Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:3 - ಪರಿಶುದ್ದ ಬೈಬಲ್‌

3 ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 "ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:3
27 ತಿಳಿವುಗಳ ಹೋಲಿಕೆ  

ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ” ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ.


ನೀನು ನನಗೆ ವಿಧೇಯನಾದದ್ದರಿಂದ ನಿನ್ನ ಸಂತತಿಗಳವರ ಮೂಲಕವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜನಾಂಗವೂ ಆಶೀರ್ವಾದ ಹೊಂದುವುದು” ಎಂದು ಹೇಳಿದನು.


ಎಲ್ಲಾ ಜನರು ನಿನ್ನ ಸೇವೆಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡುಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”


ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ? ನಿಮ್ಮನ್ನು ಆಶೀರ್ವದಿಸುವವನು ಆಶೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು.”


ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.


ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.


ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು.


ಅಬ್ರಹಾಮನಿಂದ ಬಲಿಷ್ಠವಾದ ಮಹಾಜನಾಂಗ ಹುಟ್ಟುವುದು; ಅವನ ಮೂಲಕ ಈ ಲೋಕದ ಜನರೆಲ್ಲರೂ ಆಶೀರ್ವಾದ ಹೊಂದುವರು.


ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.


ಆತನು ಹೇಳುವ ಪ್ರತಿಯೊಂದಕ್ಕೆ ನೀವು ವಿಧೇಯರಾಗಬೇಕು. ನನ್ನ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. ಆಗ ನಾನು ನಿಮ್ಮ ಸಂಗಡ ಇರುವೆನು. ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿರುವೆನು; ನಿಮಗೆ ಕೇಡುಮಾಡುವವರಿಗೆಲ್ಲಾ ಕೇಡುಮಾಡುವೆನು.


ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.


ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.


ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.


ಲಾಬಾನನು ಅವನಿಗೆ, “ನಾನು ಹೇಳುವುದನ್ನು ಕೇಳು; ಯೆಹೋವನು ನಿನ್ನ ನಿಮಿತ್ತವಾಗಿ ನನ್ನನ್ನು ಆಶೀರ್ವದಿಸಿದ್ದಾನೆಂದು ನನಗೆ ತಿಳಿದಿದೆ.


ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.


ಪೋಟೀಫರನು ಯೋಸೇಫನಿಗೆ ಮನೆಯ ಮೇಲ್ವಿಚಾರಣೆಯನ್ನು ಕೊಟ್ಟು ಆಸ್ತಿಗೆ ಅವನನ್ನು ಜವಾಬ್ದಾರನನ್ನಾಗಿ ಮಾಡಿದ ಮೇಲೆ ಯೆಹೋವನು ಪೋಟೀಫರನ ಮನೆಯನ್ನೂ ಬೆಳೆಗಳನ್ನೂ ಆಸ್ತಿಯನ್ನೂ ಆಶೀರ್ವದಿಸಿದನು.


ನಾನು ಬಂದಾಗ ನಿನಗೆ ಸ್ವಲ್ಪವಿತ್ತು, ಈಗ ನಿನಗೆ ಬೇಕಾದಷ್ಟಿದೆ. ನಾನು ನಿನಗೋಸ್ಕರ ಮಾಡಿದ್ದನ್ನೆಲ್ಲ ಯೆಹೋವನು ಆಶೀರ್ವದಿಸಿದನು. ನಾನು ನನಗೋಸ್ಕರ ಕೆಲಸ ಮಾಡುವ ಸಮಯವಿದು. ನನ್ನ ಸ್ವಂತ ಮನೆಗೆ ಒದಗಿಸುವ ಸಮಯವಿದು” ಎಂದು ಹೇಳಿದನು.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡದಂತಾಯಿತು’ ಎಂದು ಉತ್ತರಕೊಡುವನು.


ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


ಯೆಹೋವನು ನನ್ನ ಒಡೆಯನನ್ನು ಪ್ರತಿಯೊಂದರಲ್ಲಿಯೂ ಬಹಳವಾಗಿ ಆಶೀರ್ವದಿಸಿದ್ದಾನೆ. ನನ್ನ ಒಡೆಯನು ಮಹಾವ್ಯಕ್ತಿಯಾಗಿದ್ದಾನೆ. ಯೆಹೋವನು ಅಬ್ರಹಾಮನಿಗೆ ಅನೇಕ ಕುರಿಹಿಂಡುಗಳನ್ನೂ ದನಕರುಗಳ ಮಂದೆಗಳನ್ನೂ ಕೊಟ್ಟಿದ್ದಾನೆ. ಅಬ್ರಹಾಮನಿಗೆ ಬೇಕಾದಷ್ಟು ಬೆಳ್ಳಿಬಂಗಾರಗಳಿವೆ. ಅನೇಕ ಸೇವಕರಿದ್ದಾರೆ. ಅನೇಕ ಒಂಟೆಗಳೂ ಕತ್ತೆಗಳೂ ಇವೆ.


ಅಬ್ರಹಾಮನು ತೀರಿಕೊಂಡ ಮೇಲೆ, ದೇವರು ಇಸಾಕನನ್ನು ಆಶೀರ್ವದಿಸಿದನು; ಇಸಾಕನು ಬೀರ್‌ಲಹೈರೋಯಿಯಲ್ಲಿ ತನ್ನ ಜೀವನವನ್ನು ಮುಂದುವರೆಸಿದನು.


ನಾವು ನಿನಗೆ ಕೇಡುಮಾಡಲಿಲ್ಲ. ಅದೇ ರೀತಿಯಲ್ಲಿ ಈಗ ನೀನೂ ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣಮಾಡಬೇಕು. ನಾವು ನಿನ್ನನ್ನು ದೂರ ಕಳುಹಿಸಿದರೂ ಸಮಾಧಾನದಿಂದ ಕಳುಹಿಸಿಕೊಟ್ಟೆವು. ಯೆಹೋವನು ನಿನ್ನನ್ನು ಆಶೀರ್ವದಿಸಿದ್ದಾನೆ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು