Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:4 - ಪರಿಶುದ್ದ ಬೈಬಲ್‌

4 ಬಳಿಕ ಅವರು, “ನಾವು ನಮಗಾಗಿ ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವಂಥ ಗೋಪುರವನ್ನೂ ಕಟ್ಟಿದರೆ ನಾವು ಪ್ರಸಿದ್ಧರಾಗುತ್ತೇವೆ. ಆಗ ನಾವು ಭೂಮಿಯಲ್ಲೆಲ್ಲಾ ಚದರಿಹೋಗದೆ ಒಂದೇ ಸ್ಥಳದಲ್ಲಿ ವಾಸಿಸಲು ಸಾಧ್ಯವಾಗುತ್ತದೆ” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಒಂದು ಪಟ್ಟಣವನ್ನು ಕಟ್ಟೋಣ; ಆಕಾಶವನ್ನು ಮುಟ್ಟುವಂಥ ಗೋಪುರವನ್ನು ನಿರ್ಮಿಸಿ ಪ್ರಖ್ಯಾತಿ ಪಡೆಯೋಣ. ಹೀಗೆ ಮಾಡಿದರೆ ನಾವು ಜಗದಲ್ಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಿರುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಗಾರೆಗೆ (ಸುಣ್ಣಕ್ಕೆ) ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವ ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಪಡೆಯೋಣ; ಹೀಗೆ ಮಾಡಿದರೆ ಭೂವಿುಯ ಮೇಲೆಲ್ಲಾ ಚದರುವದಕ್ಕೆ ಆಸ್ಪದವಾಗುವದಿಲ್ಲ ಅಂದುಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಸುಣ್ಣಕ್ಕೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅನಂತರ ಅವರು, “ಬನ್ನಿರಿ, ನಾವು ಭೂಮಿಯ ಮೇಲೆ ಪಟ್ಟಣವನ್ನು ಕಟ್ಟೋಣ. ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನು ನಮಗೋಸ್ಕರವಾಗಿ ಕಟ್ಟಿಕೊಂಡು, ನಮಗೆ ಹೆಸರು ಸಂಪಾದಿಸಿಕೊಳ್ಳೋಣ. ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರುವುದಕ್ಕೆ ಆಸ್ಪದವಾಗುವದಿಲ್ಲ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:4
17 ತಿಳಿವುಗಳ ಹೋಲಿಕೆ  

ನಾವೀಗ ಎಲ್ಲಿಗೆ ಹೋಗೋಣ? ನಮ್ಮ ಸಹೋದರರು ತಮ್ಮ ವರದಿಯಿಂದ ನಮ್ಮನ್ನು ಹೆದರಿಸಿದ್ದಾರೆ. ಅಲ್ಲಿಯ ಜನರು ದೃಢಕಾಯರೂ ಬಲಶಾಲಿಗಳೂ ಎತ್ತರವಾದ ಪುರುಷರೂ ಆಗಿದ್ದಾರೆ. ಅವರ ಪಟ್ಟಣಗಳು ದೊಡ್ಡವುಗಳಾಗಿದ್ದು ಅವುಗಳ ಗೋಡೆಗಳು ಆಕಾಶಕ್ಕೆ ಮುಟ್ಟುವಷ್ಟು ಎತ್ತರವಾಗಿವೆ. ನಾವು ಅಲ್ಲಿ ಅನಾಕ್ಯರೆಂಬ ಮಹಾಶರೀರಗಳನ್ನು ನೋಡಿದೆವು!’ ಎಂದು ಅವರು ಹೇಳಿದಾಗ ನಾವು ಭಯದಿಂದ ತತ್ತರಿಸಿದೆವು.


ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ?


ಆತನು ತನ್ನ ಭುಜಬಲವನ್ನು ತೋರಿ ಗರ್ವಿಷ್ಠರನ್ನು ಚದರಿಸುತ್ತಾನೆ.


ನೀತಿವಂತರ ನೆನಪು ಆಶೀರ್ವಾದದಾಯಕ. ಕೆಡುಕರಾದರೋ ಬಹುಬೇಗನೆ ಮರೆಯಲ್ಪಡುವರು.


“ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ;


ದಾವೀದನು ಉಪ್ಪಿನ ಕಣಿವೆಯಲ್ಲಿ ಹದಿನೆಂಟು ಸಾವಿರ ಎದೋಮ್ಯರನ್ನು ಸೋಲಿಸಿದನು. ಅವನು ಮನೆಗೆ ಹಿಂದಿರುಗುವಷ್ಟರಲ್ಲಿ ಪ್ರಸಿದ್ಧನಾಗಿದ್ದನು.


ಆ ಮರವು ಬಹಳ ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಆ ಮರದ ತುದಿಯು ಆಕಾಶಕ್ಕೆ ಮುಟ್ಟಿತ್ತು. ಅದನ್ನು ಭೂಲೋಕದ ಯಾವ ಸ್ಥಳದಿಂದಲಾದರೂ ನೋಡಬಹುದಾಗಿತ್ತು.


ಅರಸನೇ, ನೀನೇ ಆ ಮರ. ನೀನು ಪ್ರಖ್ಯಾತನೂ ಮತ್ತು ಪ್ರಬಲನೂ ಆಗಿರುವೆ. ನೀನು ಗಗನಚುಂಬಿಯಾದ ಆ ಮರದಂತೆ ಬೆಳೆದಿರುವೆ. ನಿನ್ನ ಪ್ರಾಬಲ್ಯವು ಈ ಭೂಮಿಯಲ್ಲಿ ದೂರದೂರದವರೆಗೆ ಹಬ್ಬಿದೆ.


ಯೆಹೋವನೇ, ನಿನ್ನ ಶತ್ರುಗಳೆಲ್ಲ ನಾಶವಾಗುವರು; ಕೆಟ್ಟಕಾರ್ಯಗಳನ್ನು ಮಾಡುವ ಅವರೆಲ್ಲರೂ ನಾಶವಾಗುವರು.


ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದುಕೊಳ್ಳುವರು.


ಅಲೆಗಳು ಆಕಾಶದಷ್ಟು ಎತ್ತರವಾಗಿದ್ದವು. ಭಯಂಕರವಾದ ಬಿರುಗಾಳಿಯಿಂದ ಅವರು ಭಯಗೊಂಡರು.


ಬಾಬಿಲೋನ್ ನಗರವು ಗಗನ ಚುಂಬಿಯಾಗಿ ಬೆಳೆಯಬಹುದು. ಅದು ತನ್ನ ಕೋಟೆಗಳನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಆ ನಗರದ ವಿರುದ್ಧ ಯುದ್ಧಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಅದನ್ನು ನಾಶಮಾಡುವರು.” ಇದು ಯೆಹೋವನ ನುಡಿ.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು