ಆದಿಕಾಂಡ 15:18 - ಪರಿಶುದ್ದ ಬೈಬಲ್18 ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ ಅಧ್ಯಾಯವನ್ನು ನೋಡಿ |
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.