Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:10 - ಪರಿಶುದ್ದ ಬೈಬಲ್‌

10 ಈ ಕಾಲದಲ್ಲಿ ಭೂಮಿಯು ಒಣಗಿಹೋಗಿತ್ತು; ಮಳೆ ಇರಲಿಲ್ಲ. ಅಲ್ಲಿ ಆಹಾರವನ್ನು ಬೆಳೆಯಲು ಸಾಧ್ಯವಿರಲಿಲ್ಲ. ಆದ್ದರಿಂದ ಅಬ್ರಾಮನು ವಾಸಿಸುವುದಕ್ಕಾಗಿ ಈಜಿಪ್ಟಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕಾನಾನ್ ನಾಡಿನಲ್ಲಿ ಕ್ಷಾಮ ತಲೆದೋರಿತು. ಅದು ಘೋರವಾಗಿದ್ದುದರಿಂದ ಅಬ್ರಾಮನು ಕೆಲವು ಕಾಲ ಈಜಿಪ್ಟಿನಲ್ಲಿರಲು ಅಲ್ಲಿಗೆ ಇಳಿದುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ದೇಶದಲ್ಲಿ ಘೋರ ಕ್ಷಾಮವಿದ್ದದರಿಂದ ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ, ಅಬ್ರಾಮನು ಈಜಿಪ್ಟಿನಲ್ಲಿ ಕೆಲವು ಸಮಯ ಇರಲು ಇಳಿದು ಹೋದನು. ಏಕೆಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:10
21 ತಿಳಿವುಗಳ ಹೋಲಿಕೆ  

ಬರಗಾಲವು ದೇಶದಲ್ಲಿ ತುಂಬ ಭೀಕರವಾಗಿತ್ತು.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ಆದರೆ ಈಜಿಪ್ಟಿನಲ್ಲಿ ಮತ್ತು ಕಾನಾನಿನಲ್ಲಿ ಬರಗಾಲ ಉಂಟಾಯಿತು. ಆಹಾರವಿಲ್ಲದೆ ನಮ್ಮ ಪಿತೃಗಳಿಗೆ ಬಹಳ ಕಷ್ಟವಾಯಿತು.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


ಇದು ಕ್ಷಾಮದ ಬಗ್ಗೆ ಯೆರೆಮೀಯನಿಗೆ ಯೆಹೋವನು ನುಡಿದ ಸಂದೇಶ:


ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.


ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಪ್ರಯಾಣ ಮಾಡಿದರು.


ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು.


ಜನರು ನಗರದೊಳಕ್ಕೆ ಆಹಾರವನ್ನು ತರಲು ಸೈನಿಕರು ಅವಕಾಶ ಕೊಡಲಿಲ್ಲ. ಆದ್ದರಿಂದ ಸಮಾರ್ಯದಲ್ಲಿ ಭೀಕರ ಬರಗಾಲವು ಆ ಕಾಲದಲ್ಲಾಯಿತು. ಸಮಾರ್ಯದಲ್ಲಿ ಒಂದು ಹೇಸರಕತ್ತೆಯ ತಲೆಯು ಎಂಭತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಾಟವಾಗುವಷ್ಟು ಕೆಟ್ಟ ಪರಿಸ್ಥಿತಿಯಿತ್ತು. ಅರ್ಧಸೇರು ಪಾರಿವಾಳದ ಮಲದ ಲದ್ದಿಯು ಐದು ಬೆಳ್ಳಿನಾಣ್ಯಗಳಿಗೆ ಮಾರಾಟವಾಗುತ್ತಿತ್ತು.


ಎಲೀಷನು ಗಿಲ್ಗಾಲಿಗೆ ಮತ್ತೆ ಬಂದನು. ಆಗ ಆ ದೇಶದಲ್ಲಿ ಬರಗಾಲವಿತ್ತು. ಪ್ರವಾದಿಗಳ ಗುಂಪು ಎಲೀಷನ ಎದುರಿನಲ್ಲಿ ಕುಳಿತಿದ್ದರು. ಎಲೀಷನು ತನ್ನ ಸೇವಕನಿಗೆ, “ಒಂದು ದೊಡ್ಡ ಪಾತ್ರೆಯನ್ನು ಒಲೆಯ ಮೇಲಿಟ್ಟು ಪ್ರವಾದಿಗಳ ಗುಂಪಿಗೆಲ್ಲ ಸಾರನ್ನು ಮಾಡು” ಎಂದು ಹೇಳಿದನು.


ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಈ ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದದ್ದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು.


ನ್ಯಾಯಾಧೀಶರು ಆಳುತ್ತಿದ್ದಾಗ ದೇಶದಲ್ಲಿ ಬರಗಾಲ ಬಂತು. ಆಗ ಎಲೀಮೆಲೆಕನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ಇಬ್ಬರು ಗಂಡುಮಕ್ಕಳೊಡನೆ ಯೆಹೂದಪ್ರಾಂತದ ಬೆತ್ಲೆಹೇಮ್ ನಗರವನ್ನು ಬಿಟ್ಟು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋದನು.


ಬರಗಾಲವು ಹೆಚ್ಚು ಭೀಕರವಾಯಿತು. ದೇಶದಲ್ಲಿ ಎಲ್ಲಿಯೂ ಆಹಾರ ಇರಲಿಲ್ಲ. ಈಜಿಪ್ಟ್ ಮತ್ತು ಕಾನಾನ್ ದೇಶಗಳು ಬರಗಾಲದಿಂದ ಬಡದೇಶಗಳಾದವು.


ಕಾನಾನಿನಲ್ಲಿ ಬರಗಾಲ ಭೀಕರವಾಗಿತ್ತು. ಆದ್ದರಿಂದ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಅನೇಕ ಜನರು ಕಾನಾನಿನಿಂದ ಈಜಿಪ್ಟಿಗೆ ಹೋದರು; ಇಸ್ರೇಲನ ಗಂಡುಮಕ್ಕಳೂ ಅವರೊಂದಿಗೆ ಹೋದರು.


ಭೂಲೋಕದಲ್ಲೆಲ್ಲಾ ಕ್ಷಾಮವು ಭಯಂಕರವಾಗಿದ್ದುದರಿಂದ ಎಲ್ಲಾ ದೇಶಗಳವರು ಯೋಸೇಫನಿಂದ ಆಹಾರವನ್ನು ಪಡೆದುಕೊಳ್ಳುವುದಕ್ಕಾಗಿ ಈಜಿಪ್ಟಿಗೆ ಬಂದರು.


ಎಲ್ಲೆಲ್ಲಿಯೂ ಬರಗಾಲವಾದಾಗ, ಯೋಸೇಫನು ಉಗ್ರಾಣಗಳನ್ನು ತೆಗೆಸಿ ದವಸಧಾನ್ಯಗಳನ್ನು ಜನರಿಗೆ ಮಾರಾಟ ಮಾಡಿಸಿದನು. ಈಜಿಪ್ಟಿನಲ್ಲಿ ಬರವು ಭೀಕರವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು