Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:8 - ಪರಿಶುದ್ದ ಬೈಬಲ್‌

8 ಮೋಶೆಯು ಅವರಿಗೆ, “ಇಲ್ಲೇ ಇರಿ. ಇದರ ವಿಷಯದಲ್ಲಿ ಯೆಹೋವನು ಏನು ಹೇಳುತ್ತಾನೆಂದು ನಾನು ಆತನನ್ನು ವಿಚಾರಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಮೋಶೆ ಅವರಿಗೆ, “ಸ್ವಲ್ಪ ಕಾದುಕೊಂಡಿರಿ. ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರಿಗೆ ಮೋಶೆ, “ಸ್ವಲ್ಪ ತಾಳಿ, ಸರ್ವೇಶ್ವರ ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ಎಂದು ವಿಚಾರಿಸುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸ್ವಲ್ಪ ಕಾದು ಕೊಂಡಿರ್ರಿ; ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮೋಶೆ ಅವರಿಗೆ, “ಸ್ವಲ್ಪ ಕಾಯಿರಿ, ಯೆಹೋವ ದೇವರು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ನಾನು ಕೇಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:8
19 ತಿಳಿವುಗಳ ಹೋಲಿಕೆ  

ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು. ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ ಇರುವುದೆಂದು ಆತನು ಹೇಳಿದನು. ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು.


ಮೋಶೆಯು ಇದರ ವಿಷಯದಲ್ಲಿ ತಾನು ಏನು ಮಾಡಬೇಕೆಂದು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಲಾಗಿ,


ನಾನು ಪ್ರಭುವಿನಿಂದ ಹೊಂದಿಕೊಂಡದ್ದನ್ನೇ ನಿಮಗೆ ಉಪದೇಶಿಸಿದೆನು. ಅದೇನೆಂದರೆ: ಯೇಸುವನ್ನು ಕೊಲ್ಲುವುದಕ್ಕಾಗಿ ಒಪ್ಪಿಸಿಕೊಟ್ಟ ರಾತ್ರಿಯಲ್ಲಿ, ಆತನು ರೊಟ್ಟಿಯನ್ನು ತೆಗೆದುಕೊಂಡು,


ನಾನು ತಪ್ಪುಮಾಡಿದ್ದೇನೆಂದು ನನ್ನ ಮನಸ್ಸಾಕ್ಷಿಗೆ ತೋರುತ್ತಿಲ್ಲ. ಅದು ನನ್ನನ್ನು ನಿರ್ದೋಷಿಯನ್ನಾಗಿ ಮಾಡಲಾರದು. ನನಗೆ ನ್ಯಾಯನಿರ್ಣಯ ಮಾಡುವವನು ಪ್ರಭುವೊಬ್ಬನೇ.


ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.


ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.


ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.


“ನರಪುತ್ರನೇ, ನಾನು ನಿನ್ನನ್ನು ಇಸ್ರೇಲರಿಗೆ ಕಾವಲುಗಾರನನ್ನಾಗಿ ಮಾಡಿದ್ದೇನೆ. ನಾನು ಅವರಿಗೆ ಸಂಭವಿಸುವ ಕೆಟ್ಟ ವಿಷಯಗಳನ್ನು ನಿನಗೆ ಹೇಳುತ್ತಿದ್ದೇನೆ. ಮತ್ತು ನೀನು ನನ್ನ ಪರವಾಗಿ ಅವರನ್ನು ಎಚ್ಚರಿಸು.


ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನ್ನು ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು.


ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.


ನೀವು ಈ ಯುದ್ಧದಲ್ಲಿ ಹೋರಾಡುವ ಅವಶ್ಯವಿಲ್ಲ. ನಿಮ್ಮ ಸ್ಥಳಗಳಲ್ಲಿ ಸ್ಥಿರವಾಗಿ ನಿಂತುಕೊಂಡಿರಿ. ಯೆಹೋವನ ರಕ್ಷಣಾಕಾರ್ಯವನ್ನು ನೀವು ನೋಡುವಿರಿ. ಭಯಪಡಬೇಡಿರಿ; ಚಿಂತೆಗೊಳಗಾಗಬೇಡಿರಿ; ಯೆಹೋವನು ನಿಮ್ಮೊಂದಿಗಿದ್ದಾನೆ. ಆದ್ದರಿಂದ ನೀವು ನಾಳೆ ಹೋಗಿ ಆ ಸೈನ್ಯವನ್ನು ಎದುರಿಸಿರಿ’” ಎಂದು ಹೇಳಿದನು.


ಆದರೆ ಮೋಶೆ ಆ ಜನರಿಗೆ, “ಭಯಪಡಬೇಡಿರಿ! ಓಡಿಹೋಗಬೇಡಿರಿ! ಇಲ್ಲೇ ಇದ್ದು ಯೆಹೋವನು ಈ ದಿನ ನಿಮ್ಮನ್ನು ರಕ್ಷಿಸುವುದನ್ನು ನೋಡಿರಿ. ಈ ದಿನದ ನಂತರ ನೀವು ಇನ್ನೆಂದಿಗೂ ಈ ಈಜಿಪ್ಟಿನವರನ್ನು ನೋಡುವುದಿಲ್ಲ.


ಆಗ ಮೋಶೆ ತನ್ನ ಮಾವನಿಗೆ, “ಜನರು ನನ್ನ ಬಳಿಗೆ ಬಂದು ದೇವರ ತೀರ್ಮಾನವನ್ನು ಕೇಳಬಯಸುತ್ತಾರೆ.


“ನಾವು ಮನುಷ್ಯ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದೇವೆ. ಆದರೆ ನೇಮಕವಾದ ಕಾಲದಲ್ಲಿ ಯೆಹೋವನ ಪಸ್ಕಹಬ್ಬದ ಯಜ್ಞವನ್ನು ಇತರ ಇಸ್ರೇಲರೊಡನೆ ಅರ್ಪಿಸುವುದಕ್ಕೆ ಸಾಧ್ಯವಿಲ್ಲವೇ?” ಎಂದು ಕೇಳಿದರು.


ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಅವನನ್ನು ಶಿಕ್ಷಿಸಬೇಕಾದ ವಿಧಿಯನ್ನು ಅವರು ತಿಳಿಯದೆ ಇದ್ದುದರಿಂದ ಅವನನ್ನು ಕಾವಲಲ್ಲಿಟ್ಟರು.


ಜನರು ಅವನನ್ನು ಸೆರೆಹಿಡಿದು, ಯೆಹೋವನ ಸ್ಪಷ್ಟವಾದ ಆಜ್ಞೆಗಾಗಿ ಕಾದುಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು