Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:11 - ಪರಿಶುದ್ದ ಬೈಬಲ್‌

11 ಆಗ ಆರೋನನು ಲೇವಿಯರನ್ನು ಯೆಹೋವನಿಗೆ ಇಸ್ರೇಲರ ಕಾಣಿಕೆಯಾಗಿ ಕೊಡುವನು. ಈ ರೀತಿಯಾಗಿ ಲೇವಿಯರು ಯೆಹೋವನ ಪರಿಚರ್ಯ ಕೆಲಸಕ್ಕಾಗಿ ಸಿದ್ಧರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಲೇವಿಯರು ಯೆಹೋವನ ಸೇವಾಕಾರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲರ ನಿಮಿತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಲೇವಿಯರು ಇಸ್ರಯೇಲರ ಪರವಾಗಿ ಸರ್ವೇಶ್ವರನ ಪರಿಚರ್ಯ ಮಾಡಲು ಯೋಗ್ಯರಾಗುವಂತೆ ಆರೋನನು ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಲೇವಿಯರು ಯೆಹೋವನ ಪರಿಚರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ಯರ ನಿವಿುತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದೋಪಾದಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಲೇವಿಯರು ಇಸ್ರಾಯೇಲರ ಪರವಾಗಿ ಯೆಹೋವ ದೇವರ ಸೇವೆಯನ್ನು ಮಾಡುವುದಕ್ಕೆ ಸಿದ್ಧರಾಗುವಂತೆ ಆರೋನನು ಅವರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:11
9 ತಿಳಿವುಗಳ ಹೋಲಿಕೆ  

ಕಾಣಿಕೆಯ ಆ ಭಾಗವು ಅಗ್ನಿಯಲ್ಲಿ ಹೋಮಮಾಡಬೇಕು. ಅವನು ಕಾಣಿಕೆಯನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಗೆ ಹೋಗಬೇಕು. ಅವನು ಆ ಪಶುವಿನ ಕೊಬ್ಬನ್ನೂ ಎದೆಯ ಭಾಗವನ್ನೂ ಯಾಜಕನ ಬಳಿಗೆ ತರಬೇಕು. ಯೆಹೋವನ ಸನ್ನಿಧಿಯಲ್ಲಿ ಎದೆಯ ಭಾಗವು ನಿವಾಳಿಸಲ್ಪಡಬೇಕು. ಇದು ನೈವೇದ್ಯ ಸಮರ್ಪಣೆಯಾಗಿರುವುದು.


ನೈವೇದ್ಯವಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ವಿಶೇಷ ಕಾಣಿಕೆಯಾಗಿ ನಿವಾಳಿಸಬೇಕು. ಇವುಗಳು ಪವಿತ್ರವಾಗಿದ್ದು ಯಾಜಕರ ಪಾಲಾಗುತ್ತವೆ. ಅಲ್ಲದೆ ಮೀಸಲಾಗಿಟ್ಟಿರುವ ನಿವಾಳಿಸಲ್ಪಟ್ಟ ಕಾಣಿಕೆಯ ಎದೆಯ ಭಾಗ ಮತ್ತು ತೊಡೆಯ ಭಾಗ ಸಹ ಯಾಜಕನ ಭಾಗವಾಗಿರುತ್ತದೆ. ಇದರ ನಂತರ ನಾಜೀರನು ದ್ರಾಕ್ಷಾರಸವನ್ನು ಕುಡಿಯಬಹುದು.


ಮೋಶೆ ಎದೆಯ ಭಾಗವನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿದನು. ಅದು ಯಾಜಕರನ್ನು ನೇಮಿಸುವುದಕ್ಕಾಗಿ ಅರ್ಪಿಸಲ್ಪಟ್ಟ ಟಗರಿನಲ್ಲಿ ಮೋಶೆಯ ಪಾಲಾಗಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.


ಬಳಿಕ ಮೋಶೆ ಅವೆಲ್ಲವುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಗಳಲ್ಲಿ ಇಟ್ಟು, ತುಂಡುಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.


ಇವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಯೆಹೋವನ ಮುಂದೆ ಇವುಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ನಿವಾಳಿಸಬೇಕೆಂದು ಅವರಿಗೆ ಹೇಳು. ಇದು ಯೆಹೋವನಿಗೆ ವಿಶೇಷವಾದ ನೈವೇದ್ಯಾರ್ಪಣೆಯಾಗಿದೆ.


ನೈವೇದ್ಯರೂಪವಾಗಿ ನಿವಾಳಿಸುವ ಸಮರ್ಪಣೆಯಲ್ಲಿ ಪಶುವಿನ ಎದೆಯ ಭಾಗವನ್ನು ಮತ್ತು ಸಮಾಧಾನಯಜ್ಞಗಳಲ್ಲಿ ಪಶುವಿನ ಬಲ ತೊಡೆಯನ್ನು ಯೆಹೋವನಾದ ನಾನು ಇಸ್ರೇಲರಿಂದ ತೆಗೆದುಕೊಂಡು ಆರೋನನಿಗೂ ಅವನ ಪುತ್ರರಿಗೂ ಕೊಡುತ್ತಿದ್ದೇನೆ. ಇಸ್ರೇಲರು ಈ ನಿಯಮಕ್ಕೆ ಎಂದೆಂದಿಗೂ ವಿಧೇಯರಾಗಬೇಕು.”


ಆ ಸಮಯದಲ್ಲಿ ಯೆಹೋವನು ಲೇವಿಕುಲದವರನ್ನು ಒಂದು ವಿಶೇಷವಾದ ಕೆಲಸಕ್ಕಾಗಿ ಬೇರೆ ಕುಲಗಳವರಿಂದ ಪ್ರತ್ಯೇಕಿಸಿದನು. ಅವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವ ಕೆಲಸ ಕೊಡಲ್ಪಟ್ಟಿತು. ಯೆಹೋವನ ಸನ್ನಿಧಾನದಲ್ಲಿ ಅವರು ಯಾಜಕರ ಕೆಲಸವನ್ನು ಮಾಡಿದರು. ಅಲ್ಲದೆ ಯೆಹೋವನ ಜನರಿಗೆ ದೇವರ ಆಶೀರ್ವಾದ ವಚನಗಳನ್ನು ಹೇಳುವ ಕೆಲಸವನ್ನು ಅವರು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು