Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:8 - ಪರಿಶುದ್ದ ಬೈಬಲ್‌

8 ಅದಕ್ಕೆ ಅಬ್ರಾಮನು, “ಯೆಹೋವನೇ, ನನ್ನ ಒಡೆಯನೇ, ನನಗೆ ಈ ದೇಶವು ದೊರೆಯುತ್ತದೆಯೆಂದು ಖಚಿತಪಡಿಸಿಕೊಳ್ಳುವುದು ಹೇಗೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಅಬ್ರಾಮನು, “ಸರ್ವೇಶ್ವರಾ, ಇದು ನನ್ನ ಸೊತ್ತು ಎಂದು ತಿಳಿದುಕೊಳ್ಳುವುದು ಹೇಗೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳುಕೊಳ್ಳುವದು ಹೇಗೆ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕೆ ಅವನು, “ಸಾರ್ವಭೌಮ ಯೆಹೋವ ದೇವರೇ ನಾನು ಅದನ್ನು ನನ್ನ ಸೊತ್ತಾಗಿ ಹೊಂದುವೆನೆಂದು ಯಾವುದರಿಂದ ತಿಳಿದುಕೊಳ್ಳಲಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:8
15 ತಿಳಿವುಗಳ ಹೋಲಿಕೆ  

ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.


ಮರಿಯಳು ದೇವದೂತನಿಗೆ, “ಇದು ಹೇಗೆ ಸಂಭವಿಸುವುದು? ನಾನು ಮದುವೆಯಾಗಿಲ್ಲವಲ್ಲಾ!” ಎಂದು ಹೇಳಿದಳು.


ಯೆಹೋವನು ಅವನಿಗೆ, “ಇವೆಲ್ಲಾ ಸತ್ಯವೆಂದು ಮನದಟ್ಟು ಮಾಡಿಕೊಳ್ಳಲು ಒಂದು ಗುರುತನ್ನು ಕೇಳಿಕೊ. ನಿನಗೆ ಯಾವ ಗುರುತನ್ನು ಬೇಕಾದರೂ ಕೇಳಿಕೊ. ಆ ಗುರುತು ಆಳವಾದ ನರಕದಿಂದ ಬಂದ ಗುರುತಾದರೂ ಸರಿಯೇ ಅಥವಾ ಉನ್ನತವಾದ ಆಕಾಶದಿಂದ ಬಂದ ಗುರುತಾದರೂ ಸರಿಯೇ, ನಿನಗೆ ದಯಪಾಲಿಸುವೆನು” ಎಂದು ಹೇಳಿದನು.


ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುತ್ತಾನೆಂಬುದಕ್ಕೆ ಮತ್ತು ಮೂರನೆಯ ದಿನ ನಾನು ದೇವಾಲಯದವರೆಗೆ ಹೋಗುವೆನೆಂಬುದಕ್ಕೆ ಏನು ಗುರುತು?” ಎಂದು ಕೇಳಿದನು.


ಯೆಹೋವನೇ, ನೀನು ನನಗೆ ಮಾಡಲಿರುವ ಸಹಾಯಕ್ಕಾಗಿ ಸೂಚನೆಯೊಂದನ್ನು ತೋರಿಸು. ನನ್ನ ಶತ್ರುಗಳು ಆ ಸೂಚನೆಯನ್ನು ಕಂಡು ನಿರಾಶರಾಗುವರು. ನೀನು ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಸಹಾಯ ಮಾಡಲಿರುವಿಯೆಂದು ಅದು ತೋರಿಸುತ್ತದೆ.


ದೇವರು ಅಬ್ರಾಮನಿಗೆ, “ನಾವು ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ. ಮೂರು ವರ್ಷದ ಒಂದು ಹಸುವನ್ನೂ ಮೂರು ವರ್ಷದ ಒಂದು ಆಡನ್ನೂ ಮತ್ತು ಮೂರು ವರ್ಷದ ಒಂದು ಟಗರನ್ನೂ ತೆಗೆದುಕೊಂಡು ಬಾ. ಇದಲ್ಲದೆ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳವನ್ನೂ ತೆಗೆದುಕೊಂಡು ಬಾ” ಎಂದು ಹೇಳಿದನು.


ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು.


ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.


ನನ್ನ ಒಡಂಬಡಿಕೆಯನ್ನು ಮುರಿದ ಮತ್ತು ನನ್ನ ಸಮ್ಮುಖದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳದ ಜನರನ್ನು ನಾನು ತ್ಯಜಿಸುವೆನು. ಇವರು ನನ್ನ ಮುಂದೆ ಒಂದು ಕರುವನ್ನು ಎರಡು ತುಂಡುಗಳಾಗಿ ಕತ್ತರಿಸಿ ಇಟ್ಟು ಆ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.


ಯೆಹೂದದ ಮತ್ತು ಜೆರುಸಲೇಮಿನ ನಾಯಕರು, ಪ್ರಮುಖ ಅಧಿಕಾರಿಗಳು, ಯಾಜಕರು ಮತ್ತು ದೇಶದ ಸಕಲ ಜನರು ಇವರೆಲ್ಲ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಾಗ ಕರುವಿನ ಶರೀರದ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು