Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:3 - ಪರಿಶುದ್ದ ಬೈಬಲ್‌

3 ಗೋತ್ರಪ್ರಧಾನರು ಮುಂದೆ ಬಂದು, ತಮ್ಮ ಕಾಣಿಕೆಗಳನ್ನು ಸಮರ್ಪಿಸಿದರು. ಇಬ್ಬಿಬ್ಬರು ಆರು ಕಮಾನು ಬಂಡಿಗಳನ್ನೂ ಅವುಗಳನ್ನು ಎಳೆಯುವುದಕ್ಕೆ ಆರು ಜೊತೆ ಎತ್ತುಗಳನ್ನೂ ಕೊಟ್ಟರು. ಪ್ರಧಾನರು ಇವುಗಳನ್ನು ಪವಿತ್ರಗುಡಾರದಲ್ಲಿ ಯೆಹೋವನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ಬರಿಬ್ಬರೂ ಒಂದು ಕಮಾನು ಬಂಡಿಯನ್ನೂ, ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ, ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಬ್ಬರಿಬ್ಬರು ಒಂದು ಕಮಾನು ಬಂಡಿಯನ್ನೂ ಒಂದು ಜೊತೆ ಎತ್ತುಗಳನ್ನೂ ಅಂತು ಆರು ಬಂಡಿಗಳನ್ನೂ ಆರು ಜೊತೆ ಎತ್ತುಗಳನ್ನೂ ದೇವದರ್ಶನದ ಗುಡಾರದ ಮುಂದೆ ಸರ್ವೇಶ್ವರನ ಸನ್ನಿಧಿಗೆ ತಂದು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಬ್ಬರಿಬ್ಬರು ಒಂದು ಕಮಾನುಬಂಡಿಯನ್ನೂ ಒಂದು ಜೋಡಿ ಎತ್ತುಗಳನ್ನೂ ಅಂತು ಆರು ಬಂಡಿಗಳನ್ನೂ ಆರು ಜೋಡಿ ಎತ್ತುಗಳನ್ನೂ ದೇವದರ್ಶನದ ಗುಡಾರದ ಮುಂದೆ ಯೆಹೋವನ ಸನ್ನಿಧಿಗೆ ತಂದು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಯೆಹೋವ ದೇವರ ಎದುರಿನಲ್ಲಿ ತಂದ ಅರ್ಪಣೆ ಏನೆಂದರೆ ಆರು ಕಮಾನುಬಂಡಿಗಳು, ಹನ್ನೆರಡು ಎತ್ತುಗಳು, ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯಂತೆ, ಒಬ್ಬೊಬ್ಬನಿಗೆ ಒಂದೊಂದು ಎತ್ತುಗಳನ್ನು ಅವರು ದೇವದರ್ಶನ ಗುಡಾರದ ಮುಂದೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:3
7 ತಿಳಿವುಗಳ ಹೋಲಿಕೆ  

ಅವರು ನಮ್ಮ ಶ್ರೇಷ್ಠವಾದ ರಥಗಳನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹೋಗಿ ನಿನ್ನ ತಂದೆಯನ್ನೂ ಎಲ್ಲಾ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಬರಲಿ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಅವರು ನಿಮ್ಮ ಸಹೋದರಸಹೋದರಿಯರನ್ನು ಎಲ್ಲಾ ಜನಾಂಗಗಳೊಳಗಿಂದ ಕರೆದುಕೊಂಡು ನನ್ನ ಪವಿತ್ರ ಪರ್ವತವಾದ ಜೆರುಸಲೇಮಿಗೆ ಬರುವರು. ನಿನ್ನ ಸಹೋದರಸಹೋದರಿಯರು ಕುದುರೆ, ಕತ್ತೆ, ಒಂಟೆ, ರಥ ಮತ್ತು ಗಾಡಿಗಳಲ್ಲಿ ಕುಳಿತುಕೊಂಡು ಬರುವರು. ಯೆಹೋವನ ಮಂದಿರದೊಳಗೆ ಶುದ್ಧವಾದ ತಟ್ಟೆಯ ಮೇಲೆ ಕಾಣಿಕೆಗಳನ್ನು ತರುವಂತೆಯೇ ನಿನ್ನ ಸಹೋದರಸಹೋದರಿಯರಾದ ಇಸ್ರೇಲರು ಬರುವರು.


ನೀವು ನನಗೆ ಬಹು ಭಾರವಾಗಿದ್ದೀರಿ. ಬಂಡಿಯಲ್ಲಿ ಒತ್ತಿ ತುಂಬಿಸಿದಾಗ ಹೇಗೆ ಬಗ್ಗುತ್ತದೋ ಅದೇ ರೀತಿಯಲ್ಲಿ ನಾನು ಬಹುವಾಗಿ ಬಗ್ಗಿರುತ್ತೇನೆ. ಆದರೆ ನಾನು ನಿಮ್ಮನ್ನು ಅದೇ ರೀತಿಯಲ್ಲಿ ಬಗ್ಗಿಸುತ್ತೇನೆ.


ಅಂತೆಯೇ ಇಸ್ರೇಲನ ಮಕ್ಕಳು ಮಾಡಿದರು. ಫರೋಹನು ಹೇಳಿದಂತೆಯೇ ಯೋಸೇಫನು ತನ್ನ ಸಹೋದರರಿಗೆ ಒಳ್ಳೆಯ ರಥಗಳನ್ನೂ ಪ್ರಯಾಣಕ್ಕೆ ಬೇಕಾಗುವಷ್ಟು ಆಹಾರವನ್ನೂ ಕೊಟ್ಟನು.


“ಇಸ್ರೇಲರು ನನಗೆ ಕಾಣಿಕೆಗಳನ್ನು ತರಬೇಕೆಂದು ಅವರಿಗೆ ಹೇಳು. ಪ್ರತಿಯೊಬ್ಬನು ನನಗೆ ಕೊಡುವುದರ ಬಗ್ಗೆ ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಈ ಕಾಣಿಕೆಗಳನ್ನು ನನಗಾಗಿ ಸ್ವೀಕರಿಸು.


ಈ ಗುಂಪು ಜೆರುಸಲೇಮಿನಲ್ಲಿದ್ದ ದೇವಾಲಯದ ಬಳಿ ಬಂದಾಗ ಆ ದೇವಾಲಯವನ್ನು ಮತ್ತೆ ನಿರ್ಮಿಸಲು ಕುಟುಂಬದ ನಾಯಕರುಗಳು ತಮ್ಮತಮ್ಮ ಕಾಣಿಕೆಗಳನ್ನು ಕೊಟ್ಟರು. ಕೆಡವಲ್ಪಟ್ಟಿದ್ದ ದೇವಾಲಯದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ಕಟ್ಟಲು ಪ್ರಾರಂಭಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು