Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:18 - ಪರಿಶುದ್ದ ಬೈಬಲ್‌

18 ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:18
58 ತಿಳಿವುಗಳ ಹೋಲಿಕೆ  

ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು.


ಆ ಸಮಯದಲ್ಲಿ, ಯೆಹೋವನು ತನ್ನ ಜನರನ್ನು ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫ್ರೇಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು. ಇಸ್ರೇಲ್ ಜನರೇ, ನೀವು ಒಬ್ಬೊಬ್ಬರಾಗಿಯೇ ಒಟ್ಟುಗೂಡಿಸಲ್ಪಡುವಿರಿ.


ಅವನು ನ್ಯಾಯವಂತನೂ ಪ್ರಾಮಾಣಿಕನೂ ಆಗಿದ್ದಾನೆಂದು ತಿಳಿದು ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ಹಿತ್ತಿಯರ, ಕಾನಾನ್ಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ ಮತ್ತು ಗಿರ್ಗಾಷಿಯರ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವುದಾಗಿ ವಾಗ್ದಾನ ಮಾಡಿದೆ. ನೀನು ನಿನ್ನ ವಾಗ್ದಾನವನ್ನು ನೆರವೇರಿಸಿದೆ. ಯಾಕೆಂದರೆ ನೀನು ಒಳ್ಳೆಯವನಾಗಿರುವೆ.


ನೀವು ಹೆಜ್ಜೆಯಿಡುವ ಭೂಮಿಯೆಲ್ಲಾ ನಿಮ್ಮದಾಗುವುದು. ದಕ್ಷಿಣದ ಮರುಭೂಮಿಯಿಂದ ಹಿಡಿದು ಉತ್ತರದ ಲೆಬನೋನಿನ ತನಕ, ಪೂರ್ವದಲ್ಲಿರುವ ಯೂಫ್ರೇಟೀಸ್ ನದಿಯಿಂದ ಪಶ್ಟಿಮದ ಭೂಮಧ್ಯಸಮುದ್ರ ತೀರದ ತನಕ ವಿಸ್ತಾರವಾಗಿದೆ.


ಗಡಿಯು ಅಚ್ಮೋನಿನಿಂದ ಈಜಿಪ್ಟಿನ ನದಿಯ ಕಡೆಗೆ ತಿರುಗಿಕೊಂಡು ಸಮುದ್ರವನ್ನು ಸೇರುವುದು.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


“‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.


ಯೂಫ್ರೇಟೀಸ್ ನದಿಯಿಂದ ಹಿಡಿದು ಫಿಲಿಷ್ಟಿಯರ ರಾಜ್ಯ ಮತ್ತು ಈಜಿಪ್ಟಿನ ಮೇರೆಯ ತನಕವಿದ್ದ ಎಲ್ಲಾ ಅರಸರುಗಳಿಗೆ ಸೊಲೊಮೋನನೇ ರಾಜನಾಗಿದ್ದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”


“ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ನಡಿಸುವನು. ನಾನು ಅವರನ್ನೆಲ್ಲಾ ಸೋಲಿಸುವೆನು.


ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.


ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.


“ನಾನು ನಿನಗೆ ಕಾನಾನ್ ದೇಶವನ್ನು ಕೊಡುವೆನು. ಆ ದೇಶವು ನಿನ್ನದಾಗಿರುತ್ತದೆ” ಎಂದು ಆತನು ಹೇಳಿದನು.


ಆ ಸೀಮೆಯು ಈಜಿಪ್ಟಿನ ಅಚ್ಮೋನಿನ ಹಳ್ಳಕ್ಕೆ ಮುಂದುವರೆದು ಮೆಡಿಟರೆನಿಯನ್ ಸಮುದ್ರದವರೆಗೆ ಹಬ್ಬಿತ್ತು. ಈ ಭೂಮಿಯೆಲ್ಲಾ ಅವರ ದಕ್ಷಿಣ ಸೀಮೆಯಲ್ಲಿತ್ತು.


“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.


ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.


ನಾನು ಅಬ್ರಹಾಮನಿಗೂ ಇಸಾಕನಿಗೂ ವಿಶೇಷವಾದ ದೇಶವನ್ನು ಕೊಟ್ಟೆನು. ಈಗ ನಾನು ಆ ದೇಶವನ್ನು ನಿನಗೆ ಕೊಡುವೆನು. ನಾನು ಆ ದೇಶವನ್ನು ನಿನ್ನ ಮುಂದಿನ ಸಂತತಿಗಳವರಿಗೆ ಕೊಡುವೆನು” ಎಂದು ಹೇಳಿದನು.


ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು.


ನಾನು ಈ ದಿನ ಕೊಡುವ ಆಜ್ಞೆಗಳಿಗೆ ವಿಧೇಯರಾಗಿರಿ. ನಿಮ್ಮ ವೈರಿಗಳಾದ ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಹೊರಗಟ್ಟುವೆನು.


ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ.


ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


ಬೆಳನ ಜನರು ಯೂಫ್ರೇಟೀಸ್ ನದಿಯ ಸಮೀಪದಲ್ಲಿರುವ ಮರುಭೂಮಿಯವರೆಗೂ ನೆಲೆಸಿದರು. ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದನಕರುಗಳು ಇದ್ದುದರಿಂದ ಗಿಲ್ಯಾದ್ ಪ್ರಾಂತ್ಯದಲ್ಲಿಯೇ ನೆಲೆಸಿದರು.


“ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.


ಮೂರನೆ ನದಿಯ ಹೆಸರು ಟೈಗ್ರಿಸ್. ದಕ್ಷಿಣ ಅಸ್ಸೀರಿಯ ದೇಶದಲ್ಲಿ ಹರಿಯುತ್ತಿದ್ದ ನದಿ ಇದೇ. ನಾಲ್ಕನೆ ನದಿಯ ಹೆಸರು ಯೂಫ್ರೇಟೀಸ್.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ಹದದೆಜೆರನು ರೆಹೋಬನ ಮಗ ಹಾಗೂ ಚೋಬದ ರಾಜ. ದಾವೀದನು ಯೂಫ್ರೇಟೀಸ್ ನದಿಯ ಸುತ್ತಲಿನ ಪ್ರದೇಶವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಹದದೆಜೆರನನ್ನು ಸೋಲಿಸಿದನು.


ಆದರೆ ದೇವರು ಅಬ್ರಹಾಮನಿಗೆ ಇಲ್ಲಿ ಯಾವ ಭೂಮಿಯನ್ನೂ ಕೊಡಲಿಲ್ಲ. ದೇವರು ಅವನಿಗೆ ಒಂದು ಅಡಿ ಸ್ಥಳವನ್ನೂ ಕೊಡಲಿಲ್ಲ. ಆದರೆ ಮುಂದಿನ ಕಾಲದಲ್ಲಿ ಈ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವುದಾಗಿ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದನು. (ಅಬ್ರಹಾಮನಿಗೆ ಮಕ್ಕಳೇ ಇಲ್ಲದಿದ್ದಾಗ ಇದಾಯಿತು.)


ಆ ಧ್ವನಿಯು ತುತೂರಿಯಿದ್ದ ಆರನೆಯ ದೇವದೂತನಿಗೆ, “ಯೂಫ್ರಟಿಸ್ ಎಂಬ ಮಹಾನದಿಯ ಬಳಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.


“ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವನು. ಈಗ ಅಲ್ಲಿ ಕಾನಾನ್ಯರು ವಾಸವಾಗಿದ್ದಾರೆ. ಆದರೆ ದೇವರು ಆ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದನು. ದೇವರು ಆ ದೇಶವನ್ನು ನಿಮಗೆ ಕೊಟ್ಟನಂತರ


ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.


“ನಿಮ್ಮ ದೇವರಾದ ಯೆಹೋವನು ನಿಮ್ಮ ದೇಶವನ್ನು ವಿಸ್ತಾರ ಮಾಡುವನು. ಆ ಸಮಯದಲ್ಲಿ ನೀವು ಇರುವ ಸ್ಥಳಗಳು ಆತನು ತನ್ನ ಹೆಸರಿಗಾಗಿ ಆರಿಸಿದ ಸ್ಥಳದಿಂದ ತುಂಬಾ ದೂರವಿರಬಹುದು. ಆಗ ನಿಮಗೆ ಮಾಂಸ ಊಟಮಾಡಲು ಆಸೆಯಾದರೆ ನಿಮ್ಮ ಹಿಂಡಿನಿಂದಾಗಲಿ ಹಟ್ಟಿಯಿಂದಾಗಲಿ ಪ್ರಾಣಿಯನ್ನು ಕೊಂದು ತಿನ್ನಬಹುದು. ನಾನು ತಿಳಿಸುವ ರೀತಿಯಲ್ಲಿ ತಿನ್ನಿರಿ. ನಿಮಗೆ ಬೇಕಾದಾಗಲೆಲ್ಲಾ ಹೀಗೆ ಮಾಡಿರಿ.


“ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ನಿಮ್ಮ ದೇಶವನ್ನು ವಿಸ್ತಾರ ಮಾಡುವುದಾಗಿ ವಾಗ್ದಾನ ಮಾಡಿದನು. ಅವರಿಗೆ ಕೊಡುವುದಾಗಿ ವಾಗ್ದಾನಮಾಡಿದ ದೇಶವನ್ನೆಲ್ಲಾ ನಿಮಗೆ ಕೊಡುವನು.


ಸೊಲೊಮೋನನೂ ಎಲ್ಲಾ ಇಸ್ರೇಲರೂ ಏಳು ದಿನಗಳ ತನಕ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಸೊಲೊಮೋನನೊಂದಿಗೆ ಬಹುದೊಡ್ಡ ಇಸ್ರೇಲರ ಸಮೂಹವು ನೆರೆದು ಬಂದಿತ್ತು. ಹಮಾತಿನಿಂದ ಹಿಡಿದು ಈಜಿಪ್ಟಿನ ನದಿಯ ತನಕ ವಾಸಿಸುವವರೆಲ್ಲರೂ ಜೆರುಸಲೇಮಿಗೆ ಬಂದಿದ್ದರು.


ಇಸ್ರೇಲರು ಇದ್ದ ದೇಶದಲ್ಲಿ ಅನ್ಯ ಜನರಾದ ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುತ್ತಿದ್ದರು. ಇವರನ್ನೆಲ್ಲಾ ಸೊಲೊಮೋನನು ಗುಲಾಮರನ್ನಾಗಿ ಉಪಯೋಗಿಸಿದನು. ಈ ಜನರು ಇಸ್ರೇಲರಾಗಿರಲಿಲ್ಲ. ಇಸ್ರೇಲರು ದೇಶವನ್ನು ವಶಪಡಿಸಿಕೊಂಡಾಗ ಅಲ್ಲಿದ್ದ ನಿವಾಸಿಗಳನ್ನು ಓಡಿಸದೆ ಬಿಟ್ಟವರ ಸಂತತಿಯವರಾಗಿದ್ದರು. ಅವರು ಈಗಲೂ ಅಲ್ಲಿಯೇ ಇದ್ದಾರೆ.


ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.


ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮನೊಂದಿಗೂ ಇಸಾಕನೊಂದಿಗೂ ಯಾಕೋಬನೊಂದಿಗೂ ಮಾಡಿದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡನು.


“ನೀವು ದೇಶದೊಳಕ್ಕೆ ಹೋದಾಗ, ನಾನು ನಿಮ್ಮ ವೈರಿಗಳನ್ನು ಆ ದೇಶದಿಂದ ಹೊರಗಟ್ಟುವೆನು. ನಾನು ನಿಮ್ಮ ಮೇರೆಗಳನ್ನು ವಿಸ್ತರಿಸುವೆನು. ನಿಮಗೆ ಹೆಚ್ಚೆಚ್ಚಾಗಿ ಭೂಮಿ ದೊರೆಯುವುದು. ಪ್ರತಿ ವರ್ಷ ಮೂರುಸಲ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಿರಿ. ಆ ಸಮಯದಲ್ಲಿ ಯಾರೂ ನಿಮ್ಮಿಂದ ಭೂಮಿಯನ್ನು ಅಪಹರಿಸಲು ಪ್ರಯತ್ನಿಸುವುದಿಲ್ಲ.


ಆಗ ನಾನು ಯಾಕೋಬನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಇಸಾಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.


ಅವರಿಗೋಸ್ಕರ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆ. ನಾನು ಅವರ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದೆನು. ಬೇರೆ ಜನಾಂಗಗಳವರು ಆ ಸಂಗತಿಗಳನ್ನು ನೋಡಿದರು. ನಾನೇ ಯೆಹೋವನು!”


ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.


ಹೀರಾಮನು ತೂರಿನ ರಾಜನಾಗಿದ್ದನು. ಹೀರಾಮನು ಯಾವಾಗಲೂ ದಾವೀದನ ಸ್ನೇಹಿತನಾಗಿದ್ದನು. ದಾವೀದನ ನಂತರ ಸೊಲೊಮೋನನು ನೂತನ ರಾಜನಾದನೆಂದು ಹೀರಾಮನು ಕೇಳಿ, ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು.


ಯೆಹೋವನು ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿರಿ. ಆತನು ಇಸಾಕನಿಗೆ ಮಾಡಿದ ವಾಗ್ದಾನವನ್ನು ಜ್ಞಾಪಕಕ್ಕೆ ತನ್ನಿರಿ.


“ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಬಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು