Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:11 - ಪರಿಶುದ್ದ ಬೈಬಲ್‌

11-12 ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀವು ನಿಮ್ಮ ಜನನಾಂಗದ ಮುಂದೊಗಲನ್ನು ಸುನ್ನತಿಮಾಡಿಸಿಕೊಳ್ಳಬೇಕು. ಅದೇ ನಿಮಗೂ ನನಗೂ ಆದ ಒಡಂಬಡಿಕೆಯ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಮಾನಸ್ಥಾನದಲ್ಲಿ ಸುನ್ನತಿ ಮಾಡಿಸಿಕೊಳ್ಳಬೇಕು; ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಸುನ್ನತಿ ಮಾಡಿಸಿಕೊಳ್ಳುವುದು, ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತಾಗಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:11
9 ತಿಳಿವುಗಳ ಹೋಲಿಕೆ  

ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.


“ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.


“ಆದ್ದರಿಂದ ಹಠಮಾರಿಗಳಾಗಬೇಡಿರಿ. ನಿಮ್ಮ ಹೃದಯಗಳನ್ನು ಯೆಹೋವನಿಗೆ ಕೊಡಿರಿ.


ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಹೆಂಡತಿಯಾದ ಮೀಕಲಳನ್ನು ನನ್ನ ಬಳಿಗೆ ಕಳುಹಿಸು. ಅವಳನ್ನು ನನಗೆ ಕೊಡುವುದಾಗಿ ಮಾತುಕತೆಯಾಗಿತ್ತು. ಅವಳನ್ನು ಪಡೆಯಲು ನಾನು ನೂರು ಜನ ಫಿಲಿಷ್ಟಿಯರನ್ನು ಕೊಂದಿದ್ದೇನೆ” ಎಂದು ಹೇಳಿದನು.


ಯೆಹೋಶುವನು ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲರಿಗೆ ಗಿಬೆಯತ್ ಹಾರಲೋತ್‌ನಲ್ಲಿ ಸುನ್ನತಿಯನ್ನು ಮಾಡಿದನು.


ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಪರದೇಶದವನು ಯೆಹೋವನ ಪಸ್ಕ ಭೋಜನದಲ್ಲಿ ಪಾಲುಗಾರನಾಗಬೇಕೆಂದು ಬಯಸಿದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕು. ಆಗ ಅವನು ಇಸ್ರೇಲಿನವನಾಗುವುದರಿಂದ ಭೋಜನದಲ್ಲಿ ಪಾಲುಗಾರನಾಗಬಹುದು. ಆದರೆ ಸುನ್ನತಿಯಾಗಿಲ್ಲದವನು ಪಸ್ಕದ ಊಟ ಮಾಡಕೂಡದು.


ಆದರೆ ಚಿಪ್ಪೋರಳು ಕಲ್ಲಿನ ಚೂರಿಯನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿಮಾಡಿ ಚರ್ಮವನ್ನು ತೆಗೆದುಕೊಂಡು ಮೋಶೆಯ ಪಾದಗಳಿಗೆ ಮುಟ್ಟಿಸಿ, “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಅಂದಳು.


ಇದಲ್ಲದೆ ದೇವರು, “ನನ್ನ ವಾಗ್ದಾನಕ್ಕೆ ಸಾಕ್ಷಿಯಾಗಿ ನಾನು ನಿಮಗೊಂದು ಗುರುತನ್ನು ಕೊಡುವೆನು. ನಾನು ನಿಮ್ಮೊಡನೆ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯೊಡನೆ ಒಡಂಬಡಿಕೆ ಮಾಡಿಕೊಂಡಿರುವುದನ್ನು ಈ ಗುರುತು ತೋರಿಸುತ್ತದೆ. ಈ ಗುರುತು ಯಾವಾಗಲೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು