Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:8 - ಪರಿಶುದ್ದ ಬೈಬಲ್‌

8 ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ ಎಂದು ಕೇಳಲು ಅವಳು - ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಸಾರಯಳ ದಾಸಿ ಹಾಗರಳೇ, ನೀನು ಎಲ್ಲಿಂದ ಬಂದೆ? ನೀನು ಎಲ್ಲಿಗೆ ಹೋಗುತ್ತೀ?” ಎಂದು ವಿಚಾರಿಸಿದನು. ಅವಳು, “ನನ್ನ ಯಜಮಾನಿ ಸಾರಯಳನ್ನು ಬಿಟ್ಟು ಓಡಿ ಹೋಗುತ್ತಿದ್ದೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:8
15 ತಿಳಿವುಗಳ ಹೋಲಿಕೆ  

ದೇವರಾದ ಯೆಹೋವನು ಪುರುಷನಿಗೆ, “ನೀನು ಎಲ್ಲಿರುವೆ?” ಎಂದು ಕೂಗಿ ಕೇಳಿದನು.


ಅದಕ್ಕೆ ಯೆಹೋವನು, “ನೀನು ಮಾಡಿದ್ದೇನು? ನೀನು ನಿನ್ನ ತಮ್ಮನನ್ನೇ ಕೊಲೆಮಾಡಿದೆ! ಅವನ ರಕ್ತವು ಭೂಮಿಯ ಕಡೆಯಿಂದ ನನ್ನನ್ನು ಕೂಗುತಿದೆ.


ನಿನ್ನ ಯಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ.


ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.


ಹಾಗರಳು ಅಬ್ರಾಮನಿಂದ ಗರ್ಭಿಣಿಯಾದಾಗ ತನ್ನ ಯಜಮಾನಿಯಾದ ಸಾರಯಳನ್ನೇ ಕಡೆಗಣಿಸತೊಡಗಿದಳು.


ಸಾರಯಳು ಅಬ್ರಾಮನ ಹೆಂಡತಿ. ಆಕೆಗೆ ಮಕ್ಕಳಿರಲಿಲ್ಲ. ಸಾರಯಳಿಗೆ ಈಜಿಪ್ಟಿನ ಒಬ್ಬ ಸೇವಕಿಯಿದ್ದಳು. ಅವಳ ಹೆಸರು ಹಾಗರಳು.


ಯೆಹೋವನ ದೂತನು ಹಾಗರಳಿಗೆ, “ಸಾರಯಳು ನಿನ್ನ ಯಜಮಾನಿ. ನೀನು ಆಕೆಯ ಬಳಿಗೆ ಹಿಂತಿರುಗಿ ಹೋಗಿ ಆಕೆಗೆ ವಿಧೇಯಳಾಗಿರು” ಎಂದು ಹೇಳಿದನು.


ಎಲೀಯನು ಅಲ್ಲಿನ ಒಂದು ಗುಹೆಗೆ ಹೋಗಿ ರಾತ್ರಿಯೆಲ್ಲಾ ಅಲ್ಲಿ ಕಳೆದನು. ಆಗ ಯೆಹೋವನು ಎಲೀಯನೊಂದಿಗೆ ಮಾತನಾಡಿ, “ಎಲೀಯನೇ, ನೀನು ಇಲ್ಲಿರುವುದೇಕೆ?” ಎಂದು ಕೇಳಿದನು.


ಎಲೀಯನಿಗೆ ಆ ಧ್ವನಿಯು ಕೇಳಿಸಿದಾಗ, ಅವನು ತನ್ನ ಮೇಲಂಗಿಯಿಂದ ಮುಖವನ್ನು ಮುಚ್ಚಿಕೊಂಡನು. ನಂತರ ಅವನು ಗುಹೆಯ ಹತ್ತಿರಕ್ಕೆ ಹೋಗಿ, ಅದರ ದ್ವಾರದಲ್ಲಿ ನಿಂತುಕೊಂಡನು. ಆಗ ಆ ಧ್ವನಿಯು, “ಎಲೀಯನೇ, ನೀನು ಏಕೆ ಇಲ್ಲಿರುವೆ?” ಎಂದು ಅವನನ್ನು ಕೇಳಿತು.


ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವದೂತನು ಆಕಾಶದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ.


ಆ ವೃದ್ಧನು ಬೀದಿಯ ಮುಖ್ಯಸ್ಥಳದಲ್ಲಿ ಪ್ರಯಾಣಿಕನನ್ನು (ಲೇವಿಯನ್ನು) ನೋಡಿದನು. ಆ ವೃದ್ಧನು, “ನೀನು ಎಲ್ಲಿಗೆ ಹೋಗಬೇಕು? ಎಲ್ಲಿಂದ ಬಂದಿರುವೆ?” ಎಂದು ಅವನನ್ನು ಕೇಳಿದನು.


ಗೇಹಜಿಯು ಒಳಗೆ ಬಂದು ತನ್ನ ಒಡೆಯನಾದ ಎಲೀಷನ ಮುಂದೆ ನಿಂತುಕೊಂಡನು. ಎಲೀಷನು ಗೇಹಜಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಗೇಹಜಿಯು, “ನಾನು ಎಲ್ಲಿಗೂ ಹೋಗಿರಲಿಲ್ಲ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು