Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:6 - ಪರಿಶುದ್ದ ಬೈಬಲ್‌

6 ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿ ಹಿಟ್ಟನ್ನು ಬೇಗನೆ ನಾದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ, ಬೇಗ ರೊಟ್ಟಿಗಳನ್ನು ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ - ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ, “ಬೇಗನೇ ಮೂರು ಸೇರು ನಯವಾದ ಹಿಟ್ಟು ನಾದಿ, ಒಲೆಯ ಮೇಲೆ ರೊಟ್ಟಿಗಳನ್ನು ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:6
15 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”


ಗುಣುಗುಟ್ಟದೆ ಅತಿಥಿಸತ್ಕಾರ ಮಾಡಿರಿ.


ಅತಿಥಿಸತ್ಕಾರ ಮಾಡಿರಿ. ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.


ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.


ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.


ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು.


ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ಆ ಮೂವರು ಪುರುಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.


ಬಳಿಕ ಅವನು ತನ್ನ ಪಶುಗಳಿದ್ದಲ್ಲಿಗೆ ಓಡಿಹೋಗಿ ಉತ್ತಮವಾದ ಎಳೆಕರುವನ್ನು ತೆಗೆದು ಸೇವಕನಿಗೆ ಕೊಟ್ಟು, “ಬೇಗನೇ ಕರುವನ್ನು ಕೊಯ್ದು, ಊಟಕ್ಕೆ ಸಿದ್ಧಮಾಡು” ಎಂದು ಹೇಳಿದನು.


ಆದರೆ ಲೋಟನು ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದರಿಂದ ಅವರು ಅವನ ಮನೆಗೆ ಹೋದರು. ಲೋಟನು ಅವರಿಗಾಗಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಅಡಿಗೆ ಮಾಡಿಸಿದನು. ದೇವದೂತರು ಅದನ್ನು ಊಟಮಾಡಿದರು.


ಗಿದ್ಯೋನನು ಒಳಗೆ ಹೋಗಿ ಒಂದು ಆಡಿನ ಮರಿಯನ್ನು ಬೇಯಿಸಿದನು. ಅವನು ಸುಮಾರು ಇಪ್ಪತ್ತು ಸೇರಿನಷ್ಟು ಹಿಟ್ಟನ್ನು ತೆಗೆದುಕೊಂಡು ಹುಳಿಯಿಲ್ಲದ ರೊಟ್ಟಿಯನ್ನು ಮಾಡಿದನು. ತರುವಾಯ ಗಿದ್ಯೋನನು ಆ ಮಾಂಸವನ್ನು ಒಂದು ಬುಟ್ಟಿಯಲ್ಲಿಟ್ಟನು, ಮಾಂಸ ಬೇಯಿಸಿದ ನೀರನ್ನು ಒಂದು ಪಾತ್ರೆಯಲ್ಲಿ ಹಾಕಿದನು. ಗಿದ್ಯೋನನು ಆ ಮಾಂಸವನ್ನೂ ಮಾಂಸ ಬೇಯಿಸಿದ ನೀರನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತೆಗೆದುಕೊಂಡು ಬಂದನು. ಗಿದ್ಯೋನನು ಏಲಾ ಮರದ ಕೆಳಗೆ ಯೆಹೋವನಿಗೆ ಆಹಾರವನ್ನು ಕೊಟ್ಟನು.


ಆ ಹೆಂಗಸಿನ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು. ಅವಳು ಬೇಗನೆ ಅದನ್ನು ಕೊಯ್ದಳು. ಅವಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ನಾದಿದಳು. ನಂತರ ಅವಳು ಕೆಲವು ರೊಟ್ಟಿಗಳನ್ನು ಸುಟ್ಟಳು.


ಅಮ್ನೋನನು ಹಾಸಿಗೆಯಲ್ಲಿ ಮಲಗಿ ಕಾಯಿಲೆಯವನಂತೆ ನಟಿಸಿದನು. ಅವನನ್ನು ನೋಡಲು ರಾಜನಾದ ದಾವೀದನು ಅಲ್ಲಿಗೆ ಬಂದನು. ಅಮ್ನೋನನು ರಾಜನಾದ ದಾವೀದನಿಗೆ, “ದಯವಿಟ್ಟು ನನ್ನ ಸೋದರಿಯಾದ ತಾಮಾರಳನ್ನು ಒಳಕ್ಕೆ ಕರೆಯಿರಿ. ನಾನು ನೋಡುತ್ತಿರುವಂತೆ ಅವಳು ನನಗಾಗಿ ಎರಡು ಸಿಹಿ ರೊಟ್ಟಿಗಳನ್ನು ತಯಾರಿಸಲಿ. ಅವಳ ಕೈಗಳಿಂದ ಮಾಡಿದ ರೊಟ್ಟಿಗಳನ್ನೇ ನಾನು ತಿನ್ನುತ್ತೇನೆ” ಎಂದು ಬೇಡಿಕೊಂಡನು.


ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ತಡಮಾಡದೆ ಬೇಗನೆ ಹಿಂತಿರುಗಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು