Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:5 - ಪರಿಶುದ್ದ ಬೈಬಲ್‌

5 ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್-ಕರ್ನಯಿಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆರ್ಯಾತಯಿಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಮತ್ತು ಅವನಿಗೆ ಸೇರಿದ ರಾಜರೂ ಬಂದು ಅಷ್ಟರೋತ್ ಕರ್ನಯಿಮ್ ಎಂಬಲ್ಲಿ ರೆಫಾಯರನ್ನೂ ಹಾಮ್ ಎಂಬಲ್ಲಿ ಏಮಿಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿವಿುನಲ್ಲಿ ರೆಫಾಯರನ್ನೂ ಹಾವಿುನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿವಿುನಲ್ಲಿ ಏವಿುಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ, ಹಾಮಿನಲ್ಲಿ ಜೂಜ್ಯರನ್ನೂ, ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:5
28 ತಿಳಿವುಗಳ ಹೋಲಿಕೆ  

(ಓಗನು ಬಾಷಾನಿನ ರಾಜನಾಗಿದ್ದನು. ಎದ್ರೈ ಮತ್ತು ಸಲ್ಕಾ ಬಾಷಾನಿನಲ್ಲಿದ್ದ ಓಗನ ರಾಜ್ಯದ ಪಟ್ಟಣಗಳಾಗಿದ್ದವು. ಅವನು ರೆಫಾಯರಲ್ಲಿ ಅಳಿದುಳಿದವರಲ್ಲಿ ಒಬ್ಬನಾಗಿದ್ದನು. ಅವನ ಮಂಚವು ಕಬ್ಬಿಣದಿಂದ ಮಾಡಲ್ಪಟ್ಟಿತ್ತು. ಅದು ಹದಿಮೂರು ಅಡಿ ಉದ್ದವಿತ್ತು ಮತ್ತು ಆರು ಅಡಿ ಅಗಲವಿತ್ತು. ಆ ಮಂಚವು ಈಗಲೂ ಅಮ್ಮೋನಿಯರು ವಾಸಿಸುವ ರಬ್ಬಾದಲ್ಲಿದೆ.)


ಸೀಹೋನನನ್ನು ಮತ್ತು ಓಗನನ್ನು ದೇವರಾದ ಯೆಹೋವನು ಸೋಲಿಸಿದ ಬಳಿಕ ನಡೆದ ಸಂಗತಿಯಿದು. (ಸೀಹೋನನು ಅಮೋರಿಯರ ರಾಜನಾಗಿದ್ದನು. ಅವನು ಹೆಷ್ಬೋನಿನಲ್ಲಿ ವಾಸಿಸುತ್ತಿದ್ದನು. ಓಗನು ಬಾಷಾನಿನ ಅರಸನು. ಇವನು ಅಷ್ಟಾರೋತ್ ಮತ್ತು ಎದ್ರೈ ಎಂಬಲ್ಲಿ ವಾಸವಾಗಿದ್ದನು.)


ಹಿತ್ತಿಯರ, ಪೆರಿಜೀಯರ, ರೆಷಾಯರ,


ಆ ಪ್ರಾಂತ್ಯದ ಅರಸುಗಳಿಗೆ ನೀನು ಹೆದರಬೇಡ. ನಿನ್ನ ದೇವರಾದ ಯೆಹೋವನು ನಿನಗಾಗಿ ಯುದ್ಧ ಮಾಡುವನು’ ಎಂದು ಹೇಳಿದೆನು.


ಕಿರ್ಯಾತಯೀಮ್, ಬೇತ್‌ಗಾಮೂಲ್, ಬೇತ್‌ಮೆಯೋನ್,


ಈ ಸಂದೇಶವು ಮೋವಾಬ್ ದೇಶವನ್ನು ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ನೆಬೋ ಪರ್ವತಕ್ಕೆ ದುರ್ಗತಿ ಬರುವುದು. ನೆಬೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನ್ನು ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನ್ನು ಸೋಲಿಸಿ ಧ್ವಂಸ ಮಾಡಲಾಗುವುದು.


“ಆ ಸಮಯದಲ್ಲಿ ರೆಫಾಯೀಮ್ ಕಣಿವೆಯಲ್ಲಿ ಧಾನ್ಯದ ಸುಗ್ಗಿಯಂತಿರುವದು. ಕೆಲಸಗಾರರು ಹೊಲಗಳಲ್ಲಿ ಬೆಳೆಯನ್ನು ಕೊಯ್ದು ಧಾನ್ಯವನ್ನು ಶೇಖರಿಸುವರು.


ಆತನು ಹಾಮನ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದನು. ಆತನು ಕೆಂಪು ಸಮುದ್ರದ ಸಮೀಪದಲ್ಲಿ ಭಯಂಕರವಾದ ಕಾರ್ಯಗಳನ್ನು ಮಾಡಿದನು!


ಹಾಮನ ದೇಶದಲ್ಲಿ ದೇವರು ಅನೇಕ ಮಹತ್ಕಾರ್ಯಗಳನ್ನು ಮೋಶೆ ಆರೋನರ ಮೂಲಕವಾಗಿ ಮಾಡಿದನು.


ಬಳಿಕ ಇಸ್ರೇಲನು ಈಜಿಪ್ಟಿಗೆ ಬಂದನು. ಯಾಕೋಬನು ಹಾಮನ ದೇಶದಲ್ಲಿ ವಾಸಿಸಿದನು.


ಈಜಿಪ್ಟಿನವರ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು. ಹಾಮನ ಕುಲಕ್ಕೆ ಸೇರಿದ ಪ್ರತಿಯೊಬ್ಬ ಚೊಚ್ಚಲ ಮಗನನ್ನು ಆತನು ಕೊಂದುಹಾಕಿದನು.


ಫಿಲಿಷ್ಟಿಯರು ರೆಫಾಯೀಮ್ ತಗ್ಗಿನಲ್ಲಿ ವಾಸಿಸುತ್ತಿದ್ದ ಇಸ್ರೇಲರ ಮೇಲೆ ದಾಳಿಮಾಡಿ ಅವರದನ್ನೆಲ್ಲಾ ದೋಚಿಕೊಂಡರು.


ಒಂದು ಸಲ ದಾವೀದನು ಅದುಲ್ಲಾಮ್ ಗವಿಯೊಳಗಿದ್ದಾಗ, ರೆಫಾಯಿಮ್ ತಗ್ಗಿನಲ್ಲಿ ಫಿಲಿಷ್ಟಿಯರು ಪಾಳೆಯಮಾಡಿದ್ದರು. ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಈ ಮೂರು ಮಂದಿ ಗುಹೆಯಲ್ಲಿದ್ದ ದಾವೀದನೊಂದಿಗೆ ಸೇರಿಕೊಳ್ಳಲು ಹೊಟ್ಟೆಯ ಮೇಲೆ ತೆವಳಿಕೊಂಡೇ ಅವನ ಬಳಿಗೆ ಬಂದರು.


ಅಲ್ಲಿ ಫಲವತ್ತಾದ ಭೂಮಿಯನ್ನೂ ಹಸಿರು ಹುಲ್ಲುಗಾವಲನ್ನೂ ಕಂಡು ಅಲ್ಲಿಯೇ ನೆಲೆಸಿದರು. ಆ ಪ್ರದೇಶವು ಪ್ರಶಾಂತವಾಗಿತ್ತು. ಹಿಂದಿನ ಕಾಲದಲ್ಲಿ ಹಾಮನ ಸಂತತಿಯವರು ಅಲ್ಲಿ ನೆಲೆಸಿದ್ದರು.


ಸುಗ್ಗಿಯ ಕಾಲದ ಒಂದು ಸಮಯದಲ್ಲಿ ಮೂವತ್ತು ಮಂದಿ ಶೂರರಲ್ಲಿ ಮೂವರು ದಾವೀದನ ಬಳಿಗೆ ಬಂದರು. ಈ ಮೂವರು ಅದುಲ್ಲಾಮ್ ಗವಿಗೆ ಬಂದರು. ಫಿಲಿಷ್ಟಿಯರ ಸೈನ್ಯವು ರೆಫಾಯೀಮ್ ಕಣಿವೆಯಲ್ಲಿ ತನ್ನ ಪಾಳೆಯವನ್ನು ಮಾಡಿಕೊಂಡಿತ್ತು.


ಫಿಲಿಷ್ಟಿಯರು ಮತ್ತೆ ರೆಫಾಯೀಮ್ ಕಣಿವೆಗೆ ಬಂದು ಪಾಳೆಯವನ್ನು ಮಾಡಿದರು.


ಫಿಲಿಷ್ಟಿಯರು ಬಂದು ರೆಫಾಯೀಮ್ ಕಣಿವೆಯಲ್ಲಿ ಪಾಳೆಯವನ್ನು ಮಾಡಿದರು.


ಗಿಲ್ಯಾದಿನ ಅರ್ಧಭಾಗವು, ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಇದರಲ್ಲಿ ಸೇರಿವೆ. (ಗಿಲ್ಯಾದ್, ಅಷ್ಟರೋತ್ ಮತ್ತು ಎದ್ರೈ ಎಂಬ ಪಟ್ಟಣಗಳಲ್ಲಿ ರಾಜನಾದ ಓಗ್ ವಾಸವಾಗಿದ್ದನು.) ಈ ಎಲ್ಲ ಪ್ರದೇಶವನ್ನು ಮನಸ್ಸೆಯ ಮಗನಾದ ಮಾಕೀರನ ಅರ್ಧಗೋತ್ರದವರಿಗೆ ಕೊಡಲಾಯಿತು.


ಕಣಿವೆಯಲ್ಲಿರುವ ಪ್ರದೇಶ, ಬೆಟ್ಟದ ಮೇಲಿನ ಕಿರ್ಯಾತಯಿಮ್, ಸಿಬ್ಮಾ, ಚೆರೆತ್‌ಶಹರ್,


ಓಗ್ ರಾಜನ ಎಲ್ಲ ಪ್ರಾಂತ್ಯಗಳು ಆ ಪ್ರದೇಶದಲ್ಲಿ ಸೇರಿತ್ತು. ಓಗ್ ರಾಜನು ಬಾಷಾನಿನಲ್ಲಿ ಆಳುತ್ತಿದ್ದನು. ಮೊದಲು ಅವನು ಅಷ್ಟರೋತ್ ಮತ್ತು ಎದ್ರೈಗಳಲ್ಲಿದ್ದುಕೊಂಡು ಆಳುತ್ತಿದ್ದನು. ಓಗನು ರೆಫಾಯರ ವಂಶಸ್ಥನಾಗಿದ್ದನು. ಮೊದಲು ಮೋಶೆಯು ಆ ಜನರನ್ನು ಸೋಲಿಸಿ ಅವರ ಪ್ರದೇಶವನ್ನು ತೆಗೆದುಕೊಂಡಿದ್ದನು.


ಅವರು ಬಾಷಾನಿನ ಅರಸನಾದ ಓಗನನ್ನು ಸಹ ಸೋಲಿಸಿದರು. ಓಗನು ರೆಫಾಯರ ವಂಶಸ್ಥನಾಗಿದ್ದನು. ಅಷ್ಟರೋತ್ ಮತ್ತು ಎದ್ರೈ ಎಂಬ ನಗರಗಳಲ್ಲಿ ವಾಸವಾಗಿದ್ದ


ಜೋರ್ಡನ್ ನದಿಯ ಮತ್ತೊಂದು ಕಡೆಯಲ್ಲಿರುವ ದೇಶವನ್ನು ಯೆಹೋವನು ನಿಮ್ಮ ಸಂಬಂಧಿಕರಾದ ಇಸ್ರೇಲರಿಗೆ ಕೊಡಲಿದ್ದಾನೆ. ಆ ದೇಶವನ್ನು ಇಸ್ರೇಲರು ತೆಗೆದುಕೊಳ್ಳುವ ತನಕ ನೀವು ಅವರಿಗೆ ಸಹಾಯ ಮಾಡಲೇಬೇಕು. ಇಲ್ಲಿ ಯೆಹೋವನು ನಿಮಗೆ ಶಾಂತಿಯನ್ನು ದಯಪಾಲಿಸಿದಂತೆ ಅಲ್ಲಿಯೂ ದಯಪಾಲಿಸುವ ತನಕ ಅವರಿಗೆ ಸಹಾಯ ಮಾಡಿರಿ. ಬಳಿಕ ನಾನು ನಿಮಗೆ ಕೊಟ್ಟಿರುವ ಈ ದೇಶಕ್ಕೆ ನೀವು ಮರಳಿ ಬರಬಹುದು.’


ಈ ರಾಜರುಗಳು ಕೆದೊರ್ಲಗೋಮರನ ಅಧೀನದಲ್ಲಿ ಹನ್ನೆರಡು ವರ್ಷವಿದ್ದರು. ಆದರೆ ಹದಿಮೂರನೆಯ ವರ್ಷದಲ್ಲಿ, ಅವರೆಲ್ಲರೂ ಅವನಿಗೆ ವಿರೋಧವಾಗಿ ದಂಗೆ ಎದ್ದರು.


ರೂಬೇನ್ ಕುಲದವರು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಮತ್ತು ಸಿಬ್ಮಾ ಎಂಬ ಊರುಗಳನ್ನು ಕೋಟೆ ಸಮೇತವಾಗಿ ಕಟ್ಟಿದರು; ಅಲ್ಲದೆ ತಮ್ಮ ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿದರು. ಅವರು ತಾವು ಮತ್ತೆ ಕಟ್ಟಿದ ಊರುಗಳಿಗೆ ಅವುಗಳ ಮೊದಲಿನ ಹೆಸರುಗಳನ್ನು ಕೊಟ್ಟರು; ಆದರೆ ನೆಬೋ ಮತ್ತು ಬಾಳ್ಮೆಯೋನ್‌ಗಳ ಹೆಸರುಗಳನ್ನು ಬದಲಾಯಿಸಿದರು.


ಗಿಲ್ಯಾದಿನ ಇನ್ನೊಂದು ಅರ್ಧಪ್ರದೇಶ ಮತ್ತು ಇಡೀ ಬಾಷಾನ್ ದೇಶವನ್ನು ಮನಸ್ಸೆಯ ಅರ್ಧಕುಲದವರಿಗೆ ಹಂಚಿದೆನು.” (ಬಾಷಾನ್ ಓಗನ ಸಾಮ್ರಾಜ್ಯವಾಗಿತ್ತು. ಬಾಷಾನಿನ ಒಂದು ಭಾಗವನ್ನು ಅರ್ಗೋಬ್ ಎಂದು ಕರೆಯುತ್ತಾರೆ. ಅಲ್ಲದೆ ರೆಫಾಯರ ದೇಶವೆಂತಲೂ ಕರೆಯುತ್ತಾರೆ.


ಆತನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಇಬ್ಬರು ಅರಸರನ್ನು ಸೋಲಿಸಿದ್ದನ್ನು ನಾವು ಕೇಳಿದೆವು. ಹೆಷ್ಬೋನಿನ ಅರಸನಾದ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಇವರೇ ಆ ಅರಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು