹೆಸರನ್ನು ಬರೆಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು