Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:10 - ಪರಿಶುದ್ದ ಬೈಬಲ್‌

10 “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಮನುಷ್ಯಶವ ಸೋಂಕಿದ್ದರಿಂದ ಅಶುದ್ಧರಾದವರೂ ದೂರಪ್ರಯಾಣದಲ್ಲಿರುವವರೂ ಸಹ ಯೆಹೋವನ ಪಸ್ಕಹಬ್ಬವನ್ನು ಆಚರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನೀನು ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು - ‘ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಾಗಲಿ ಶವ ಸೋಂಕಿದುದರಿಂದ ಅಶುದ್ಧರಾದವರು ಮಾತ್ರವಲ್ಲ ದೂರ ಪ್ರಯಾಣದಲ್ಲಿರುವವರು ಕೂಡ ಸರ್ವೇಶ್ವರನ ಆಜ್ಞಾನುಸಾರ ಪಾಸ್ಕ ಹಬ್ಬವನ್ನು ಆಚರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಶವಸೋಂಕಿದದರಿಂದ ಅಶುದ್ಧರಾದವರೂ ದೂರ ಪ್ರಯಾಣದಲ್ಲಿರುವವರೂ ಕೂಡ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನು ಇಸ್ರಾಯೇಲರಿಗೆ, “ನಿಮ್ಮಲ್ಲಿಯೂ, ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಶವದ ಸೋಂಕಿನಿಂದ ಅಶುದ್ಧನಾಗಿದ್ದರೂ, ಇಲ್ಲವೆ ದೂರ ಪ್ರಯಾಣದಲ್ಲಿದ್ದರೂ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:10
15 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬ ವ್ಯಕ್ತಿಯು ರೊಟ್ಟಿಯನ್ನು ತಿನ್ನುವುದಕ್ಕಿಂತಲೂ ಪಾತ್ರೆಯಲ್ಲಿ ಕುಡಿಯುವುದಕ್ಕಿಂತಲೂ ಮುಂಚಿತವಾಗಿ ತನ್ನ ಹೃದಯವನ್ನು ಪರಿಶೀಲಿಸಿಕೊಳ್ಳಬೇಕು.


ಆಗ ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಬಳಿಯಲ್ಲೇ ಬಿಟ್ಟುಹೋಗಿ, ಮೊದಲು ಅವನೊಂದಿಗೆ ಸಮಾಧಾನ ಮಾಡಿಕೊಳ್ಳಿರಿ. ಆಮೇಲೆ ಬಂದು ನಿಮ್ಮ ಕಾಣಿಕೆಯನ್ನು ಸಲ್ಲಿಸಿ.


ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು.


ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಆ ಸಮಯದಲ್ಲಿ ಅವರು ಪಸ್ಕದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟಮಾಡಬೇಕು.


ಹಿಜ್ಕೀಯ ಅರಸನೂ ಅಧಿಕಾರಿಗಳೂ ಜೆರುಸಲೇಮಿನ ಸಭೆಯವರೆಲ್ಲರೂ ಎರಡನೆಯ ತಿಂಗಳಲ್ಲಿ ಹಬ್ಬವನ್ನು ಆಚರಿಸಲು ನಿರ್ಧರಿಸಿದರು.


ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್ ಮತ್ತು ಜೆಬುಲೂನಿನಿಂದ ಬಂದಿದ್ದ ಎಷ್ಟೋ ಮಂದಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಅವರು ಪಸ್ಕದ ಕುರಿಮರಿಯನ್ನು ಯೋಗ್ಯವಾದ ರೀತಿಯಲ್ಲಿ ತಿನ್ನಲಿಲ್ಲ. ಆದರೆ ಹಿಜ್ಕೀಯನು ಅಂಥವರಿಗೋಸ್ಕರವಾಗಿ, “ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ಇವರು ಯೋಗ್ಯವಾದ ರೀತಿಯಲ್ಲಿ ನಿನ್ನನ್ನು ಆರಾಧಿಸಲು ಬಂದಿದ್ದಾರೆ. ಆದರೆ ಧರ್ಮಶಾಸ್ತ್ರದ ಪ್ರಕಾರ ಅವರು ತಮ್ಮನ್ನು ಶುದ್ಧ ಮಾಡಿಕೊಳ್ಳಲಿಲ್ಲ. ದಯಮಾಡಿ ಅವರನ್ನು ಕ್ಷಮಿಸು. ನಮ್ಮ ಪಿತೃಗಳು ವಿಧೇಯರಾಗಿದ್ದ ದೇವರೇ, ಜನರು ಮೋಶೆಯ ನಿಯಮಕ್ಕನುಸಾರವಾಗಿ ತಮ್ಮನ್ನು ಶುದ್ಧಿ ಮಾಡಿಕೊಂಡಿಲ್ಲದಿದ್ದರೂ ನೀನು ಅವರನ್ನು ದಯವಿಟ್ಟು ಕ್ಷಮಿಸು” ಎಂದು ಪ್ರಾರ್ಥಿಸಿದನು.


ಜೆರುಸಲೇಮಿನಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲು ಎಷ್ಟೋ ಮಂದಿ ಜೆರುಸಲೇಮಿಗೆ ಎರಡನೆಯ ತಿಂಗಳಲ್ಲಿ ಬಂದರು. ಅದು ಮಹಾ ಜನಸಮೂಹವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು