Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:22 - ಪರಿಶುದ್ದ ಬೈಬಲ್‌

22 ಆದ್ದರಿಂದ ಆ ಪುರುಷರು ಸೊದೋಮಿನ ಕಡೆಗೆ ನಡೆಯತೊಡಗಿದರು. ಆದರೆ ಅಬ್ರಹಾಮನು ಯೆಹೋವನ ಎದುರಿನಲ್ಲಿ ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಆ ಇಬ್ಬರು ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಸರ್ವೇಶ್ವರ ಸ್ವಾಮಿಯ ಸಂಗಡವೇ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ಮನುಷ್ಯರು ಅಲ್ಲಿಂದ ಸೊದೋವಿುನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನ ಎದುರಾಗಿ ಇನ್ನೂ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು, ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಯೆಹೋವ ದೇವರ ಮುಂದೆ ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:22
11 ತಿಳಿವುಗಳ ಹೋಲಿಕೆ  

ಆ ಸಾಯಂಕಾಲ, ದೇವದೂತರಿಬ್ಬರು ಸೊದೋಮ್ ನಗರಕ್ಕೆ ಬಂದರು. ನಗರದ ಬಾಗಿಲುಗಳ ಬಳಿ ಕುಳಿತುಕೊಂಡಿದ್ದ ಲೋಟನು ದೇವದೂತರನ್ನು ಕಂಡು, ಅವರ ಬಳಿಗೆ ಹೋಗಿ ನಮಸ್ಕರಿಸಿದನು.


ಆದರೆ ಸ್ತೆಫನನು ಪವಿತ್ರಾತ್ಮಭರಿತನಾಗಿದ್ದನು. ಅವನು ಆಕಾಶದತ್ತ ಕಣ್ಣೆತ್ತಿ ನೋಡಿ, ದೇವರ ಮಹಿಮೆಯನ್ನೂ ಯೇಸುವು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ಕಂಡು,


“ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.


ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಮೊಟ್ಟ ಮೊದಲನೆಯದಾಗಿ ನಾನು ನಿಮಗೆ ಹೇಳುವುದೇನೆಂದರೆ, ಎಲ್ಲಾ ಜನರಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ, ವಿಜ್ಞಾಪಿಸಿರಿ, ಅವರ ಅಗತ್ಯಕ್ಕೆ ತಕ್ಕಂತೆ ಬಿನ್ನಹ ಮಾಡಿರಿ ಮತ್ತು ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ.


ನಾನು ಯೆಹೂದದ ಜನರಿಗೆ ಒಳ್ಳೆಯದನ್ನು ಮಾಡಿದೆನು. ಆದರೆ ಅವರೀಗ ನನಗೆ ಕೆಟ್ಟದ್ದನ್ನು ಮಾಡುತ್ತಿದ್ದಾರೆ. ಈಗ ಅವರು ನನ್ನನ್ನು ಕೊಲ್ಲುವುದಕ್ಕಾಗಿ ಒಂದು ಗುಂಡಿಯನ್ನು ತೋಡಿದ್ದಾರೆ. ಯೆಹೋವನೇ, ನಾನು ಮಾಡಿದ್ದು ನಿನ್ನ ಜ್ಞಾಪಕದಲ್ಲಿದೆಯೇ? ನಾನು ನಿನ್ನ ಎದುರಿಗೆ ನಿಂತುಕೊಂಡು ಈ ಜನರಿಗೆ ಒಳ್ಳೆಯದನ್ನು ಮಾಡೆಂದೂ ಅವರ ಮೇಲೆ ಕೋಪಗೊಳ್ಳಬಾರದೆಂದೂ ನಿನ್ನಲ್ಲಿ ಕೇಳಿಕೊಂಡೆ.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಆಮೇಲೆ ಆ ಪುರುಷರು ಹೋಗಲು ಎದ್ದುನಿಂತರು. ಅವರು ಸೊದೋಮಿನ ಕಡೆಗೆ ಕಣ್ಣೆತ್ತಿ ನೋಡಿ ಆ ಕಡೆಗೆ ನಡೆಯಲಾರಂಭಿಸಿದರು. ಅವರನ್ನು ಕಳುಹಿಸಿಕೊಡಲು ಅಬ್ರಹಾಮನು ಅವರ ಸಂಗಡ ಸ್ವಲ್ಪದೂರ ಹೋದನು.


ಯೆಹೋವನು ತನ್ನೊಳಗೆ ಹೀಗೆಂದುಕೊಂಡನು: “ನಾನು ಈಗ ಮಾಡುವ ಕಾರ್ಯವನ್ನು ಅಬ್ರಹಾಮನಿಗೆ ತಿಳಿಸಲೇ?


ಅಂದು ಮುಂಜಾನೆ ಅಬ್ರಹಾಮನು ಎದ್ದು ತಾನು ಯೆಹೋವನ ಮುಂದೆ ನಿಂತುಕೊಂಡಿದ್ದ ಸ್ಥಳಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು