Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:3 - ಪರಿಶುದ್ದ ಬೈಬಲ್‌

3 “ಸ್ವಾಮಿಗಳೇ, ನಿಮ್ಮ ಸೇವಕನಾದ ನನ್ನ ಜೊತೆಯಲ್ಲಿ ಸ್ವಲ್ಪ ಸಮಯವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಸ್ವಾಮೀ, ದಯವಿರಲಿ, ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೊಗ್ಗಿ ನಮಸ್ಕರಿಸಿ - ಸ್ವಾವಿು, ದಯವಿರಲಿ; ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಬ್ರಹಾಮನು ಅವರಿಗೆ, “ನನ್ನ ಸ್ವಾಮಿ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ, ನಿಮ್ಮ ದಾಸನ ಬಳಿಯಿಂದ ಹೊರಟು ಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:3
8 ತಿಳಿವುಗಳ ಹೋಲಿಕೆ  

ನನಗೆ ಅನೇಕ ದನಗಳೂ, ಕತ್ತೆಗಳೂ, ಆಡುಕುರಿಗಳೂ ಮತ್ತು ಸೇವಕಸೇವಕಿಯರೂ ಇದ್ದಾರೆ. ಸ್ವಾಮೀ, ನೀವು ನಮ್ಮನ್ನು ಸ್ವೀಕರಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತಿದ್ದೇನೆ.’”


ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ,


ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಲು ನೀರನ್ನು ತಂದುಕೊಡುವೆನು. ನೀವು ಮರದ ಕೆಳಗೆ ವಿಶ್ರಾಂತಿ ತೆಗೆದುಕೊಳ್ಳಿರಿ.


ಲಾಬಾನನು ಅವನಿಗೆ, “ಯೆಹೋವನ ಆಶೀರ್ವಾದ ಹೊಂದಿದವನೇ, ಒಳಗೆ ಬಾ. ನೀನು ಹೊರಗಡೆ ನಿಂತುಕೊಳ್ಳಬೇಕಾಗಿಲ್ಲ. ನೀನು ಇಳಿದುಕೊಳ್ಳುವುದಕ್ಕಾಗಿ ಕೋಣೆಯನ್ನೂ ನಿನ್ನ ಒಂಟೆಗಳಿಗಾಗಿ ಸ್ಥಳವನ್ನೂ ಸಿದ್ಧಪಡಿಸಿದ್ದೇನೆ” ಎಂದು ಹೇಳಿದನು.


ಪೋಟೀಫರನು ಯೋಸೇಫನ ವಿಷಯದಲ್ಲಿ ತುಂಬ ಸಂತೋಷಪಟ್ಟು ಸ್ವಂತ ಸೇವಕನನ್ನಾಗಿ ಮಾಡಿಕೊಂಡನು; ಅಲ್ಲದೆ ಮನೆಯ ಮೇಲ್ವಿಚಾರಣೆಯನ್ನು ಒಪ್ಪಿಸಿಕೊಟ್ಟನು; ತನ್ನ ಆಸ್ತಿಗೆಲ್ಲಾ ಮೇಲಾಧಿಕಾರಿಯನ್ನಾಗಿ ನೇಮಿಸಿದನು.


ದಯವಿಟ್ಟು ಇಲ್ಲಿಯೇ ಇರು. ನಾನು ಬರುವವರೆಗೆ ಎಲ್ಲಿಗೂ ಹೋಗಬೇಡ. ನಾನು ನಿನಗೆ ಕಾಣಿಕೆಯನ್ನು ತಂದು ಅರ್ಪಿಸುವುದಕ್ಕೆ ಅವಕಾಶಕೊಡು” ಎಂದು ಪ್ರಾರ್ಥಿಸಿದನು. ಅದಕ್ಕೆ, ಆತನು, “ನೀನು ಬರುವವರೆಗೂ ನಾನು ಇರುತ್ತೇನೆ” ಎಂದು ಹೇಳಿದನು.


ಗಿದ್ಯೋನನು ಒಳಗೆ ಹೋಗಿ ಒಂದು ಆಡಿನ ಮರಿಯನ್ನು ಬೇಯಿಸಿದನು. ಅವನು ಸುಮಾರು ಇಪ್ಪತ್ತು ಸೇರಿನಷ್ಟು ಹಿಟ್ಟನ್ನು ತೆಗೆದುಕೊಂಡು ಹುಳಿಯಿಲ್ಲದ ರೊಟ್ಟಿಯನ್ನು ಮಾಡಿದನು. ತರುವಾಯ ಗಿದ್ಯೋನನು ಆ ಮಾಂಸವನ್ನು ಒಂದು ಬುಟ್ಟಿಯಲ್ಲಿಟ್ಟನು, ಮಾಂಸ ಬೇಯಿಸಿದ ನೀರನ್ನು ಒಂದು ಪಾತ್ರೆಯಲ್ಲಿ ಹಾಕಿದನು. ಗಿದ್ಯೋನನು ಆ ಮಾಂಸವನ್ನೂ ಮಾಂಸ ಬೇಯಿಸಿದ ನೀರನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತೆಗೆದುಕೊಂಡು ಬಂದನು. ಗಿದ್ಯೋನನು ಏಲಾ ಮರದ ಕೆಳಗೆ ಯೆಹೋವನಿಗೆ ಆಹಾರವನ್ನು ಕೊಟ್ಟನು.


ದೇವದೂತನು ಗಿದ್ಯೋನನಿಗೆ, “ಆ ಮಾಂಸವನ್ನೂ ಹುಳಿಯಿಲ್ಲದ ಆ ರೊಟ್ಟಿಯನ್ನೂ ಆ ಕಲ್ಲಿನ ಮೇಲೆ ಇಡು. ಆಮೇಲೆ ಆ ನೀರನ್ನು ಅದರ ಮೇಲೆ ಸುರಿ” ಎಂದನು. ದೇವದೂತನು ಹೇಳಿದಂತೆಯೇ ಗಿದ್ಯೋನನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು