Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:6 - ಪರಿಶುದ್ದ ಬೈಬಲ್‌

6 ಅದಕ್ಕೆ ಅಬ್ರಾಮನು ಸಾರಯಳಿಗೆ, “ನೀನು ಹಾಗರಳ ಯಜಮಾನಿ. ನೀನು ಅವಳಿಗೆ ಏನುಬೇಕಾದರೂ ಮಾಡಬಹುದು” ಎಂದು ಹೇಳಿದನು. ಆದ್ದರಿಂದ ಸಾರಯಳು ಹಾಗರಳನ್ನು ಶಿಕ್ಷಿಸಿದಳು. ಆಗ ಹಾಗರಳು ಓಡಿಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಅಬ್ರಾಮನು, “ನಿನ್ನ ದಾಸಿ ನಿನ್ನ ಕೈಯಲ್ಲೇ ಇದ್ದಾಳೆ. ನಿನಗಿಷ್ಟ ಬಂದಂತೆ ಮಾಡು,” ಎಂದುಬಿಟ್ಟನು. ಬಳಿಕ ಸಾರಯಳು ಕೊಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಹಾಗರಳು ಓಡಿಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳೆ; ಮನಸ್ಸುಬಂದಂತೆ ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಅಬ್ರಾಮನು ಸಾರಯಳಿಗೆ, “ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ. ನಿನ್ನ ಮನಸ್ಸಿಗೆ ಬಂದಂತೆ ಮಾಡು,” ಎಂದನು. ಆಗ ಸಾರಯಳು ಹಾಗರಳನ್ನು ಬಾಧಿಸಿದ್ದರಿಂದ, ಅವಳು ಸಾರಯಳಿಂದ ಓಡಿ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:6
15 ತಿಳಿವುಗಳ ಹೋಲಿಕೆ  

ಆಗ ರಾಜನಾದ ಚಿದ್ಕೀಯನು, “ಯೆರೆಮೀಯನು ನಿಮ್ಮ ಅಧಿನದಲ್ಲಿದ್ದಾನೆ. ನೀವು ಏನು ಬೇಕಾದರೂ ಮಾಡಿ” ಎಂದು ಆ ಅಧಿಕಾರಿಗಳಿಗೆ ಹೇಳಿದನು.


ಪುರುಷರೇ, ಇದೇ ರೀತಿಯಲ್ಲಿ ನೀವು ನಿಮ್ಮ ಪತ್ನಿಯರನ್ನು ಅರ್ಥಮಾಡಿಕೊಂಡು ಅವರೊಂದಿಗೆ ಬಾಳಬೇಕು. ನೀವು ನಿಮ್ಮ ಪತ್ನಿಯರಿಗೆ ಗೌರವ ತೋರಬೇಕು. ಅವರು ನಿಮಗಿಂತ ದುರ್ಬಲರು. ಆದರೆ ದೇವರು ನಿಮಗೆ ಕೊಡುವ ಆಶೀರ್ವಾದವನ್ನೇ ಅಂದರೆ ನಿಜಜೀವವನ್ನು ನೀಡುವ ಕೃಪೆಯನ್ನೇ ನಿಮ್ಮ ಪತ್ನಿಯರಿಗೂ ಕೊಡುವನು. ನೀವು ಹೀಗೆ ಜೀವಿಸುವುದಾಗಿದ್ದರೆ ಪ್ರಾರ್ಥಿಸಲು ನಿಮಗೆ ಅಡ್ಡಿಯಾಗುವುದಿಲ್ಲ.


ನಿನ್ನ ಯಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ.


ನೀನು ಸೇವಕನಿಗೆ ಕೇವಲ ಮಾತಿನಿಂದ ಹೇಳಿದರೆ ಅವನು ಪಾಠವನ್ನು ಕಲಿತುಕೊಳ್ಳುವುದಿಲ್ಲ. ಅವನು ನಿನ್ನ ಮಾತುಗಳನ್ನು ಅರ್ಥಮಾಡಿಕೊಂಡರೂ ವಿಧೇಯನಾಗುವುದಿಲ್ಲ.


ಮನೆಯಿಂದ ದೂರವಿರುವ ಗಂಡಸು ಗೂಡಿನಿಂದ ದೂರವಿರುವ ಪಕ್ಷಿಯಂತಿರುವನು.


ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.


ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ.


ಅದಕ್ಕೆ ಯೆಹೋವನು ಸೈತಾನನಿಗೆ, “ಸರಿ, ಯೋಬನನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ; ಆದರೆ ಅವನ ಪ್ರಾಣವನ್ನು ಮಾತ್ರ ತೆಗೆಯಬೇಡ” ಎಂದು ಅಪ್ಪಣೆಕೊಟ್ಟನು.


ಮೋಶೆಯು ಮಾಡಿದ್ದು ಫರೋಹನಿಗೂ ತಿಳಿಯಿತು. ಆದ್ದರಿಂದ ಮೋಶೆಯನ್ನು ಕೊಲ್ಲಿಸಲು ಅವನು ತೀರ್ಮಾನಿಸಿದನು. ಆದರೆ ಮೋಶೆ ಫರೋಹನ ಬಳಿಯಿಂದ ಮಿದ್ಯಾನ್ ದೇಶಕ್ಕೆ ಓಡಿಹೋದನು.


ಆ ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು.


ಯೆಹೋವನ ದೂತನು ಹಾಗರಳಿಗೆ, “ಸಾರಯಳು ನಿನ್ನ ಯಜಮಾನಿ. ನೀನು ಆಕೆಯ ಬಳಿಗೆ ಹಿಂತಿರುಗಿ ಹೋಗಿ ಆಕೆಗೆ ವಿಧೇಯಳಾಗಿರು” ಎಂದು ಹೇಳಿದನು.


ನಾವು ಈಗ ನಿಮ್ಮ ಸೇವಕರು. ನಿಮಗೆ ಸರಿ ಎನಿಸಿದ್ದನ್ನು ನೀವು ಮಾಡಬಹುದು” ಎಂದು ಉತ್ತರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು