Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:27 - ಪರಿಶುದ್ದ ಬೈಬಲ್‌

27 ಆಗ ಅಬ್ರಹಾಮನು ಯೆಹೋವನಿಗೆ, “ನಿನಗೆ ನನ್ನನ್ನು ಹೋಲಿಸಿಕೊಂಡರೆ, ನಾನು ಕೇವಲ ಧೂಳು ಮತ್ತು ಬೂದಿ. ಆದರೆ ಈ ಪ್ರಶ್ನೆಯನ್ನೂ ಕೇಳಲು ನನಗೆ ಅವಕಾಶಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಅಬ್ರಹಾಮನು, “ನಾನಂತೂ ಮಣ್ಣುಬೂದಿ, ಆದರೂ ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದಕ್ಕೆ ಅಬ್ರಹಾಮನು - ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾವಿುಯ ಸಂಗಡ ವಾದಿಸುವದಕ್ಕೆ ಧೈರ್ಯಗೊಂಡಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಅಬ್ರಹಾಮನು, “ಇಗೋ, ಮಣ್ಣೂ, ಬೂದಿಯೂ ಆಗಿರುವ ನಾನು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:27
18 ತಿಳಿವುಗಳ ಹೋಲಿಕೆ  

ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:


ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೋ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು.


ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.


ದೇವರು ನನ್ನನ್ನು ಮಣ್ಣಿಗೆ ಎಸೆದುಬಿಟ್ಟಿದ್ದಾನೆ, ನಾನು ಧೂಳಿನಂತೆಯೂ ಬೂದಿಯಂತೆಯೂ ಆಗಿದ್ದೇನೆ.


ಹೀಗಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ ವಾಸಿಸುತ್ತಾರೆ. ಈ ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು!


ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.


ಯೆಹೋವನೇ, ಮನುಷ್ಯರು ಎಷ್ಟು ಮಾತ್ರದವರು? ನೀನು ಅವರನ್ನು ಯಾಕೆ ನೆನಸಬೇಕು? ಮನುಷ್ಯರು ಎಷ್ಟರವರು? ನೀನು ಅವರನ್ನು ಯಾಕೆ ಗಮನಿಸಬೇಕು?


ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? ಮನುಷ್ಯರು ಎಷ್ಟರವರು? ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?


ಚಾಚಿ ಹೀಗೆ ಪ್ರಾರ್ಥಿಸಿದೆನು: “ನನ್ನ ದೇವರೇ, ನಿನ್ನ ಕಡೆಗೆ ಮುಖವೆತ್ತಲು ನನಗೆ ನಾಚಿಕೆಯಾಗುತ್ತದೆ; ಯಾಕೆಂದರೆ ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿದೆ. ನಮ್ಮ ಅಪರಾಧಗಳ ರಾಶಿಯು ಪರಲೋಕದವರೆಗೂ ಏರಿಹೋಗಿದೆ.


ಒಂದುವೇಳೆ ಐದು ಮಂದಿ ಕಡಿಮೆಯಾಗಿದ್ದು ನಲವತ್ತೈದು ಮಂದಿ ಮಾತ್ರ ನೀತಿವಂತರಿದ್ದರೆ ಆ ಪಟ್ಟಣವನ್ನು ನಾಶಮಾಡುವಿಯಾ?” ಎಂದು ಕೇಳಿದನು. ಅದಕ್ಕೆ ಯೆಹೋವನು ಅವನಿಗೆ, “ನಾನು ನಲವತ್ತೈದು ಮಂದಿ ನೀತಿವಂತರನ್ನು ಕಂಡರೂ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.


ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು