Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:10 - ಪರಿಶುದ್ದ ಬೈಬಲ್‌

10 ನೀನೂ ಮತ್ತು ನಿನ್ನ ಎಲ್ಲಾ ಸಂತತಿಯವರು ಕೈಕೊಳ್ಳಬೇಕಾದ ನಿಬಂಧನೆಯೇನೆಂದರೆ, ನಿಮ್ಮಲ್ಲಿ ಹುಟ್ಟಿದ ಪ್ರತಿಯೊಂದು ಗಂಡುಮಗುವಿಗೂ ಸುನ್ನತಿ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀನೂ ನಿನ್ನ ಸಂತತಿಯವರೂ ಕೈಗೊಳ್ಳಬೇಕಾದ ನನ್ನ ಒಡಂಬಡಿಕೆ ಇದು: ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನೂ ನಿನ್ನ ಹಿಂದೆ ಬರುವ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ನಿಬಂಧನೆಯು ಯಾವದಂದರೆ - ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕೆಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನೂ, ನಿನ್ನ ತರುವಾಯ ನಿನ್ನ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ: ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:10
29 ತಿಳಿವುಗಳ ಹೋಲಿಕೆ  

“ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ದೇವರು ಒಬ್ಬನೇ. ಆತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ.


ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ, “ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲಿನ ಗಂಡಸರಿಗೆ ಇನ್ನೊಮ್ಮೆ ಸುನ್ನತಿಯನ್ನು ಮಾಡಿಸು” ಎಂದು ಹೇಳಿದನು.


ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು.


ನೀವು ಹುಟ್ಟಿದಂದಿನಿಂದ ಅನ್ಯಜನರಾಗಿದ್ದೀರಿ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಯೆಹೂದ್ಯರು ಕರೆಯುತ್ತಾರೆ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಕರೆಯುವ ಯೆಹೂದ್ಯರು ತಮ್ಮ ಬಗ್ಗೆ “ಸುನ್ನತಿಯವರು” ಎಂದು ಹೇಳಿಕೊಳ್ಳುತ್ತಾರೆ. (ಅವರ ಸುನ್ನತಿಯು ಶರೀರದಲ್ಲಿ ಕೈಯಿಂದ ಮಾಡಲ್ಪಡುತ್ತದೆ.)


ನೀವು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಕೆಲವರು ನಿಮ್ಮನ್ನು ಒತ್ತಾಯಿಸುತ್ತಿದ್ದಾರೆ. ತಮ್ಮನ್ನು (ಯೆಹೂದ್ಯರು) ಸ್ವೀಕರಿಸಿಕೊಳ್ಳಲಿ ಎಂಬುದೇ ಅವರ ಉದ್ದೇಶ. ಕ್ರಿಸ್ತನ ಶಿಲುಬೆಯ ದೆಸೆಯಿಂದ ತಾವು ಹಿಂಸೆಗೆ ಒಳಗಾಗಬಹುದೆಂಬ ಭಯದಿಂದ ಅವರು ಹೀಗೆ ಮಾಡುತ್ತಾರೆ.


ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ.


ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.


ಏಕೆಂದರೆ ಒಬ್ಬನು ನೀತಿವಂತನಾಗುವುದು ನಂಬಿಕೆಯ ಮೂಲಕವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಲು ಅವನು ಮಾಡಿದ ಕಾರ್ಯಗಳಿಂದಲ್ಲ. ನಾವು ನಂಬುವುದೂ ಇದನ್ನೇ.


ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.


ಕೇವಲ ಬಾಹ್ಯ ದೇಹದಲ್ಲಿ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಕೇವಲ ದೇಹದ ಹೊರಭಾಗದ ಸುನ್ನತಿಯು ನಿಜವಾದ ಸುನ್ನತಿಯಲ್ಲ.


ಮೋಶೆಯು ನಿಮಗೆ ಸುನ್ನತಿಯ ಬಗ್ಗೆ ಕಟ್ಟಳೆಯನ್ನು ಕೊಟ್ಟನು. (ಆದರೆ ನಿಜವಾಗಿಯೂ ಸುನ್ನತಿ ಎಂಬ ಸಂಸ್ಕಾರವನ್ನು ನಿಮಗೆ ಕೊಟ್ಟವನು ಮೋಶೆಯಲ್ಲ. ಅವನಿಗಿಂತ ಮೊದಲೇ ಜೀವಿಸಿದ್ದ ನಮ್ಮ ಜನರಿಂದ ಈ ಸಂಸ್ಕಾರವು ಬಂದಿದೆ.) ಆದ್ದರಿಂದ ಕೆಲವೊಮ್ಮೆ ನೀವು ಸಬ್ಬತ್‌ದಿನದಲ್ಲಿ ಮಗುವಿಗೆ ಸುನ್ನತಿಮಾಡುತ್ತೀರಿ.


ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”


ಯೆಹೋಶುವನು ಸುನ್ನತಿ ಮಾಡಲು ಕಾರಣವೇನೆಂದರೆ: ಈಜಿಪ್ಟನ್ನು ಬಿಟ್ಟುಹೊರಟಾಗ ಸೈನ್ಯಸೇರಲು ಯೋಗ್ಯರಾದ ಇಸ್ರೇಲಿನ ಗಂಡಸರಿಗೆ ಸುನ್ನತಿಯಾಗಿತ್ತು. ಅವರು ಮರುಭೂಮಿಯಲ್ಲಿದ್ದಾಗ ಅನೇಕ ಯುದ್ಧವೀರರು ಯೆಹೋವನಿಗೆ ಕಿವಿಗೂಡಲಿಲ್ಲ. ಆದಕಾರಣ, “ಹಾಲೂ ಜೇನೂ ಹರಿಯುವ ವಾಗ್ದತ್ತ ನಾಡನ್ನು” ಆ ಜನರು ಕಾಣುವುದಿಲ್ಲ ಎಂದು ಯೆಹೋವನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರಿಗೆ ಆ ಭೂಮಿಯನ್ನು ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಆ ಜನರು ಯೆಹೋವನ ಮಾತನ್ನು ಕೇಳದೆ ಅವಿಧೇಯರಾದ ಕಾರಣ ಆತನು ಅವರನ್ನು ನಲವತ್ತು ವರ್ಷಗಳ ಕಾಲ ಅಂದರೆ ಆ ಯೋಧರು ಸಾಯುವವರೆಗೆ ಮರುಭೂಮಿಯಲ್ಲಿ ಅಲೆದಾಡುವಂತೆ ಮಾಡಿದನು. ಆ ಎಲ್ಲ ಯುದ್ಧವೀರರು ಸತ್ತುಹೋದರು ಮತ್ತು ಅವರ ಸ್ಥಾನಕ್ಕೆ ಅವರ ಗಂಡುಮಕ್ಕಳು ಬಂದರು. ಆದರೆ ಈಜಿಪ್ಟಿನಿಂದ ಹೊರಟು ಮರುಭೂಮಿಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಹುಟ್ಟಿದ ಯಾವ ಗಂಡುಮಕ್ಕಳಿಗೂ ಸುನ್ನತಿ ಆಗಿರಲಿಲ್ಲ. ಅದಕ್ಕಾಗಿ ಯೆಹೋಶುವನು ಅವರಿಗೆ ಸುನ್ನತಿ ಮಾಡಿಸಿದನು.


“ಆದ್ದರಿಂದ ಹಠಮಾರಿಗಳಾಗಬೇಡಿರಿ. ನಿಮ್ಮ ಹೃದಯಗಳನ್ನು ಯೆಹೋವನಿಗೆ ಕೊಡಿರಿ.


ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಪರದೇಶದವನು ಯೆಹೋವನ ಪಸ್ಕ ಭೋಜನದಲ್ಲಿ ಪಾಲುಗಾರನಾಗಬೇಕೆಂದು ಬಯಸಿದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕು. ಆಗ ಅವನು ಇಸ್ರೇಲಿನವನಾಗುವುದರಿಂದ ಭೋಜನದಲ್ಲಿ ಪಾಲುಗಾರನಾಗಬಹುದು. ಆದರೆ ಸುನ್ನತಿಯಾಗಿಲ್ಲದವನು ಪಸ್ಕದ ಊಟ ಮಾಡಕೂಡದು.


ಆದರೆ ಚಿಪ್ಪೋರಳು ಕಲ್ಲಿನ ಚೂರಿಯನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿಮಾಡಿ ಚರ್ಮವನ್ನು ತೆಗೆದುಕೊಂಡು ಮೋಶೆಯ ಪಾದಗಳಿಗೆ ಮುಟ್ಟಿಸಿ, “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಅಂದಳು.


ಆದರೆ ನೀನು ಮತ್ತು ನಿಮ್ಮ ಪಟ್ಟಣದಲ್ಲಿರುವ ಪ್ರತಿಯೊಬ್ಬ ಗಂಡಸು ನಮ್ಮಂತೆ ಸುನ್ನತಿ ಮಾಡಿಸಿಕೊಂಡರೆ ನೀನು ಆಕೆಯನ್ನು ಮದುವೆಯಾಗಬಹುದು.


ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು.


ಅಬ್ರಹಾಮನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೆ ಅಂದರೆ ಅವನ ಮನೆಯಲ್ಲಿ ಹುಟ್ಟಿದ ಎಲ್ಲಾ ಸೇವಕರಿಗೆ ಮತ್ತು ಅವನು ಕ್ರಯಕ್ಕೆ ತೆಗೆದುಕೊಂಡಿದ್ದ ಎಲ್ಲಾ ಸೇವಕರಿಗೆ ಸುನ್ನತಿಯಾಯಿತು.


ಇಸಾಕನಿಗೆ ಎಂಟು ದಿನಗಳಾಗಿದ್ದಾಗ, ದೇವರ ಆಜ್ಞೆಗನುಸಾರವಾಗಿ ಅಬ್ರಹಾಮನು ಅವನಿಗೆ ಸುನ್ನತಿ ಮಾಡಿದನು.


ಆದರೆ ನಾವು ಮಾಡಬೇಕಾದ ಒಂದೇ ಒಂದು ಕಾರ್ಯವೇನೆಂದರೆ, ಇಸ್ರೇಲರಂತೆ ನಮ್ಮ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು