Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:17 - ಪರಿಶುದ್ದ ಬೈಬಲ್‌

17 ಅಬ್ರಾಮನು ಕೆದೊರ್ಲಗೋಮರನನ್ನೂ ಮತ್ತು ಅವನೊಡನಿದ್ದ ರಾಜರುಗಳನ್ನೂ ಸೋಲಿಸಿದ ಮೇಲೆ ತನ್ನ ಮನೆಗೆ ಹಿಂತಿರುಗಿದನು. ಆಗ ಸೊದೋಮಿನ ರಾಜನು ಅಬ್ರಾಮನನ್ನು ಭೇಟಿಯಾಗಲು ಶಾವೆ ಕಣಿವೆಗೆ ಹೋದನು. (ಈಗ ಇದಕ್ಕೆ ರಾಜನ ಕಣಿವೆ ಎಂದು ಕರೆಯುತ್ತಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಬ್ರಾಮನು ಕೆದೊರ್ಲಗೋಮರನನ್ನೂ ಅವನೊಂದಿಗಿದ್ದ ರಾಜರನ್ನೂ ಸೋಲಿಸಿ ಬಂದಾಗ ಸೊದೋಮಿನ ಅರಸನು ಅವನನ್ನು ಶಾವೆ ತಗ್ಗಿನಲ್ಲಿ (ಅದಕ್ಕೆ ಅರಸನ ತಗ್ಗು ಎಂಬ ಹೆಸರೂ ಉಂಟು) ಭೇಟಿಯಾಗಲು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಕೆದೊರ್ಲಗೋಮರನನ್ನೂ ಅವನೊಂದಿಗೆ ಇದ್ದ ರಾಜರನ್ನೂ ಹೊಡೆದು ಬಂದಮೇಲೆ ಸೊದೋವಿುನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಎದುರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಕೆದೊರ್ಲಗೋಮರನನ್ನೂ, ಅವನ ಸಂಗಡ ಇದ್ದ ರಾಜರನ್ನೂ ಸೋಲಿಸಿ, ಹಿಂದಿರುಗಿ ಬಂದಾಗ, ಸೊದೋಮಿನ ಅರಸನು ಹೊರಟು ಶಾವೆ ತಗ್ಗು ಎಂಬ ಅರಸನ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಳ್ಳುವುದಕ್ಕಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:17
9 ತಿಳಿವುಗಳ ಹೋಲಿಕೆ  

ಅಬ್ಷಾಲೋಮನು ಬದುಕಿದ್ದಾಗ, ರಾಜನ ಕಣಿವೆಯಲ್ಲಿ ಒಂದು ಸ್ತಂಭವನ್ನು ನೆಡಿಸಿದ್ದನು. ಅಬ್ಷಾಲೋಮನು, “ನನ್ನ ಹೆಸರನ್ನು ಜೀವಂತವಾಗಿರಿಸಲು ನನಗೆ ಗಂಡುಮಕ್ಕಳಿಲ್ಲ” ಎಂದು ಹೇಳಿ ಆ ಸ್ತಂಭಕ್ಕೆ ತನ್ನ ಹೆಸರನ್ನೇ ಕೊಟ್ಟಿದ್ದನು. ಆ ಸ್ತಂಭವನ್ನು “ಅಬ್ಷಾಲೋಮನ ಸ್ಮಾರಕಸ್ತಂಭ” ಎಂದು ಇಂದಿಗೂ ಕರೆಯುತ್ತಾರೆ.


ಮೆಲ್ಕಿಜೆದೇಕನು ಸಾಲೇಮಿನ ರಾಜನಾಗಿದ್ದನು ಮತ್ತು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಅಬ್ರಹಾಮನು ರಾಜರುಗಳನ್ನು ಸೋಲಿಸಿ ಹಿಂದಿರುಗಿ ಬರುತ್ತಿರುವಾಗ ಅವನು ಅಬ್ರಹಾಮನನ್ನು ಸಂಧಿಸಿ ಆಶೀರ್ವದಿಸಿದನು.


ಐಶ್ವರ್ಯವಂತನಿಗೆ ಅನೇಕ ಸ್ನೇಹಿತರಿರುವರು; ಬಡವನಿಗೆ ಇದ್ದ ಸ್ನೇಹಿತರೂ ಬಿಟ್ಟುಹೋಗುವರು.


ಬಡವನು ತನ್ನ ನೆರೆಯವನಿಂದಲೂ ತಿರಸ್ಕರಿಸಲ್ಪಡುವನು. ಐಶ್ವರ್ಯವಂತನಿಗಾದರೋ ಅನೇಕ ಮಂದಿ ಸ್ನೇಹಿತರು.


ದಾವೀದನು ಫಿಲಿಷ್ಟಿಯರೊಡನೆ ಹೋರಾಡಲು ಹೋಗುತ್ತಿದ್ದನು. ಯುದ್ಧದ ನಂತರ ಅವನು ಮನೆಗೆ ಹಿಂದಿರುಗುತ್ತಿದ್ದನು. ಇಸ್ರೇಲಿನ ಎಲ್ಲ ಪಟ್ಟಣಗಳಲ್ಲೂ ಹೆಂಗಸರು ದಾವೀದನನ್ನು ನೋಡುವುದಕ್ಕಾಗಿ ಹೊರಬರುತ್ತಿದ್ದರು. ಅವರು ಡೋಲು ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಕೇಕೆ ಹಾಕಿ ನಗುತ್ತಾ ನರ್ತಿಸುತ್ತಿದ್ದರು. ಅವರು ಸೌಲನ ಸಮ್ಮುಖದಲ್ಲಿಯೇ ಇವನ್ನೆಲ್ಲ ಮಾಡುತ್ತಿದ್ದರು.


ಯೆಫ್ತಾಹನು ಮಿಚ್ಛೆಗೆ ಹಿಂದಿರುಗಿದನು. ಯೆಫ್ತಾಹನು ತನ್ನ ಮನೆಗೆ ಹೋಗುತ್ತಿರಲು ಅವನನ್ನು ಎದುರುಗೊಳ್ಳಲು ಅವನ ಮಗಳು ಮನೆಯಿಂದ ಹೊರಗೆ ಬಂದಳು. ಅವಳು ದಮ್ಮಡಿ ಬಡಿಯುತ್ತ ನಾಟ್ಯವಾಡುತ್ತಿದ್ದಳು. ಅವಳು ಅವನ ಒಬ್ಬಳೇ ಮಗಳಾಗಿದ್ದಳು. ಯೆಫ್ತಾಹನಿಗೆ ಬೇರೆ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇರಲಿಲ್ಲ. ಯೆಫ್ತಾಹನು ಅವಳನ್ನು ತುಂಬ ಪ್ರೀತಿಸುತ್ತಿದ್ದನು.


ಆ ದಿನಗಳಲ್ಲಿ ಅಮ್ರಾಫೆಲನು ಶಿನಾರಿನ ರಾಜನಾಗಿದ್ದನು; ಅರಿಯೋಕನು ಎಲ್ಲಸಾರಿನ ರಾಜನಾಗಿದ್ದನು; ಕೆದೊರ್ಲಗೋಮರನು ಏಲಾಮಿನ ರಾಜನಾಗಿದ್ದನು; ತಿದ್ಗಾಲನು ಗೋಯಿಮದ ರಾಜನಾಗಿದ್ದನು.


ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್-ಕರ್ನಯಿಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆರ್ಯಾತಯಿಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು.


ಸಿದ್ದೀಮ್ ಕಣಿವೆಯಲ್ಲಿ ಕಲ್ಲರಗಿನ ಕೆಸರುಕುಣಿಗಳು ಬಹಳಷ್ಟಿದ್ದವು. ಸೊದೋಮ್ ಮತ್ತು ಗೊಮೋರಗಳ ರಾಜರುಗಳು ಮತ್ತು ಅವರ ಸೈನ್ಯಗಳವರು ಓಡಿಹೋಗುವಾಗ ಈ ಕುಣಿಗಳಲ್ಲಿ ಬಿದ್ದುಹೋದರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು