Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:12 - ಪರಿಶುದ್ದ ಬೈಬಲ್‌

12 ಸಸಿಗಳು ಭೂಮಿಯ ಮೇಲೆ ಬೆಳೆದವು. ಅವುಗಳಲ್ಲಿ ಬೀಜ ಫಲಿಸುವ ಗಿಡಗಳೂ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಮರಗಳೂ ಇದ್ದವು. ಪ್ರತಿಯೊಂದು ಸಸಿಯು ತನ್ನದೇ ಆದ ರೀತಿಯ ಬೀಜವನ್ನು ಫಲಿಸಿತು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಭೂಮಿಯಲ್ಲಿ ಸಸ್ಯಗಳು ಬೆಳೆದವು; ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ಬಿಡುವ ಗಿಡಮರಬಳ್ಳಿಗಳು ಕಾಣಿಸಿಕೊಂಡವು. ದೇವರ ಕಣ್ಣಿಗೆ ಅವು ಚೆನ್ನಾಗಿ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಭೂವಿುಯಲ್ಲಿ ಹುಲ್ಲು ಬೆಳೆಯಿತು; ತಮ್ಮತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು; ತಮ್ಮತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಕಾಣಿಸಿದವು. ದೇವರು ಅದನ್ನು ಒಳ್ಳೇದೆಂದು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಭೂಮಿಯ ಮೇಲೆ ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು ಮತ್ತು ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನು ಮೊಳೆಯಿಸಿದವು. ದೇವರು ಅದನ್ನು ಒಳ್ಳೆಯದೆಂದು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:12
11 ತಿಳಿವುಗಳ ಹೋಲಿಕೆ  

ಭೂಮಿಯು ಮೊದಲು ಸಸಿಯನ್ನೂ ಅನಂತರ ಹೊಡೆಯನ್ನೂ ತರುವಾಯ ತೆನೆತುಂಬ ಕಾಳನ್ನೂ ತನ್ನಷ್ಟಕ್ಕೇ ತಾನೇ ಉತ್ಪತ್ತಿಮಾಡುತ್ತದೆ.


ಪ್ರತಿಯೊಂದು ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು. ಜನರು ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನಾಗಲಿ ಪೊದೆಗಳಲ್ಲಿ ದ್ರಾಕ್ಷಿಹಣ್ಣುಗಳನ್ನಾಗಲಿ ಪಡೆಯುವುದಿಲ್ಲ!


ಮೋಸಹೋಗಬೇಡಿರಿ! ನೀವು ದೇವರನ್ನು ವಂಚಿಸಲು ಸಾಧ್ಯವಿಲ್ಲ. ಒಬ್ಬನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯುತ್ತಾನೆ.


ಬಿತ್ತುವವನಿಗೆ ಬೀಜವನ್ನು ಕೊಡುವವನು ದೇವರೇ. ಆತನು ಆಹಾರಕ್ಕಾಗಿ ರೊಟ್ಟಿಯನ್ನು ಕೊಡುವನು. ಅಂತೆಯೇ, ದೇವರು ಆತ್ಮಿಕ ಬೀಜವನ್ನು ಕೊಡುವನು ಮತ್ತು ನಿಮ್ಮ ಬೀಜವನ್ನು ಬೆಳೆಯಮಾಡುವನು. ನಿಮ್ಮ ಒಳ್ಳೆಯ ಕ್ರಿಯೆಯಿಂದ ಆತನು ಮಹಾ ಸುಗ್ಗಿಯನ್ನು ಉಂಟುಮಾಡುವನು.


ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ಯೆಹೋವನು ಎಲ್ಲಾ ಜನಾಂಗಗಳಲ್ಲಿ ನೀತಿಯನ್ನೂ ಸ್ತೋತ್ರವನ್ನೂ ಬೆಳೆಸುತ್ತಾನೆ.


ಆ ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.


ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು.


ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೂರನೆ ದಿನವಾಯಿತು.


ನೀನು ಪಶುಗಳಿಗೋಸ್ಕರ ಹುಲ್ಲನ್ನು ಬೆಳೆಯ ಮಾಡುವೆ. ನಾವು ದುಡಿದು ಬೆಳೆಸುವುದಕ್ಕಾಗಿ ಸಸಿಗಳನ್ನು ಕೊಟ್ಟಿರುವೆ. ಅವು ಬೆಳೆದು ನಮಗೆ ಆಹಾರವನ್ನು ಒದಗಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು