Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:20 - ಪರಿಶುದ್ದ ಬೈಬಲ್‌

20 ಬಳಿಕ ದೇವರು, “ನೀರಿನಲ್ಲಿ ಅನೇಕ ಜಲಚರಗಳು ತುಂಬಿಕೊಳ್ಳಲಿ. ಭೂಮಿಯ ಮೇಲೆ ಆಕಾಶದಲ್ಲಿ ಪಕ್ಷಿಗಳು ಹಾರಾಡಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಮೇಲೆ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತರುವಾಯ ದೇವರು - ಗುಂಪುಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಅಂತರಿಕ್ಷದೊಳಗೆ ಹಾರಾಡಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಮೇಲೆ ದೇವರು, “ನೀರಿನಲ್ಲಿ ಜೀವಜಂತುಗಳು ತುಂಬಿಕೊಳ್ಳಲಿ, ಭೂಮಿಯ ಮೇಲೆ ಆಕಾಶಮಂಡಲದಲ್ಲಿ ಪಕ್ಷಿಗಳು ಹಾರಾಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:20
17 ತಿಳಿವುಗಳ ಹೋಲಿಕೆ  

ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿ ಮನುಷ್ಯನ ಬಳಿಗೆ ಬರಮಾಡಿದನು. ಅವುಗಳಿಗೆಲ್ಲಾ ಮನುಷ್ಯನು ಹೆಸರಿಟ್ಟನು.


ಸೊಲೊಮೋನನು ಪ್ರಕೃತಿಯ ಬಗ್ಗೆಯೂ ಹೆಚ್ಚಾಗಿ ತಿಳಿದುಕೊಂಡನು. ಸೊಲೊಮೋನನು ಲೆಬನೋನಿನ ದೇವದಾರು ವೃಕ್ಷಗಳಿಂದ ಮೊದಲುಗೊಂಡು ಗೋಡೆಗಳಲ್ಲಿ ಬೆಳೆಯುವ ಗಿಡಗಳವರೆಗೆ, ವಿವಿಧ ರೀತಿಯ ಸಸ್ಯಗಳ ಬಗ್ಗೆ ಪ್ರಸ್ತಾಪಿಸಿದನು. ರಾಜನಾದ ಸೊಲೊಮೋನನು ಪ್ರಾಣಿಗಳ, ಪಕ್ಷಿಗಳ ಮತ್ತು ಹರಿದಾಡುವ ಜಂತುಗಳ ಬಗ್ಗೆಯೂ ಪ್ರಸ್ತಾಪಿಸಿದನು.


ಆತನು ಎಲ್ಲಾ ಕಾಡುಪ್ರಾಣಿಗಳನ್ನೂ ಪಶುಗಳನ್ನೂ ಕ್ರಿಮಿಕೀಟಗಳನ್ನೂ ಪಕ್ಷಿಗಳನ್ನೂ ಸೃಷ್ಟಿಮಾಡಿದನು.


ಭೂಮಿಯ ಮೇಲಿರುವ ಪ್ರಾಣಿಗಳಿಗೆಲ್ಲಾ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆಲ್ಲಾ ಭೂಮಿಯ ಮೇಲೆ ಹರಿದಾಡುವ ಕ್ರಿಮಿಕೀಟಗಳಿಗೆಲ್ಲಾ ಆಹಾರಕ್ಕಾಗಿ ಸಸ್ಯರಾಶಿಯನ್ನು ಕೊಟ್ಟಿದ್ದೇನೆ” ಅಂದನು. ಹಾಗೆಯೇ ಆಯಿತು.


ನಿಮ್ಮೊಡನೆ ನಾವೆಯೊಳಗಿದ್ದ ಎಲ್ಲಾ ಜೀವಿಗಳು ಅಂದರೆ ಎಲ್ಲಾ ಪಕ್ಷಿಗಳು, ಪ್ರಾಣಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ ಹೊರಗೆ ಬರಲಿ. ಅವುಗಳ ಸಂತಾನವು ಹೆಚ್ಚೆಚ್ಚಾಗಲಿ; ಭೂಮಿಯ ಮೇಲೆಲ್ಲಾ ಅವು ತುಂಬಿಕೊಳ್ಳಲಿ” ಅಂದನು.


ಇದಲ್ಲದೆ ದೇವರು, “ಜಲಚರಗಳು ಅಸಂಖ್ಯಾತವಾಗಿ ಸಮುದ್ರಗಳನ್ನು ತುಂಬಿಕೊಳ್ಳಲಿ; ಪಕ್ಷಿಗಳು ಅಸಂಖ್ಯಾತವಾಗಿ ಭೂಮಿಯಲ್ಲೆಲ್ಲಾ ಹರಡಿಕೊಳ್ಳಲಿ” ಎಂದು ಹೇಳಿ ಆಶೀರ್ವದಿಸಿದನು.


ಬಳಿಕ ದೇವರು, “ಆಕಾಶದಲ್ಲಿ ಬೆಳಕುಗಳು ಉಂಟಾಗಲಿ. ಈ ಬೆಳಕುಗಳು ಹಗಲುರಾತ್ರಿಗಳನ್ನು ಬೇರ್ಪಡಿಸಲಿ. ಈ ಬೆಳಕುಗಳು ವಿಶೇಷವಾದ ಗುರುತುಗಳಾಗಿದ್ದು, ವಿಶೇಷವಾದ ಸಮಯಗಳನ್ನೂ ದಿನಗಳನ್ನೂ ವರ್ಷಗಳನ್ನೂ ತೋರಿಸಲಿ.


ಹೀಗೆ ದೇವರು ಗುಮಟವನ್ನು ಉಂಟುಮಾಡಿ ಅದರ ಕೆಳಭಾಗದ ನೀರುಗಳನ್ನು ಅದರ ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಿದನು.


ಮನುಷ್ಯರಿಗೆ ಜೀವವನ್ನೂ ಉಸಿರನ್ನೂ ಸಮಸ್ತವನ್ನೂ ಕೊಡುವಾತನು ಆ ದೇವರೇ. ಆತನಿಗೆ ಜನರ ಸೇವೆಯ ಅಗತ್ಯವೇನೂ ಇಲ್ಲ. ಆತನಿಗೆ ಕೊರತೆಯೆಂಬುದೂ ಇಲ್ಲ.


ಒಬ್ಬನು ತನ್ನ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ಕಾರ್ಯವನ್ನು ಸಫಲಗೊಳಿಸಿದ ಮೇಲೆ ಅದರ ಫಲವನ್ನು ಪ್ರಯಾಸಪಡದ ಬೇರೊಬ್ಬನಿಗೆ ಬಿಟ್ಟು ಹೋಗಬೇಕಾಗುವುದು. ಇದೂ ವ್ಯರ್ಥವೂ ಅನ್ಯಾಯವೂ ಆಗಿದೆ.


ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ನಾಲ್ಕನೆ ದಿನವಾಯಿತು.


ಹೀಗೆ ದೇವರು ಸಮುದ್ರದ ಬೃಹದಾಕಾರದ ಪ್ರಾಣಿಗಳನ್ನು, ಸಮುದ್ರದಲ್ಲಿ ಚಲಿಸುವ ಪ್ರತಿಯೊಂದು ಬಗೆಯ ಜೀವಿಗಳನ್ನು ಮತ್ತು ರೆಕ್ಕೆಗಳುಳ್ಳ ಪ್ರತಿಯೊಂದು ಬಗೆಯ ಪಕ್ಷಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.


ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯು ಸತ್ತುಹೋಯಿತು. ಎಲ್ಲಾ ಪುರುಷರು ಮತ್ತು ಸ್ತ್ರೀಯರು ಸತ್ತುಹೋದರು. ಎಲ್ಲಾ ಪಕ್ಷಿಗಳು, ಪಶುಗಳು, ಪ್ರಾಣಿಗಳು ಮತ್ತು ಪ್ರತಿಯೊಂದು ಬಗೆಯ ಕ್ರಿಮಿಗಳು ಸತ್ತುಹೋದವು.


ಹೊಟ್ಟೆಯ ಮೇಲೆ ತೆವಳಿಕೊಂಡು ಹೋಗುವ ಜಂತುವನ್ನು ಅಥವಾ ತನ್ನ ನಾಲ್ಕು ಕಾಲುಗಳಲ್ಲಿ ನಡೆಯುವ ಜಂತುವನ್ನು ಅಥವಾ ಅನೇಕ ಕಾಲುಗಳುಳ್ಳ ಜಂತುಗಳನ್ನು ನೀವು ತಿನ್ನಬಾರದು.


ಆ ಜಂತುಗಳು ನಿಮ್ಮನ್ನು ಹೊಲೆ ಮಾಡದಿರಲಿ. ನೀವು ಅಶುದ್ಧರಾಗಬಾರದು.


ಇದನ್ನು ಮಾಡಿದಾತನು ಯೆಹೋವನೇ ಎಂಬುದು ಈ ಸೃಷ್ಟಿಗಳಲ್ಲಿ ಪ್ರತಿಯೊಂದಕ್ಕೂ ಗೊತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು