Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:10 - ಪರಿಶುದ್ದ ಬೈಬಲ್‌

10 ವೇದಿಕೆಯು ಅಭಿಷೇಕಿಸಲ್ಪಟ್ಟಾಗ, ಯಜ್ಞವೇದಿಕೆಯ ಆರಂಭಕ್ಕಾಗಿ ಪ್ರಧಾನರು ಸಹ ತಮ್ಮ ಕಾಣಿಕೆಗಳನ್ನು ವೇದಿಕೆಯ ಮುಂದೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೋಶೆಯು ಯಜ್ಞವೇದಿಯನ್ನು ಅಭಿಷೇಕಿಸಿದ ದಿನದಲ್ಲಿ, ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ದಿನದಲ್ಲಿ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಪ್ರತಿಷ್ಠೆಗಾಗಿ ಅದರ ಮುಂದೆ ಬಂದು, ಪ್ರಧಾನರು ತಮ್ಮ ಕಾಣಿಕೆಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:10
12 ತಿಳಿವುಗಳ ಹೋಲಿಕೆ  

ಏಳು ದಿನ ಹಬ್ಬದ ಆಚರಣೆಯ ಬಳಿಕ ಎಂಟನೆಯ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿದರು. ಅವರು ಯಜ್ಞವೇದಿಕೆಯನ್ನು ಯೆಹೋವನ ಆರಾಧನೆಗೋಸ್ಕರ ಪ್ರತಿಷ್ಠಿಸಿದರು. ಹಬ್ಬವನ್ನು ಏಳು ದಿನಗಳ ತನಕ ಆಚರಿಸಿದರು.


ಜನರು ಜೆರುಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸಿದರು. ಅವರು ಎಲ್ಲಾ ಲೇವಿಯರನ್ನು ನಗರಕ್ಕೆ ಕರೆತಂದು ಪ್ರತಿಷ್ಠೆ ಮಾಡಿದರು. ಅವರು ದೇವರಿಗೆ ಸ್ತುತಿಪದಗಳನ್ನು, ತಾಳ, ಸ್ವರಮಂಡಲ, ಕಿನ್ನರಿಗಳನ್ನು ಬಾರಿಸುತ್ತಾ ಹಾಡಿದರು.


ಸೊಲೊಮೋನ ಅರಸನು ಇಪ್ಪತ್ತೆರಡು ಸಾವಿರ ಹೋರಿಗಳನ್ನೂ ಒಂದು ಲಕ್ಷ ಇಪ್ಪತ್ತು ಸಾವಿರ ಕುರಿಗಳನ್ನೂ ಯಜ್ಞವಾಗಿ ಸಮರ್ಪಿಸಿದನು. ಅರಸನೂ ಎಲ್ಲಾ ಜನರೂ ದೇವಾಲಯವನ್ನು ಆರಾಧನೆಗಾಗಿ ಪ್ರತಿಷ್ಠಿಸಿದರು.


ಸೊಲೊಮೋನನು ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಒಂದು ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಸಮಾಧಾನಯಜ್ಞವನ್ನಾಗಿ ಅರ್ಪಿಸಿದನು. ಹೀಗೆ ರಾಜನು ಮತ್ತು ಇಸ್ರೇಲರು ಆಲಯವನ್ನು ಯೆಹೋವನಿಗೆ ಪ್ರತಿಷ್ಠಿಸಿದರು.


“ಆ ಲೇವಿಯ ಅಧಿಕಾರಿಗಳು ಸೈನಿಕರಿಗೆ, ‘ನಿಮ್ಮಲ್ಲಿ ಯಾರಾದರೂ ಹೊಸಮನೆಯನ್ನು ಕಟ್ಟಿ ಗೃಹಪ್ರವೇಶ ಮಾಡಿರದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಒಂದುವೇಳೆ ಅವನು ರಣರಂಗದಲ್ಲಿ ಸತ್ತರೆ ಇನ್ನೊಬ್ಬನು ಅವನ ಮನೆಗೆ ಸೇರಿಕೊಳ್ಳಬಹುದು.


ಯೆಹೋವನೇ, ನನ್ನನ್ನು ಇಕ್ಕಟ್ಟುಗಳಿಂದ ಮೇಲೆತ್ತಿದವನು ನೀನೇ; ಶತ್ರುಗಳಿಗೆ ಸೋತುಹೋಗಿ ಅವರ ಹಾಸ್ಯಕ್ಕೆ ಗುರಿಯಾಗದಂತೆ ಮಾಡಿದವನು ನೀನೇ; ಆದ್ದರಿಂದ ನಿನ್ನನ್ನು ಕೊಂಡಾಡುವೆನು.


ಆ ವಿಶೇಷ ದಿನದಲ್ಲಿ ಯಾಜಕರು ಹೆಚ್ಚಿನ ಸಂಖ್ಯೆಯಲ್ಲಿ ಯಜ್ಞವನ್ನರ್ಪಿಸಿದರು. ಜನರೆಲ್ಲಾ ಸಂತೋಷಪಟ್ಟರು. ದೇವರು ಅವರಿಗೆಲ್ಲಾ ಅತ್ಯಾನಂದವನ್ನು ಉಂಟುಮಾಡಿದನು; ಹೆಂಗಸರೂ ಮಕ್ಕಳೂ ಉತ್ಸಾಹದಿಂದ ಆನಂದಿಸಿದರು; ಜೆರುಸಲೇಮಿನಿಂದ ಹೊರಟ ಅವರ ಹರ್ಷಧ್ವನಿಯು ಬಹುದೂರದವರೆಗೆ ಕೇಳಿಸಿತು.


ಮೋಶೆ ಪವಿತ್ರಗುಡಾರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿದ ಮೇಲೆ ಅದನ್ನು ಅದರ ವಸ್ತುಗಳೊಡನೆ, ಯಜ್ಞವೇದಿಕೆಯೊಡನೆ ಮತ್ತು ಅದರ ಎಲ್ಲಾ ಉಪಕರಣಗಳೊಡನೆ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಇವು ಯೆಹೋವನ ಆರಾಧನೆಗಾಗಿ ಮಾತ್ರ ಉಪಯೋಗಿಸಲ್ಪಡುತ್ತವೆಂದು ಹೀಗೆ ಪ್ರತ್ಯೇಕಿಸಲ್ಪಟ್ಟವು.


ಯೆಹೋವನು ಮೋಶೆಗೆ, “ಪ್ರತಿದಿನ ಒಬ್ಬ ಪ್ರಧಾನನು ವೇದಿಕೆಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ತರಬೇಕು” ಎಂದು ಆಜ್ಞಾಪಿಸಿದನು.


ಇವೆಲ್ಲವೂ ಇಸ್ರೇಲರ ಪ್ರಧಾನರು ತಂದ ಕಾಣಿಕೆಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಯಜ್ಞವೇದಿಕೆಗೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವುಗಳೇ. ಅವರು ಹನ್ನೆರಡು ಬೆಳ್ಳಿಯ ತಟ್ಟೆಗಳನ್ನೂ ಹನ್ನೆರಡು ಬೆಳ್ಳಿಯ ಬಟ್ಟಲುಗಳನ್ನೂ ಹನ್ನೆರಡು ಚಿನ್ನದ ಧೂಪಾರತಿಗಳನ್ನೂ ತಂದರು.


ಸಮಾಧಾನಯಜ್ಞಕ್ಕಾಗಿಯೂ ಪ್ರಧಾನರು ಪಶುಗಳನ್ನು ಕೊಟ್ಟರು. ಅವುಗಳ ಒಟ್ಟು ಸಂಖ್ಯೆ ಇಪ್ಪತ್ನಾಲ್ಕು ಹೋರಿಗಳು, ಅರವತ್ತು ಟಗರುಗಳು, ಅರವತ್ತು ಹೋತಗಳು, ಒಂದು ವರ್ಷದ ಅರವತ್ತು ಗಂಡು ಕುರಿಮರಿಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಅದಕೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು