Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:1 - ಪರಿಶುದ್ದ ಬೈಬಲ್‌

1 ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:1
45 ತಿಳಿವುಗಳ ಹೋಲಿಕೆ  

ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು.


ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ಜೀವಿಸುವವರ ನಾಡಿನಲ್ಲಿ ನಾನು ಯೆಹೋವನ ಸೇವೆಯನ್ನು ಮುಂದುವರಿಸುವೆನು.


ಆದ್ದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರಬೇಕು.


“ಯೆಹೋವನೇ, ನಾನು ನಿನಗೆ ಪೂರ್ಣಹೃದಯದಿಂದ ನಂಬಿಗಸ್ತನಾಗಿ ಸೇವೆಮಾಡಿದ್ದನ್ನು ಜ್ಞಾಪಿಸಿಕೋ. ನಿನಗೆ ಇಷ್ಟವಾದದ್ದನ್ನೆಲ್ಲ ನಾನು ಮಾಡಿದ್ದೇನೆ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.


ನಿಮ್ಮ ದೇವರಾದ ಯೆಹೋವನಿಗೆ ನೀವು ನಂಬಿಗಸ್ತರಾಗಿರಬೇಕು.


ಯೇಸು ತನ್ನ ಶಿಷ್ಯರ ಕಡೆಗೆ ದೃಷ್ಟಿಸಿ, “ಇದು ಮನುಷ್ಯರಿಗೆ ಅಸಾಧ್ಯವಾದ ಕಾರ್ಯ. ಆದರೆ ದೇವರಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.


“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೆ ಅನೇಕ ಮಕ್ಕಳನ್ನು ಕೊಡುವಂತೆಯೂ ನೀನು ಮಹಾಜನಾಂಗದ ತಂದೆಯಾಗುವಂತೆಯೂ ನಾನು ಪ್ರಾರ್ಥಿಸುವೆನು.


“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.


ಸೊಲೊಮೋನನು, “ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಬಹಳ ದಯಾಪರನಾಗಿದ್ದೆ. ಅವನು ನಿನ್ನನ್ನು ಅನುಸರಿಸಿದನು. ಅವನು ಒಳ್ಳೆಯವನಾಗಿದ್ದು ನೀತಿವಂತನಾಗಿ ಬದುಕಿದನು. ಅವನ ನಂತರ ಅವನ ಮಗನನ್ನು ಅವನ ಸಿಂಹಾಸನದಲ್ಲಿ ಕುಳ್ಳಿರಿಸಿ ಆಳಲು ನೇಮಿಸಿ ನೀನು ಮಹಾಕೃಪೆಯನ್ನು ತೋರಿಸಿದೆ.


ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.


ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ಆದ್ದರಿಂದ, ನಡುಗಿಸಲಾಗದಿರುವ ರಾಜ್ಯವನ್ನು ನಾವು ಹೊಂದಿರುವುದರಿಂದ ದೇವರಿಗೆ ಕೃತಜ್ಞತೆಯಿಂದಿರಬೇಕು. ಆತನಿಗೆ ಮೆಚ್ಚಿಕೆಕರವಾದ ಆರಾಧನೆಯನ್ನು ಭಯಭಕ್ತಿಯಿಂದ ಮಾಡಬೇಕು.


ಈ ಕಾರಣದಿಂದ ನಾನು ಯಾವುದನ್ನು ಸರಿಯಾದದ್ದು ಎಂದು ನಂಬಿದ್ದೇನೋ ಅದನ್ನು ದೇವರ ಮುಂದೆಯೂ ಮನುಷ್ಯರ ಮುಂದೆಯೂ ಮಾಡಲು ಯಾವಾಗಲು ಪ್ರಯತ್ನಿಸುತ್ತಿದ್ದೇನೆ.


ಬಳಿಕ ಇಸ್ರೇಲನು ಯೋಸೇಫನನ್ನು ಆಶೀರ್ವದಿಸಿ ಹೀಗೆಂದನು: “ನನ್ನ ಪೂರ್ವಿಕರಾದ ಅಬ್ರಹಾಮನೂ ಇಸಾಕನೂ ನಮ್ಮ ದೇವರನ್ನು ಆರಾಧಿಸಿದರು. ಆ ದೇವರೇ ನನ್ನನ್ನು ನನ್ನ ಜೀವಮಾನವೆಲ್ಲಾ ನಡೆಸಿದನು.


ಯೆಹೋವನು ಅಬ್ರಾಮನಿಗೆ, “ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ಹೊರಡು. ನಿನ್ನ ತಂದೆಯ ಕುಟುಂಬವನ್ನು ಬಿಟ್ಟು ನಾನು ತೋರಿಸುವ ದೇಶಕ್ಕೆ ಹೋಗು.


ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.


ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು.


ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ.


“ನೀನು ದೇವರ ರಹಸ್ಯಗಳನ್ನು ಅರ್ಥಮಾಡಿಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರ ಜ್ಞಾನದ ಮೇರೆಗಳನ್ನು ತಿಳಿದುಕೊಳ್ಳಬಲ್ಲೆಯಾ?


ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”


ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.


ಆದರೆ ಯೆಹೋವನು ಮೋಶೆಗೆ, “ಯೆಹೋವನ ಶಕ್ತಿಗೆ ಮಿತಿಯಿಲ್ಲ. ನಾನು ಹೇಳುತ್ತಿರುವ ಸಂಗತಿಗಳು ನಡೆಯುವುದನ್ನು ನೀನು ನೋಡುವೆ” ಎಂದು ಹೇಳಿದನು.


“ನಾನು ಯೆಹೋವನೇ. ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕಾಣಿಸಿಕೊಂಡೆನು. ಅವರು ನನ್ನನ್ನು ‘ಎಲ್ ಶದ್ದಾಯ್’ (ಸರ್ವಶಕ್ತನಾದ ದೇವರು) ಎಂದು ಕರೆದರು. ಆದರೆ ನಾನು ನನ್ನನ್ನು ಯೆಹೋವ ಎಂಬ ನನ್ನ ಹೆಸರಿನಲ್ಲಿ ಅವರಿಗೆ ಗೊತ್ತುಪಡಿಸಿಕೊಳ್ಳಲಿಲ್ಲ.


ಅಬ್ರಹಾಮನು ಮಮ್ರೆಯಲ್ಲಿದ್ದ ಓಕ್ ಮರಗಳ ತೋಪಿನ ಸಮೀಪದಲ್ಲಿ ವಾಸಿಸುತ್ತಿದ್ದಾಗ ಯೆಹೋವನು ಅವನಿಗೆ ಕಾಣಿಸಿಕೊಂಡನು. ಅಂದು ಬಿಸಿಲಿನ ತಾಪದಿಂದಾಗಿ ಅಬ್ರಹಾಮನು ತನ್ನ ಗುಡಾರದ ಬಾಗಿಲ ಬಳಿ ಕುಳಿತಿದ್ದನು.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ಈಗಲಾದರೋ ಇಸ್ರೇಲಿನ ದೇವರಾದ ಯೆಹೋವನೇ, ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಮಾಡಿದ ಇತರ ವಾಗ್ದಾನಗಳನ್ನು ಈಗ ನೆರವೇರಿಸು. ನೀನು ನನ್ನ ತಂದೆಗೆ, ‘ದಾವೀದನೇ, ನೀನು ನನ್ನನ್ನು ಅನುಸರಿಸಿದಂತೆ ನಿನ್ನ ಮಕ್ಕಳೂ ಎಚ್ಚರಿಕೆಯಿಂದ ನನ್ನನ್ನು ಅನುಸರಿಸಿದರೆ, ನಿನ್ನ ಕುಟುಂಬದಲ್ಲಿನ ಯಾವನಾದರೊಬ್ಬನು ಇಸ್ರೇಲಿನ ಜನರನ್ನು ಆಳುತ್ತಲೇ ಇರುವನು’ ಎಂದು ಹೇಳಿದೆ.


ಅಬ್ರಾಮನಿಗೆ ಎಂಭತ್ತಾರು ವರ್ಷವಾಗಿದ್ದಾಗ ಹಾಗರಳಲ್ಲಿ ಇಷ್ಮಾಯೇಲನು ಜನಿಸಿದನು.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರ ಅನ್ಯೋನ್ಯತೆಯಲ್ಲಿ 300 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.


ಆದರೆ ನನ್ನ ಒಡೆಯನು ನನಗೆ, ‘ನಾನು ಯೆಹೋವನ ಸೇವೆ ಮಾಡುತ್ತಿದ್ದೇನೆ. ಆದ್ದರಿಂದ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನಿನಗೆ ಸಹಾಯ ಮಾಡುವನು. ಅಲ್ಲಿರುವ ನನ್ನ ತಂದೆಯ ಕುಟುಂಬದವರಲ್ಲಿ ನೀನು ನನ್ನ ಮಗನಿಗಾಗಿ ಒಬ್ಬ ಕನ್ಯೆಯನ್ನು ಕಂಡುಕೊಳ್ಳುವೆ.


ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನೀನು ಈಜಿಪ್ಟಿಗೆ ಹೋಗಬೇಡ. ನೀನು ಯಾವ ಪ್ರದೇಶದಲ್ಲಿರಬೇಕೆಂದು ನಾನು ಆಜ್ಞಾಪಿಸಿದೆನೋ ಆ ಪ್ರದೇಶದಲ್ಲಿ ವಾಸಿಸು.


ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು.


ದೇವರು ಅವನಿಗೆ, “ನಾನೇ ದೇವರು, ನಾನೇ ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗಲು ಹೆದರಬೇಡ. ಈಜಿಪ್ಟಿನಲ್ಲಿ ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವೆ.


ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.”


ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.


ಬಳಿಕ ಇಸ್ರೇಲನು ಯೋಸೇಫನಿಗೆ, “ಸರ್ವಶಕ್ತನಾದ ದೇವರು ನನಗೆ ಕಾನಾನ್ ದೇಶದ ಲೂಜ್ ಎಂಬ ಸ್ಥಳದಲ್ಲಿ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.


ನಾನು ದೇವರ ಮುಂದೆ ಅಡ್ಡಬೀಳುತ್ತೇನೆ, ಆದರೆ ನನ್ನ ಕಣ್ಣುಗಳು ಮುಚ್ಚಲ್ಪಟ್ಟಿಲ್ಲ. ನಾನು ದೇವರ ವಾಕ್ಯಗಳನ್ನು ಕೇಳುತ್ತಿದ್ದೇನೆ. ನಾನು ಮಹೋನ್ನತನಾದ ದೇವರಿಂದ ಜ್ಞಾನವನ್ನು ಹೊಂದಿಕೊಳ್ಳುತ್ತಿದ್ದೇನೆ. ಸರ್ವಶಕ್ತನಾದ ದೇವರು ತೋರಿಸುವ ಸಂಗತಿಗಳನ್ನು ನಾನು ನೋಡುತ್ತಿದ್ದೇನೆ.


ಒಳ್ಳೆಯವನೂ ಯಥಾರ್ಥನೂ ಆದ ಮನುಷ್ಯನು ಕ್ಷೇಮವಾಗಿರುವನು. ಮೋಸಮಾಡುವ ಕುಟಿಲ ಮನುಷ್ಯನಾದರೋ ಸಿಕ್ಕಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು