Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:2 - ಪರಿಶುದ್ದ ಬೈಬಲ್‌

2 ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದಕ್ಕೆ ಅಬ್ರಾಮನು - ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನಾಗಿ ಹೋಗುವೆನಾದದರಿಂದ ನನ್ನ ಆಸ್ತಿಯೆಲ್ಲಾ ದಮಸ್ಕದ ಎಲೀಯೆಜರನ ಪಾಲಾಗುವದಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಅಬ್ರಾಮನು, “ಸಾರ್ವಭೌಮ ಯೆಹೋವ ದೇವರೇ, ಮಕ್ಕಳಿಲ್ಲದವನಾಗಿರುವ ನನಗೆ ಏನು ಕೊಡುವಿರಿ? ಈ ದಮಸ್ಕದ ಎಲೀಯೆಜೆರನಿಗೆ ನನ್ನ ಆಸ್ತಿ ಪಾಲಾಗಿಬಿಡುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:2
21 ತಿಳಿವುಗಳ ಹೋಲಿಕೆ  

ಆದರೆ ದೇವರು ಅಬ್ರಹಾಮನಿಗೆ ಇಲ್ಲಿ ಯಾವ ಭೂಮಿಯನ್ನೂ ಕೊಡಲಿಲ್ಲ. ದೇವರು ಅವನಿಗೆ ಒಂದು ಅಡಿ ಸ್ಥಳವನ್ನೂ ಕೊಡಲಿಲ್ಲ. ಆದರೆ ಮುಂದಿನ ಕಾಲದಲ್ಲಿ ಈ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವುದಾಗಿ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದನು. (ಅಬ್ರಹಾಮನಿಗೆ ಮಕ್ಕಳೇ ಇಲ್ಲದಿದ್ದಾಗ ಇದಾಯಿತು.)


ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು.


ಜ್ಞಾನಿಯಾದ ಸೇವಕನು ತನ್ನ ಯಜಮಾನನ ಅಯೋಗ್ಯ ಮಗನನ್ನೇ ತನ್ನ ಹತೋಟಿಯಲ್ಲಿಟ್ಟುಕೊಳ್ಳುವನು; ಅವನ ಸಹೋದರರೊಂದಿಗೂ ಆಸ್ತಿಯಲ್ಲಿ ಪಾಲು ಹೊಂದುವನು.


ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ.


ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು


ಬಳಿಕ ಯೋಸೇಫನು ತನ್ನ ಸೇವಕನಿಗೆ ಆಜ್ಞೆಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು.


ಆದ್ದರಿಂದ ಸಹೋದರರು ಯೋಸೇಫನ ಮನೆಯ ಮೇಲ್ವಿಚಾರಕನಾದ ಸೇವಕನ ಬಳಿಗೆ ಹೋಗಿ ಪ್ರವೇಶದ್ವಾರದ ಬಳಿಯಲ್ಲಿ ಅವನೊಂದಿಗೆ ಮಾತಾಡಿದರು.


ಆ ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು.


ನಿರೀಕ್ಷೆಯು ನೆರವೇರದಿದ್ದರೆ ಹೃದಯವು ವ್ಯಸನವಾಗಿರುವುದು. ಬಯಸಿದ್ದು ನೆರವೇರಿದರೆ ಆನಂದವು ತುಂಬಿಕೊಳ್ಳುವುದು.


ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.


ಅಬ್ರಹಾಮನ ಆಸ್ತಿಯನ್ನೆಲ್ಲಾ ನೋಡಿಕೊಳ್ಳಲು ಒಬ್ಬ ಸೇವಕನಿದ್ದನು. ಅಬ್ರಹಾಮನು ಆ ಸೇವಕನನ್ನು ಕರೆದು, “ನನ್ನ ತೊಡೆಯ ಕೆಳಗೆ ನಿನ್ನ ಕೈಯಿಟ್ಟು ನನಗೆ ಪ್ರಮಾಣಮಾಡು.


ಆ ರಾತ್ರಿ ಅವನು ಮತ್ತು ಅವನ ಸೇವಕರು ಹಠಾತ್ತನೆ ಶತ್ರುಗಳನ್ನು ಎದುರಿಸಿ ಸೋಲಿಸಿದರು; ದಮಸ್ಕಕ್ಕೆ ಉತ್ತರದಲ್ಲಿರುವ ಹೋಬಾದವರೆಗೂ ಹಿಂದಟ್ಟಿದರು.


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


ಮತ್ತೆ ಅಬ್ರಾಮನು, “ನೀನು ನನಗೆ ಮಗನನ್ನೇ ಕೊಟ್ಟಿಲ್ಲ. ಆದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದ ಸೇವಕನೊಬ್ಬನು ನನಗಿರುವುದನ್ನೆಲ್ಲ ಪಡೆದುಕೊಳ್ಳುವನು” ಎಂದು ಹೇಳಿದನು.


ದಮಸ್ಕಕ್ಕೆ ಇದು ದುಃಖಕರವಾದ ಸಂದೇಶ. ಯೆಹೋವನು ಹೇಳುವುದೇನೆಂದರೆ, “ದಮಸ್ಕವು ಈಗ ಒಂದು ದೊಡ್ಡ ನಗರವಾಗಿದೆ. ಆದರೆ ಅದು ನಾಶವಾಗುವದು. ಕೆಡವಲ್ಪಟ್ಟ ಕಟ್ಟಡಗಳು ಮಾತ್ರವೇ ದಮಸ್ಕದಲ್ಲಿರುವವು.


ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಹೆದರಿಕೊಂಡಿವೆ. ಅವು ಕೆಟ್ಟ ಸಮಾಚಾರವನ್ನು ಕೇಳಿದ್ದರಿಂದ ಹೆದರಿಕೊಂಡಿವೆ. ಅವುಗಳು ನಿರಾಶೆಗೊಂಡಿವೆ. ಅವು ಆತಂಕಪಡುತ್ತಿವೆ ಮತ್ತು ಭಯಪಡುತ್ತಿವೆ.


ಆ ಸೇವಕನು, “ಅವಳು ಮೋವಾಬ್ ಬೆಟ್ಟಪ್ರದೇಶದಿಂದ ನೊವೊಮಿಯ ಸಂಗಡ ಬಂದ ಮೋವಾಬ್ಯರ ಸ್ತ್ರೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು