Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:14 - ಪರಿಶುದ್ದ ಬೈಬಲ್‌

14 ಬಳಿಕ ದೇವರು, “ಆಕಾಶದಲ್ಲಿ ಬೆಳಕುಗಳು ಉಂಟಾಗಲಿ. ಈ ಬೆಳಕುಗಳು ಹಗಲುರಾತ್ರಿಗಳನ್ನು ಬೇರ್ಪಡಿಸಲಿ. ಈ ಬೆಳಕುಗಳು ವಿಶೇಷವಾದ ಗುರುತುಗಳಾಗಿದ್ದು, ವಿಶೇಷವಾದ ಸಮಯಗಳನ್ನೂ ದಿನಗಳನ್ನೂ ವರ್ಷಗಳನ್ನೂ ತೋರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಳಿಕ ದೇವರು - ಆಕಾಶಮಂಡಲದಲ್ಲಿ ಬೆಳಕುಗಳು ಉಂಟಾಗಲಿ; ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ; ಇದಲ್ಲದೆ ಅವು ಗುರುತುಗಳಾಗಿದ್ದು ಸಮಯಗಳನ್ನೂ ದಿನಸಂವತ್ಸರಗಳನ್ನೂ ತೋರಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅನಂತರ ದೇವರು, “ಹಗಲನ್ನು ರಾತ್ರಿಯಿಂದ ಪ್ರತ್ಯೇಕಿಸುವುದಕ್ಕೆ ಆಕಾಶಮಂಡಲದಲ್ಲಿ ಬೆಳಕುಗಳಿರಲಿ; ಅವು ಕಾಲಗಳನ್ನೂ ದಿನ ಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:14
43 ತಿಳಿವುಗಳ ಹೋಲಿಕೆ  

ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು.


ಯೆಹೋವನು ಹೀಗೆನ್ನುತ್ತಾನೆ: “ಹಗಲಿನಲ್ಲಿ ಸೂರ್ಯನು ಪ್ರಕಾಶಿಸುವಂತೆ ಮಾಡುವಾತನೂ ರಾತ್ರಿಯಲ್ಲಿ ಚಂದ್ರನೂ ನಕ್ಷತ್ರಗಳೂ ಪ್ರಕಾಶಿಸುವಂತೆ ಮಾಡುವಾತನೂ ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸುವಂತೆ ಸಮುದ್ರವನ್ನು ಕೆರಳಿಸುವಾತನೂ ಸರ್ವಶಕ್ತನಾದ ಯೆಹೋವನೆಂಬ ಹೆಸರಿನಿಂದ ಪ್ರಖ್ಯಾತನೂ ಆಗಿರುವ ಯೆಹೋವನು.”


ಸೂರ್ಯಚಂದ್ರರೇ, ಆತನನ್ನು ಸ್ತುತಿಸಿರಿ! ಆಕಾಶದಲ್ಲಿರುವ ನಕ್ಷತ್ರಗಳೇ, ಬೆಳಕುಗಳೇ, ಆತನನ್ನು ಸ್ತುತಿಸಿರಿ! ಆತನಿಗೆ ಸ್ತೋತ್ರಮಾಡಿರಿ! ಆತನ ಸರ್ವಸೈನ್ಯಗಳೇ ಆತನನ್ನು ಸ್ತುತಿಸಿರಿ!


ಇವುಗಳೆಲ್ಲಾ ಶಾಶ್ವತವಾಗಿರುವಂತೆ ಆತನು ಮಾಡಿದನು. ಎಂದಿಗೂ ಕೊನೆಗೊಳ್ಳದ ನಿಯಮಗಳನ್ನು ಆತನು ಮಾಡಿದನು.


ಸೂರ್ಯಚಂದ್ರರು ಕತ್ತಲಾಗುವರು, ನಕ್ಷತ್ರಗಳು ಹೊಳೆಯುವುದಿಲ್ಲ.


ಯೆಹೋವನು ಹೀಗೆ ಹೇಳುತ್ತಾನೆ: “ಬೇರೆ ಜನಾಂಗಗಳಂತೆ ಜೀವಿಸಬೇಡಿ. ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಬೇಡಿರಿ. ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಬೇರೆ ಜನಾಂಗಗಳು ಹೆದರುತ್ತವೆ. ಆದರೆ ನೀವು ಅವುಗಳಿಗೆ ಹೆದರಬಾರದು.


ಅಮಾವಾಸ್ಯೆಯಲ್ಲಿಯೂ ನಮ್ಮ ರಜಾಕಾಲವಾದ ಪೂರ್ಣಿಮೆಯಲ್ಲಿಯೂ ತುತ್ತೂರಿಯನ್ನು ಊದಿರಿ.


ಭೂಮಿ ಇರುವವರೆಗೆ ಬಿತ್ತನೆಕಾಲ, ಸುಗ್ಗಿಕಾಲ ಯಾವಾಗಲೂ ಇರುತ್ತವೆ. ಹಿಮಕಾಲ, ಬೇಸಿಗೆಕಾಲ, ಚಳಿಗಾಲ, ಹಗಲು ಮತ್ತು ರಾತ್ರಿ ಯಾವಾಗಲೂ ಇದ್ದೇ ಇರುತ್ತವೆ” ಎಂದು ಅಂದುಕೊಂಡನು.


ಆಕಾಶಮಂಡಲದ ಕಡೆಗೆ ನೋಡಿರಿ! ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? ಆಕಾಶದಲ್ಲಿರುವ ಆ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. ಆದ್ದರಿಂದ ಆ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ.


“ಆ ದಿನಗಳ ಸಂಕಟವು ತೀರಿದ ಕೂಡಲೇ, ‘ಸೂರ್ಯನು ಕತ್ತಲಾಗುವನು. ಚಂದ್ರನು ಕಾಂತಿಹೀನನಾಗುವನು. ನಕ್ಷತ್ರಗಳು ಆಕಾಶದಿಂದ ಕಳಚಿಬೀಳುವವು. ಆಕಾಶಮಂಡಲವು ಕಂಪಿಸುವುದು.’


ಯೆಹೋವನು ಹೀಗೆನ್ನುತ್ತಾನೆ, “ಆ ದಿವಸಗಳಲ್ಲಿ ನಡುಮಧ್ಯಾಹ್ನದಲ್ಲಿಯೇ ಸೂರ್ಯನನ್ನು ಮುಳುಗುವಂತೆ ಮಾಡುವೆನು. ಶುಭ್ರವಾದ ಹಗಲಿನಲ್ಲಿ ಕತ್ತಲು ಉಂಟಾಗುವಂತೆ ಮಾಡುವೆನು.


ಅವರ ಮುಂದೆ ಭೂಮಿಯೂ ಆಕಾಶವೂ ನಡುಗುವುದು; ಸೂರ್ಯಚಂದ್ರರು ಕಪ್ಪಾಗಿಹೋಗುವರು; ನಕ್ಷತ್ರಗಳು ಹೊಳಪನ್ನು ಕಳೆದುಕೊಳ್ಳುವುದು.


ಯೆಹೋವನು ಹೀಗೆ ಹೇಳಿದನು: “ಹಗಲು ಮತ್ತು ರಾತ್ರಿಗಳ ಜೊತೆ ನಾನೊಂದು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವುಗಳು ಶಾಶ್ವತವಾಗಿ ಮುಂದುವರಿಯಲು ನಾನು ಒಪ್ಪಿಕೊಂಡಿದ್ದೇನೆ. ನೀವು ಆ ಒಡಂಬಡಿಕೆಯನ್ನು ಬದಲಾಯಿಸಲು ಸಾಧ್ಯವಿಲ್ಲ. ನೀವು ಆ ಒಡಂಬಡಿಕೆಯನ್ನು ಬದಲಾಯಿಸಬಹುದಾದರೆ


ಆ ಕುರಿಮರಿಯು ಆರನೆಯ ಮುದ್ರೆಯನ್ನು ತೆರೆಯುವುದನ್ನು ನಾನು ನೋಡುತ್ತಲೇ ಇದ್ದೆನು. ಆಗ ಮಹಾಭೂಕಂಪವಾಯಿತು. ಸೂರ್ಯನು ಕಪ್ಪು ಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


ಆ ಜ್ಞಾನಿಗಳು ಜನರಿಗೆ, “ಯೆಹೂದ್ಯರ ರಾಜನು ಹುಟ್ಟಿದ್ದಾನಲ್ಲವೇ? ಆತನೆಲ್ಲಿ? ಆತನು ಹುಟ್ಟಿದನೆಂದು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಆತನನ್ನು ಆರಾಧಿಸಲು ಬಂದೆವು” ಅಂದರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಳಗಿನ ಪ್ರಾಕಾರದ ಪೂರ್ವ ದಿಕ್ಕಿನ ದ್ವಾರವು ಆರು ಕೆಲಸದ ದಿವಸಗಳಲ್ಲಿ ಮುಚ್ಚಲ್ಪಡುವದು. ಅದು ಸಬ್ಬತ್ ದಿವಸಗಳಲ್ಲಿಯೂ ಅಮಾವಾಸ್ಯೆಯ ದಿವಸಗಳಲ್ಲಿಯೂ ತೆರೆಯಲ್ಪಡುವದು.


ಯೆಹೋವನು ಹೀಗೆನ್ನುತ್ತಾನೆ: “ಹಗಲಿರುಳುಗಳ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆ ಸ್ಥಿರವಾಗಿಲ್ಲದಿದ್ದರೆ ಮತ್ತು ಭೂಮ್ಯಾಕಾಶಗಳಿಗೆ ನಾನು ಕಟ್ಟಳೆಗಳನ್ನೇ ವಿಧಿಸಿಲ್ಲದಿದ್ದರೆ


ದೇವರ ದೃಷ್ಟಿಯಲ್ಲಿ ಚಂದ್ರನು ಸಹ ಪ್ರಕಾಶವಾಗಿಲ್ಲ; ನಕ್ಷತ್ರಗಳು ಸಹ ಪರಿಶುದ್ಧವಲ್ಲ.


ನಾನು ಮೋಡಗಳಲ್ಲಿ ಇಟ್ಟಿರುವ ಮುಗಿಲುಬಿಲ್ಲು ನನಗೂ ಭೂಮಿಗೂ ಆಗಿರುವ ಒಡಂಬಡಿಕೆಗೆ ಗುರುತಾಗಿರುವುದು.


ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಸೂರ್ಯನಲ್ಲಿ ಮೂರನೆಯ ಒಂದು ಭಾಗ, ಚಂದ್ರನಲ್ಲಿ ಮೂರನೆಯ ಒಂದು ಭಾಗ ಮತ್ತು ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗ ಬಡಿಯಲ್ಪಟ್ಟು ಅವುಗಳಲ್ಲಿ ಮೂರನೆಯ ಒಂದು ಭಾಗ ಕತ್ತಲಾಯಿತು. ಹಗಲಿನಲ್ಲಿಯೂ ರಾತ್ರಿಯಲ್ಲಿಯೂ ಮೂರನೆಯ ಒಂದು ಭಾಗಕ್ಕೆ ಬೆಳಕಿಲ್ಲದಂತಾಯಿತು.


ಸೂರ್ಯನ ಬೆಳಕೇ ಇರಲಿಲ್ಲ! ದೇವಾಲಯದ ಪರದೆಯು ಎರಡು ಭಾಗವಾಗಿ ಹರಿದುಹೋಯಿತು.


“ಈ ಸಂಕಟವು ತೀರಿದ ಮೇಲೆ, ‘ಸೂರ್ಯನು ಕತ್ತಲಾಗುತ್ತಾನೆ. ಚಂದ್ರನು ಬೆಳಕನ್ನು ಕೊಡುವುದಿಲ್ಲ.


“ಅಮಾವಾಸ್ಯೆ ದಿವಸ ಅವನು ಒಂದು ಎಳೇ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಅದರ ಜೊತೆಗೆ ಆರು ಪೂರ್ಣಾಂಗವಾದ ಕುರಿಗಳನ್ನೂ ಒಂದು ಪೂರ್ಣಾಂಗವಾದ ಟಗರನ್ನೂ ಸಮರ್ಪಿಸಬೇಕು.


ನಿನ್ನ ಆಜ್ಞೆಗಳಿಗನುಸಾರವಾಗಿ ಅದು ಸ್ಥಿರವಾಗಿಯೇ ಇದೆ. ಅವುಗಳೆಲ್ಲಾ ಸೇವಕರಂತೆ ನಿನ್ನ ಆಜ್ಞೆಗಳಿಗೆ ವಿಧೇಯವಾಗಿವೆ.


ಯಾವನೂ ಆತನ ಸೈನ್ಯಗಳನ್ನು ಲೆಕ್ಕಿಸಲಾರನು. ಆತನ ಸೂರ್ಯನು ಜನರೆಲ್ಲರ ಮೇಲೆ ಉದಯಿಸುವನು.


ಆ ದಿನದ ಮುಂಜಾನೆಯ ನಕ್ಷತ್ರಗಳು ಕತ್ತಲಾಗಲಿ. ಅದು ಮುಂಜಾನೆಯ ಬೆಳಕಿಗಾಗಿ ಎದುರುನೋಡಿದರೂ ಹೊಂದದಿರಲಿ. ಅದು ಸೂರ್ಯೋದಯದ ಕಿರಣಗಳನ್ನು ನೋಡದಿರಲಿ.


ನಂತರ ಆ ನಕ್ಷತ್ರವು ತಳವಿಲ್ಲದ ಆಳವಾದ ಕೂಪವನ್ನು ತೆರೆಯಿತು. ದೊಡ್ಡ ಕುಲುಮೆಯಿಂದ ಹೊಗೆಯು ಬರುವಂತೆ ಆ ಕೂಪದಿಂದ ಹೊಗೆ ಮೇಲಕ್ಕೆ ಬಂದಿತು. ಆ ಕೂಪದಿಂದ ಬಂದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾದವು.


ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೂರನೆ ದಿನವಾಯಿತು.


ಈ ಬೆಳಕುಗಳು ಆಕಾಶದಲ್ಲಿದ್ದು ಭೂಮಿಯ ಮೇಲೆ ಬೆಳಕನ್ನು ಪ್ರಕಾಶಿಸಲಿ” ಅಂದನು. ಹಾಗೆಯೇ ಆಯಿತು.


ಯೆಹೋವನಿಗೆ ಸ್ತೋತ್ರವಾಗಲಿ! ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು