Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:2 - ಪರಿಶುದ್ದ ಬೈಬಲ್‌

2 ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಪಡೆಯುವ ಅವಕಾಶವನ್ನು ಕೊಡಲಿಲ್ಲ. ಆದ್ದರಿಂದ ನನ್ನ ಸೇವಕಿಯಾದ ಹಾಗರಳ ಬಳಿಗೆ ಹೋಗು. ಆಕೆಯಲ್ಲಿ ಹುಟ್ಟುವ ಮಗುವನ್ನು ನನ್ನ ಮಗುವಂತೆ ಸ್ವೀಕರಿಸಿಕೊಳ್ಳುವೆನು” ಎಂದು ಹೇಳಿದಳು. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳಿಗೆ ವಿಧೇಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಎಂದೇ ಸಾರಯಳು ಅಬ್ರಾಮನಿಗೆ, “ನೋಡಿ, ನನಗೇನೋ ಸರ್ವೇಶ್ವರ ಸ್ವಾಮಿ ಮಕ್ಕಳನ್ನು ದಯಪಾಲಿಸಲಿಲ್ಲ; ನೀವು ನನ್ನ ದಾಸಿಯನ್ನು ಸೇರಬೇಕು. ಬಹುಶಃ ಅವಳ ಮೂಲಕವಾದರೂ ನನಗೆ ಮಕ್ಕಳಾದೀತು,” ಎಂದು ಹೇಳಿದಳು. ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೀಗಿರಲಾಗಿ ಸಾರಯಳು ಅಬ್ರಾಮನಿಗೆ - ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಷ್ಟೆ; ನೀನು ನನ್ನ ದಾಸಿಯ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಸಾರಯಳು ಅಬ್ರಾಮನಿಗೆ, “ನಾನು ಮಕ್ಕಳನ್ನು ಹೆರದಂತೆ ಯೆಹೋವ ದೇವರು ನನಗೆ ಅಡ್ಡಿ ಮಾಡಿದ್ದಾರೆ. ದಯಮಾಡಿ ನೀನು ನನ್ನ ದಾಸಿಯ ಬಳಿಗೆ ಹೋಗು. ಒಂದು ವೇಳೆ ನಾನು ಅವಳ ಮೂಲಕ ಕುಟುಂಬವನ್ನು ಕಟ್ಟಬಲ್ಲೆ,” ಎಂದಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:2
16 ತಿಳಿವುಗಳ ಹೋಲಿಕೆ  

ಗುಲಾಮನು ಮದುವೆಯಾಗಿಲ್ಲದಿದ್ದರೆ, ಅವನ ಯಜಮಾನನು ಅವನಿಗೆ ಮದುವೆ ಮಾಡಿಸಬಹುದು. ಆ ಸ್ತ್ರೀಯು ಮಕ್ಕಳನ್ನು ಹೆತ್ತರೆ, ಆಕೆಯೂ ಆಕೆಯ ಮಕ್ಕಳೂ ಯಜಮಾನನ ಸ್ವತ್ತಾಗುವರು. ಗುಲಾಮನು ತನ್ನ ಸೇವಾ ವರ್ಷಗಳನ್ನು ಮುಗಿಸಿದ ತರುವಾಯ ಬಿಡುಗಡೆ ಹೊಂದುವನು.


ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು. ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು.


ಆಮೇಲೆ ದೇವರಾದ ಯೆಹೋವನು ಪುರುಷನಿಗೆ, “ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು.


ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ.


ನಗರದ್ವಾರದಲ್ಲಿ ಸೇರಿದ್ದ ಜನರೆಲ್ಲರು ಮತ್ತು ಹಿರಿಯರು ಸಾಕ್ಷಿಗಳಾಗಿದ್ದರು. ಅವರು, “ಈ ಸ್ತ್ರೀಯು ನಿನ್ನ ಮನೆಗೆ ಬರುವಳು. ಯೆಹೋವನು ಅವಳನ್ನು ರಾಹೇಲಳಂತೆಯೂ ಲೇಯಾಳಂತೆಯೂ ಮಾಡಲಿ. ರಾಹೇಲಳು ಮತ್ತು ಲೇಯಾಳು ಇಸ್ರೇಲಿನ ಮನೆಯನ್ನು ಕಟ್ಟಿದರು. ಎಫ್ರಾತಿನಲ್ಲಿ ಪ್ರಭಾವ ಶಾಲಿಯಾಗು! ಬೆತ್ಲೆಹೇಮಿನಲ್ಲಿ ಸುಪ್ರಸಿದ್ಧನಾಗು!


ನಂತರ, ದೇವರು ರಾಹೇಲಳ ಪ್ರಾರ್ಥನೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಅನುಗ್ರಹಿಸಿದನು.


ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು.


ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.


ಅದಕ್ಕೆ ಪುರುಷನು, “ನೀನು ನನಗಾಗಿ ಕೊಟ್ಟ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು; ಆದ್ದರಿಂದ ನಾನು ತಿಂದೆ” ಅಂದನು.


ರಾಹೇಲಳು, “ದೇವರು ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಒಬ್ಬ ಮಗನನ್ನು ಕೊಡಲು ನಿರ್ಧರಿಸಿದನು” ಎಂದು ಹೇಳಿ ಆ ಮಗುವಿಗೆ ದಾನ್ ಎಂದು ಹೆಸರಿಟ್ಟಳು.


ಒಂದು ದಿನ ಹಿರಿಯ ಮಗಳು ತನ್ನ ತಂಗಿಗೆ, “ಭೂಲೋಕದಲ್ಲೆಲ್ಲಾ ಸ್ತ್ರೀಯರೂ ಪುರುಷರೂ ಮದುವೆಯಾಗುತ್ತಾರೆ. ಆದರೆ ಇಲ್ಲಿ ನಾವು ಮದುವೆಯಾಗಲು ಯಾವ ಗಂಡಸರೂ ಇಲ್ಲ. ನಮ್ಮ ತಂದೆಗೂ ವಯಸ್ಸಾಗಿದೆ.


ಸಾರಯಳಿಗೆ ಮಕ್ಕಳಿರಲಿಲ್ಲ, ಯಾಕೆಂದರೆ, ಆಕೆ ಬಂಜೆಯಾಗಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು