Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:13 - ಪರಿಶುದ್ದ ಬೈಬಲ್‌

13 ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಂದ ಆಪಾದನೆ ದೊಡ್ಡದಾದುದರಿಂದ ಇವರನ್ನು ನಾಶಮಾಡುವುದಕ್ಕಾಗಿ ಸರ್ವೇಶ್ವರ ನಮ್ಮನ್ನು ಕಳಿಸಿದ್ದಾರೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವು ಈ ಸ್ಥಳವನ್ನು ನಾಶಮಾಡುವದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:13
21 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವನು, “ಸೊದೋಮ್ ಮತ್ತು ಗೊಮೋರಗಳ ಜನರು ಬಹಳ ಕೆಟ್ಟವರೆಂದು ಅನೇಕ ಸಲ ಕೇಳಿದ್ದೇನೆ.


ಸೊದೋಮ್ ಮತ್ತು ಗೊಮೋರ ನಗರಗಳನ್ನೂ ಅವುಗಳ ಸುತ್ತಲಿನ ಪಟ್ಟಣಗಳನ್ನೂ ನೆನಪು ಮಾಡಿಕೊಳ್ಳಿರಿ. ಅವುಗಳೂ ಆ ದೇವದೂತರಂತಾದವು. ಆ ಪಟ್ಟಣಗಳಲ್ಲಿ ಲೈಂಗಿಕ ಪಾಪಗಳು ಮತ್ತು ಕೆಟ್ಟಕಾರ್ಯಗಳು ತುಂಬಿಕೊಂಡಿದ್ದವು. ಅವರು ನಿತ್ಯವಾದ ಬೆಂಕಿಯ ದಂಡನೆಯಿಂದ ಸಂಕಟಪಡುವರು. ಅವರಿಗೆ ನೀಡಿದ ದಂಡನೆಯು ನಮಗೊಂದು ದೃಷ್ಟಾಂತವಾಗಿದೆ.


ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.


ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.


“‘ಈಗ ನಾನು ಯೆಹೋವನ ಸಹಾಯವಿಲ್ಲದೆ ಈ ದೇಶವನ್ನು ನಾಶಮಾಡಲು ಬಂದೆನೆಂದು ನೆನಸುತ್ತೀರೋ? “ಎದ್ದುಹೋಗಿ ಈ ದೇಶದ ವಿರುದ್ಧ ಯುದ್ಧ ನಡೆಸಿ ಅದನ್ನು ಸಂಪೂರ್ಣವಾಗಿ ನಾಶಮಾಡು” ಎಂದು ಯೆಹೋವನು ನನಗೆ ಹೇಳಿದ್ದಾನೆ.’”


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.


ಆ ಇಬ್ಬರು ಪುರುಷರು ಲೋಟನಿಗೆ, “ನಿನ್ನ ಕುಟುಂಬದ ಬೇರೆ ಯಾರಾದರೂ ಈ ನಗರದಲ್ಲಿ ಇದ್ದಾರೆಯೇ? ನಿನಗೆ ಅಳಿಯಂದಿರಾಗಲಿ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇಲ್ಲಿ ವಾಸವಾಗಿದ್ದಾರೆಯೇ? ನಿನ್ನ ಕುಟುಂಬದ ಯಾರಾದರೂ ಈ ನಗರದಲ್ಲಿದ್ದರೆ ಈಗಲೇ ಇಲ್ಲಿಂದ ಹೊರಡುವಂತೆ ಅವರಿಗೆ ತಿಳಿಸು.


ನಾನು ನಿಮ್ಮ ಉನ್ನತವಾದ ಪೂಜಾಸ್ಥಳಗಳನ್ನು ನಾಶಮಾಡುವೆ. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ.


ಆದ್ದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.


“ನಿಮ್ಮ ದೇವರಾದ ಯೆಹೋವನು ಹೇಳಿದ ಸಂಗತಿಗಳಿಗೆ ನೀವು ಕಿವಿಗೊಡದೆ ಹೋದದ್ದರಿಂದ, ಆತನು ಕೊಟ್ಟ ಆಜ್ಞೆಗಳಿಗೂ ನಿಯಮಗಳಿಗೂ ನೀವು ವಿಧೇಯರಾಗದಿದ್ದ ಕಾರಣ ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬರುತ್ತವೆ. ನೀವು ನಾಶವಾಗುವವರೆಗೂ ಅವು ನಿಮ್ಮನ್ನು ಅಟ್ಟಿಸಿಕೊಂಡು ಬರುತ್ತವೆ.


ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದ್ವೇಷಿಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.


“ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶ ಮಾಡಬಯಸುತ್ತೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು