Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:8 - ಪರಿಶುದ್ದ ಬೈಬಲ್‌

8 ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿರಲು ಅಬ್ರಾಮನು ಲೋಟನಿಗೆ - ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಬ್ರಾಮನು ಲೋಟನಿಗೆ, “ನನಗೂ, ನಿನಗೂ; ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಿರಬಾರದು. ಏಕೆಂದರೆ ನಾವು ಬಳಗದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:8
30 ತಿಳಿವುಗಳ ಹೋಲಿಕೆ  

“ಮರುದಿನ, ಇಬ್ಬರು ಯೆಹೂದ್ಯರು ಹೊಡೆದಾಡುವುದನ್ನು ಮೋಶೆಯು ಕಂಡನು. ಅವರನ್ನು ಸಮಾಧಾನಪಡಿಸಲು ಅವನು ಪ್ರಯತ್ನಿಸಿ ‘ಗೆಳೆಯರೇ, ನೀವು ಸಹೋದರರಾಗಿದ್ದೀರಿ! ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡುವುದೇಕೆ?’ ಎಂದು ಅವರನ್ನು ಕೇಳಿದನು.


ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.


ದೇವರ ಸೇವೆಗೆ ಸಹೋದರ ಸ್ನೇಹವನ್ನೂ ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಸೇರಿಸಿರಿ


ನೀವು ಒಬ್ಬರನ್ನೊಬ್ಬರು ಎಡಬಿಡದೆ ಪ್ರೀತಿಸುವುದು ಬಹಳ ಮುಖ್ಯವಾದುದು. ಪ್ರೀತಿಯು ಅನೇಕ ಪಾಪಗಳನ್ನು ಅಡಗಿಸಿಬಿಡುತ್ತದೆ.


ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ.


ಸಹೋದರ ಸಹೋದರಿಯರೆಂಬ ಅನ್ಯೋನ್ಯಭಾವದಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. ನೀವು ನಿಮಗೋಸ್ಕರ ಬಯಸುವ ಮರ್ಯಾದೆಗಿಂತಲೂ ಹೆಚ್ಚು ಮರ್ಯಾದೆಯನ್ನು ನಿಮ್ಮ ಸಹೋದರ ಸಹೋದರಿಯರಿಗೆ ಕೊಡಿರಿ.


ವಾದದಿಂದ ದೂರವಿರುವವನು ಸನ್ಮಾನಕ್ಕೆ ಯೋಗ್ಯನು. ಮೂಢನಾದರೊ ಜಗಳಕ್ಕೇ ಆತುರ ಪಡುವನು.


ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.


ಅವರು ಹೊರಡುವಾಗ ಯೋಸೇಫನು, “ನೇರವಾಗಿ ಮನೆಗೆ ಹೋಗಿ. ದಾರಿಯಲ್ಲಿ ಜಗಳ ಮಾಡಬೇಡಿ” ಎಂದು ಹೇಳಿದನು.


ಪ್ರಿಯ ಸ್ನೇಹಿತರೇ, ಪ್ರೀತಿಯು ದೇವರಿಂದ ಬಂದಿರುವುದರಿಂದ ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಪ್ರೀತಿಸುವವನು ದೇವರಿಂದ ಹೊಸದಾಗಿ ಹುಟ್ಟಿದವನಾಗಿದ್ದಾನೆ. ಆದ್ದರಿಂದ ಅವನು ದೇವರನ್ನು ಬಲ್ಲವನಾಗಿರುತ್ತಾನೆ.


ಜನರೆಲ್ಲರಿಗೂ ಗೌರವವನ್ನು ತೋರಿಸಿರಿ. ದೇವರ ಕುಟುಂಬದ ಸಹೋದರ ಸಹೋದರಿಯರೆಲ್ಲರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ ಮತ್ತು ರಾಜನನ್ನು ಗೌರವಿಸಿರಿ.


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ನೀವು ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾಗಿರುವುದರಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಕ್ರಿಸ್ತನಲ್ಲಿ ಸಹೋದರ ಸಹೋದರಿಯರನ್ನು ಹೇಗೆ ಪ್ರೀತಿಸಬೇಕೆಂಬುದರ ಬಗ್ಗೆ ನಾವು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಒಬ್ಬರನ್ನೊಬ್ಬರು ಹೇಗೆ ಪ್ರೀತಿಸಬೇಕೆಂಬುದನ್ನು ಈಗಾಗಲೇ ದೇವರು ನಿಮಗೆ ಕಲಿಸಿದ್ದಾನೆ.


ನೀವು ಮಾಡುವ ಪ್ರತಿಯೊಂದನ್ನು ಗುಣಗುಟ್ಟದೆಯೂ ವಿವಾದವಿಲ್ಲದೆಯೂ ಮಾಡಿರಿ.


ಸಮಾಧಾನಪಡಿಸುವವರು ಧನ್ಯರು. ಅವರು ‘ದೇವರ ಮಕ್ಕಳು’ ಎನಿಸಿಕೊಳ್ಳುವರು.


ಮುಂಗೋಪಿಯು ಜಗಳವನ್ನು ಎಬ್ಬಿಸುವನು. ತಾಳ್ಮೆಯುಳ್ಳವನು ಶಾಂತಿಯನ್ನು ಸ್ಥಾಪಿಸುವನು.


ಮರುದಿನ, ಇಬ್ಬರು ಇಬ್ರಿಯರು ಜಗಳವಾಡುತ್ತಿರುವುದನ್ನು ಕಂಡ ಮೋಶೆಯು ಅವರಲ್ಲಿ ತಪ್ಪು ಮಾಡಿದವನಿಗೆ, “ನಿನ್ನ ನೆರೆಯವನಿಗೆ ಯಾಕೆ ಹೊಡೆಯುತ್ತಿರುವೆ?” ಎಂದು ಕೇಳಿದನು.


ನಾವು ಪ್ರತ್ಯೇಕವಾಗೋಣ. ನಿನಗೆ ಬೇಕಾದ ಸ್ಥಳವನ್ನು ನೀನು ಆರಿಸಿಕೊ. ನೀನು ಎಡಗಡೆಗೆ ಹೋಗುವುದಾದರೆ, ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋಗುವುದಾದರೆ, ನಾನು ಎಡಗಡೆಗೆ ಹೋಗುತ್ತೇನೆ” ಎಂದು ಹೇಳಿದನು.


ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.


ಲೋಟನು ಸೆರೆಯಾಳಾಗಿರುವುದು ಅಬ್ರಾಮನಿಗೆ ತಿಳಿಯಿತು. ಆದ್ದರಿಂದ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿದ ಗಂಡಾಳುಗಳನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವರಲ್ಲಿ ಮುನ್ನೂರ ಹದಿನೆಂಟು ಮಂದಿ ತರಬೇತಿ ಹೊಂದಿದ್ದ ಸೈನಿಕರಾಗಿದ್ದರು. ಅಬ್ರಾಮನು ಅವರೊಡನೆ ಹೊರಟು ಶತ್ರುಗಳನ್ನು ದಾನ್ ಊರಿನವರೆಗೂ ಹಿಂದಟ್ಟಿದನು.


ಎಬೆದನ ಮಗನಾದ ಗಾಳನೆಂಬವನು ತನ್ನ ಸಹೋದರರ ಸಮೇತ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಗಾಳನನ್ನು ನಂಬಿ ಅವನನ್ನು ಅನುಸರಿಸಲು ನಿರ್ಧರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು