Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:3 - ಪರಿಶುದ್ದ ಬೈಬಲ್‌

3 ಮತ್ತೆ ಅಬ್ರಾಮನು, “ನೀನು ನನಗೆ ಮಗನನ್ನೇ ಕೊಟ್ಟಿಲ್ಲ. ಆದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದ ಸೇವಕನೊಬ್ಬನು ನನಗಿರುವುದನ್ನೆಲ್ಲ ಪಡೆದುಕೊಳ್ಳುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವು ನನಗೆ ಮಕ್ಕಳನ್ನು ಕೊಟ್ಟಿಲ್ಲ. ನನ್ನ ಮನೆದಾಸನೇ ನನಗೆ ಉತ್ತರಾಧಿಕಾರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತಿರಿಗಿ ಅಬ್ರಾಮನು - ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು ಎಂದು ಹೇಳಲು ಯೆಹೋವನು ಅವನ ಸಂಗಡ ಮಾತಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನಂತರ ಅಬ್ರಾಮನು, “ನೀವು ನನಗೆ ಸಂತಾನವನ್ನು ಕೊಡಲಿಲ್ಲ. ನನ್ನ ಮನೆಯಲ್ಲಿರುವ ದಾಸನೇ ಉತ್ತರಾಧಿಕಾರಿಯಾಗಿರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:3
10 ತಿಳಿವುಗಳ ಹೋಲಿಕೆ  

ಲೋಟನು ಸೆರೆಯಾಳಾಗಿರುವುದು ಅಬ್ರಾಮನಿಗೆ ತಿಳಿಯಿತು. ಆದ್ದರಿಂದ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿದ ಗಂಡಾಳುಗಳನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವರಲ್ಲಿ ಮುನ್ನೂರ ಹದಿನೆಂಟು ಮಂದಿ ತರಬೇತಿ ಹೊಂದಿದ್ದ ಸೈನಿಕರಾಗಿದ್ದರು. ಅಬ್ರಾಮನು ಅವರೊಡನೆ ಹೊರಟು ಶತ್ರುಗಳನ್ನು ದಾನ್ ಊರಿನವರೆಗೂ ಹಿಂದಟ್ಟಿದನು.


ನೀನು ಚಿಕ್ಕಂದಿನಿಂದಲೇ ಗುಲಾಮನನ್ನು ಕೋಮಲನಾಗಿ ಸಾಕಿದರೆ, ಕೊನೆಯಲ್ಲಿ ಅವನು ಮೊಂಡನಾಗಿರುವನು.


ಪುರುಷರನ್ನೂ ಸ್ತ್ರೀಯರನ್ನೂ ಗುಲಾಮರನ್ನಾಗಿ ಕೊಂಡುಕೊಂಡೆ. ನನ್ನ ಮನೆಯಲ್ಲೇ ಹುಟ್ಟಿದ ಗುಲಾಮರೂ ನನಗಿದ್ದರು. ನನಗೆ ದನದ ಹಿಂಡುಗಳೂ ಕುರಿಮಂದೆಗಳೂ ಇದ್ದವು. ಜೆರುಸಲೇಮಿನಲ್ಲಿ ಇದ್ದವರೆಲ್ಲರಿಗಿಂತಲೂ ಹೆಚ್ಚು ವಸ್ತುಗಳನ್ನು ನಾನು ಪಡೆದಿದ್ದೆ.


ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


ಪ್ರೀತಿಯನ್ನು ಕಂಡಿಲ್ಲದಿದ್ದರೂ ಮದುವೆಯಾಗುವ ಸ್ತ್ರೀ ಮತ್ತು ತನ್ನ ಯಜಮಾನಿಯ ಸ್ಥಾನವನ್ನು ಕಸಿದುಕೊಳ್ಳುವ ಸೇವಕಿ.


ನಿರೀಕ್ಷೆಯು ನೆರವೇರದಿದ್ದರೆ ಹೃದಯವು ವ್ಯಸನವಾಗಿರುವುದು. ಬಯಸಿದ್ದು ನೆರವೇರಿದರೆ ಆನಂದವು ತುಂಬಿಕೊಳ್ಳುವುದು.


ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು