Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:7 - ಪರಿಶುದ್ದ ಬೈಬಲ್‌

7 ಆ ಬಳಿಕ ರಾಜ ಕೆದೊರ್ಲಗೋಮರನು ಉತ್ತರದ ಕಡೆಗೆ ತಿರುಗಿ ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಎಲ್ಲಾ ಅಮಾಲೇಕ್ಯರನ್ನು ಸೋಲಿಸಿದನು. ಇದಲ್ಲದೆ ಅವನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಎನ್ಮಿಷ್ಪಾಟ್ ಎನ್ನಲ್ಪಟ್ಟ ಕಾದೇಶ್‍ಗೆ ಹಿಂದಿರುಗಿ ಬಂದು ಅಮಾಲೇಕ್ಯರ ಸಮಸ್ತ ನಾಡನ್ನು ಮತ್ತು ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಅಮಾಲೇಕ್ಯರ ಸಮಸ್ತದೇಶವನ್ನೂ ಹಚಚೋನ್‍ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಹಿಂದಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು, ಅಮಾಲೇಕ್ಯರ ಎಲ್ಲಾ ಬಯಲನ್ನು ಹಜಜೋನ್ ತಾಮಾರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:7
19 ತಿಳಿವುಗಳ ಹೋಲಿಕೆ  

ಕೆಲವು ಜನರು ಯೆಹೋಷಾಫಾಟನ ಬಳಿಗೆ ಬಂದು, “ಎದೋಮ್ಯರ ದೊಡ್ಡ ಸೈನ್ಯವು ಲವಣಸಮುದ್ರದ ಆಚೆಕಡೆಯಿಂದ ನಿನಗೆ ವಿರುದ್ಧವಾಗಿ ಬರುತ್ತಿದೆ. ಈಗಾಗಲೇ ಅವರು ಹಚೆಚೋನ್ ತಾಮಾರಿನಲ್ಲಿದ್ದಾರೆ” (ಇದನ್ನು ಏಂಗೆದಿ ಎಂತಲೂ ಕರೆಯುತ್ತಾರೆ.) ಎಂದು ಹೇಳಿದರು.


ಅಬ್ರಹಾಮನು ಅಲ್ಲಿಂದ ಹೊರಟು ನೆಗೆವ್‌ಗೆ ಪ್ರಯಾಣಮಾಡಿ ಕಾದೇಶಿಗೂ ಶೂರಿಗೂ ನಡುವೆ ಇದ್ದ ಗೆರಾರ್ ನಗರದಲ್ಲಿ ನೆಲೆಸಿದನು.


ಆದ್ದರಿಂದ ಆ ಬಾವಿಗೆ ಬೀರ್‌ಲಹೈರೋಯಿ (ಬೀರ್‌ಲಹೈರೋಯಿ. ಇದರರ್ಥ: “ನನ್ನನ್ನು ನೋಡುವ ಜೀವಸ್ವರೂಪನ ಬಾವಿ.”) ಎಂದು ಹೆಸರಾಯಿತು. ಈ ಬಾವಿಯು ಕಾದೇಶಿಗೂ ಬೆರೆದಿಗೂ ನಡುವೆ ಇದೆ.


ನಿಬ್ಷಾನ್, ಉಪ್ಪಿನಪಟ್ಟಣ ಮತ್ತು ಏಂಗೆದೀ ಎಂಬ ಆರು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ಹೀಗೆ ನೀವು ಕಾದೇಶಿನಲ್ಲಿ ತುಂಬ ದಿನಗಳನ್ನು ಕಳೆದಿರುವಿರಿ.


“ಬಳಿಕ ನಾವು ನಮ್ಮ ದೇವರಾದ ಯೆಹೋವನ ಆಜ್ಞಾನುಸಾರವಾಗಿ ಹೋರೇಬ್ ಬೆಟ್ಟಪ್ರದೇಶವನ್ನು ಬಿಟ್ಟು ಅಮೋರಿಯರ ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಮಾಡುತ್ತಾ ನೀವು ನೋಡಿದ ಅತ್ಯಂತ ಭಯಂಕರವಾದ ಮತ್ತು ವಿಶಾಲವಾದ ಮರುಭೂಮಿಯನ್ನು ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.


“ತರುವಾಯ ಬಿಳಾಮನು ಅಮಾಲೇಕ್ಯರನ್ನು ನೋಡಿ ಹೀಗೆಂದನು: “ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಬಲಿಷ್ಠರು; ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಮೊದಲನೆಯವರು; ಆದರೆ ಕೊನೆಯಲ್ಲಿ ಅವರು ನಾಶವಾಗುವರು.”


ಮೊದಲನೆಯ ತಿಂಗಳಲ್ಲಿ ಇಡೀ ಇಸ್ರೇಲ್ ಸಮುದಾಯವು ಚಿನ್ ಮರುಭೂಮಿಗೆ ಬಂದಿತು. ಅವರು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಸತ್ತಳು. ಆಕೆಯ ಶವವನ್ನು ಅಲ್ಲಿ ಸಮಾಧಿ ಮಾಡಲಾಯಿತು.


ಆಗ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಸೋಲಿಸಿ ಹೊರ್ಮಾ ಪಟ್ಟಣದವರೆಗೂ ಅಟ್ಟಿಸಿಕೊಂಡುಬಂದು ಸಂಹರಿಸಿದರು.


ಅಮಾಲೇಕ್ಯರೂ ಕಾನಾನ್ಯರೂ ನಿಮ್ಮನ್ನು ಎದುರಿಸಲು ಅಲ್ಲಿರುವುದರಿಂದ ನೀವು ಅವರ ಖಡ್ಗದಿಂದ ಸಾಯುವಿರಿ. ನೀವು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.


ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು.


ಕೋರಹ, ಗತಾಮ ಮತ್ತು ಅಮಾಲೇಕ. ಈ ಕುಲಪತಿಗಳು ಏಸಾವನ ಹೆಂಡತಿಯಾದ ಆದಾಳ ಸಂತತಿಯವರು.


ಎಲೀಫಜನಿಗೆ ತಿಮ್ನ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ನಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡುಮಗನಿದ್ದನು.


ಎಂಗೇದಿಯಿಂದ ಪ್ರಾರಂಭವಾಗಿ ಏನ್‌ಎಗ್ಲಯಿಮ್ ತನಕ ಬೆಸ್ತರು ಹೊಳೆಯ ದಡದಲ್ಲಿ ನಿಂತಿರುವದನ್ನು ನೀನು ನೋಡಬಹುದು. ಅವರು ತಮ್ಮ ಬಲೆಗಳನ್ನು ಬೀಸಿ ನಾನಾ ತರದ ಮೀನುಗಳನ್ನು ಹಿಡಿಯುವದನ್ನು ನೀನು ನೋಡಬಹುದು. ಭೂಮಧ್ಯ ಸಮುದ್ರದೊಳಗೆ ಎಷ್ಟು ವಿಧವಾದ ಮೀನುಗಳಿವೆಯೋ ಅಷ್ಟೇ ವಿಧವಾದ ಮೀನುಗಳು ಈ ಹೊಳೆಯಲ್ಲಿಯೂ ಇವೆ.


“ದೇವರ ಪ್ರಾಂತ್ಯದ ದಕ್ಷಿಣದ ಮೇರೆಯು ತಾಮಾರಿನಿಂದ ಪ್ರಾರಂಭವಾಗಿ ಮೆರೀಬೋತ್‌ಕಾದೇಶ್ ಎಂಬ ಮರುಭೂಮಿಯ ನೀರಿನಾಶ್ರಯಕ್ಕೆ ಹೋಗುತ್ತದೆ. ಅನಂತರ ಈಜಿಪ್ಟಿನ ನದಿಯ ಅಂಚಿನಲ್ಲಿ ಮುಂದುವರಿದು ಭೂಮಧ್ಯ ಸಮುದ್ರಕ್ಕೆ ತಾನು ಸೇರುವ ಸ್ಥಳಕ್ಕೆ ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು