Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:15 - ಪರಿಶುದ್ದ ಬೈಬಲ್‌

15 ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಅಂದಳು. ಅದಕ್ಕೆ ಯೆಹೋವನು, “ಇಲ್ಲ, ನೀನು ನಕ್ಕಿದ್ದು ನಿಜ!” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಸಾರಳು ಭಯದಿಂದ, “ನಾನು ನಗಲಿಲ್ಲ” ಎಂದು ನಿರಾಕರಿಸಿದಳು. ಸರ್ವೇಶ್ವರ, "ಹಾಗನ್ನಬೇಡಮ್ಮಾ, 'ನೀನು ನಕ್ಕದ್ದು ನಿಜ' ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಸಾರಳು ಭಯಪಟ್ಟು - ನಾನು ನಗಲಿಲ್ಲ ಎಂದು ಬೊಂಕಲು ಆತನು- ಹಾಗನ್ನಬೇಡಮ್ಮಾ, ನೀನು ನಕ್ಕದ್ದುಂಟು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ,” ಎಂದು ಹೇಳಿ ಸುಳ್ಳಾಡಿದಾಗ, ದೇವರು, “ನೀನು ನಕ್ಕದ್ದು ನಿಜ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:15
17 ತಿಳಿವುಗಳ ಹೋಲಿಕೆ  

ನಮ್ಮಲ್ಲಿ ಪಾಪವಿಲ್ಲವೆಂದು ಹೇಳಿಕೊಂಡರೆ, ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುವವರಾಗಿದ್ದೇವೆ ಮತ್ತು ನಮ್ಮಲ್ಲಿ ಸತ್ಯವೇ ಇಲ್ಲ.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಆದರೆ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಹೊಂದಿಕೊಳ್ಳತಕ್ಕ ರೀತಿಯನ್ನು ನೀವು ಕಲಿತುಕೊಂಡಿರಿ.


ದೇವರಿಗೆ ಇವು ಖಂಡಿತವಾಗಿ ತಿಳಿದಿವೆ. ನಮ್ಮ ಅಂತರಾಳದ ರಹಸ್ಯಗಳನ್ನು ಸಹ ಆತನು ಬಲ್ಲನು.


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


ದ್ವಾರಪಾಲಕಿಯು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದಳು. ಪೇತ್ರನು, “ಇಲ್ಲ, ನಾನಲ್ಲ!” ಎಂದು ಉತ್ತರಕೊಟ್ಟನು.


ಜನರ ಬಗ್ಗೆ ಆತನಿಗೆ ಯಾರೂ ತಿಳಿಸುವ ಅಗತ್ಯವಿರಲಿಲ್ಲ. ಮನುಷ್ಯನ ಮನಸ್ಸಿನಲ್ಲಿ ಏನಿದೆ ಎಂಬುದು ಯೇಸುವಿಗೆ ಗೊತ್ತಿತ್ತು.


ಧರ್ಮೋಪದೇಶಕರ ಆಲೋಚನೆಯನ್ನು ತಕ್ಷಣವೇ ಗ್ರಹಿಸಿಕೊಂಡ ಯೇಸು ಅವರಿಗೆ, “ನೀವು ಹೀಗೇಕೆ ಆಲೋಚಿಸುತ್ತೀರಿ?


ಸುಳ್ಳುತುಟಿಗಳು ಕ್ಷಣಿಕ. ಆದರೆ ಸತ್ಯವು ಶಾಶ್ವತ.


ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.


ಆದ್ದರಿಂದ ನೀನು ನನಗೆ ತಂಗಿಯಾಗಬೇಕೆಂದು ಜನರಿಗೆ ಹೇಳು. ಆಗ ಅವರು ನನ್ನನ್ನು ನಿನ್ನ ಸಹೋದರನೆಂದು ಭಾವಿಸಿ ನನ್ನನ್ನು ಕೊಲ್ಲದೆ ನನಗೆ ದಯೆತೋರುವರು. ಹೀಗೆ ನೀನು ನನ್ನ ಪ್ರಾಣ ಉಳಿಸುವೆ” ಎಂದು ಹೇಳಿದನು.


ತರುವಾಯ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನೆಲ್ಲಿ?” ಎಂದು ಕೇಳಿದನು. ಅದಕ್ಕೆ ಕಾಯಿನನು, “ನನಗೆ ಗೊತ್ತಿಲ್ಲ. ನನ್ನ ತಮ್ಮನನ್ನು ಕಾಯುವುದಾಗಲಿ ನೋಡಿಕೊಳ್ಳುವುದಾಗಲಿ ನನ್ನ ಕೆಲಸವೇ?” ಎಂದು ಉತ್ತರಕೊಟ್ಟನು.


ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ ನೀವು ನಿಮ್ಮ ಹಳೆಯ ಪಾಪಪೂರಿತ ಜೀವನವನ್ನು ಮತ್ತು ನಿಮ್ಮ ಮೊದಲಿನ ಕಾರ್ಯಗಳನ್ನು ಬಿಟ್ಟುಬಿಟ್ಟಿದ್ದೀರಿ.


ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.


ಆಮೇಲೆ ಆ ಪುರುಷರು ಹೋಗಲು ಎದ್ದುನಿಂತರು. ಅವರು ಸೊದೋಮಿನ ಕಡೆಗೆ ಕಣ್ಣೆತ್ತಿ ನೋಡಿ ಆ ಕಡೆಗೆ ನಡೆಯಲಾರಂಭಿಸಿದರು. ಅವರನ್ನು ಕಳುಹಿಸಿಕೊಡಲು ಅಬ್ರಹಾಮನು ಅವರ ಸಂಗಡ ಸ್ವಲ್ಪದೂರ ಹೋದನು.


ನಿನ್ನ ನಿಮಿತ್ತ ನಾವು ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಕೊಯ್ಯಲು ಕೊಂಡೊಯ್ಯುವ ಕುರಿಗಳಂತಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು