Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:15 - ಪರಿಶುದ್ದ ಬೈಬಲ್‌

15 ಸೂರ್ಯೋದಯಕ್ಕಿಂತ ಮೊದಲೇ ಹೊರಡುವಂತೆ ದೇವದೂತರು ಲೋಟನನ್ನು ಒತ್ತಾಯಿಸಿ, “ಈ ನಗರವನ್ನು ನಾಶಗೊಳಿಸಲಾಗುವುದು. ಆದ್ದರಿಂದ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಕರೆದುಕೊಂಡು ಈ ಸ್ಥಳದಿಂದ ಓಡಿಹೋಗು, ಆಗ ನೀನು ಈ ನಗರದೊಡನೆ ನಾಶವಾಗುವುದಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೊತ್ತು ಮೂಡುವುದಕ್ಕೆ ಮುಂಚೆ ದೂತರು ಲೋಟನಿಗೆ, “ಏಳು, ನಿನ್ನ ಹೆಂಡತಿ ಮತ್ತು ಹೆಣ್ಣುಮಕ್ಕಳಿಬ್ಬರನ್ನು ಕರೆದುಕೊಂಡು ಬೇಗನೆ ಹೊರಡು; ಇಲ್ಲದಿದ್ದರೆ ಊರಿಗೆ ಬರಲಿರುವ ದಂಡನೆಯಲ್ಲಿ ನೀನೂ ಸಿಕ್ಕಿಕೊಂಡು ನಾಶವಾಗಬೇಕಾದೀತು,” ಎಂದು ಹೇಳಿ ತ್ವರೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೊತ್ತು ಮೂಡುವದಕ್ಕೆ ಮುಂಚೆ ಆ ದೂತರು ಲೋಟನಿಗೆ - ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣು ಮಕ್ಕಳನ್ನೂ ಬೇಗ ಕರಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು ಎಂದು ಹೇಳಿ ತ್ವರೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸೂರ್ಯೋದಯವಾಗುವ ಮೊದಲು ದೂತರು ಲೋಟನನ್ನು ತ್ವರೆಪಡಿಸಿ, “ಈ ಪಟ್ಟಣಕ್ಕೆ ಉಂಟಾಗುವ ದಂಡನೆಯಿಂದ ನೀನು ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಪುತ್ರಿಯರನ್ನೂ ಕರೆದುಕೊಂಡು ನಡೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:15
11 ತಿಳಿವುಗಳ ಹೋಲಿಕೆ  

ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು: “ನನ್ನ ಜನರೇ, ನೀವು ಆ ನಗರದಿಂದ ಹೊರಗೆ ಬಂದುಬಿಡಿ. ಆಗ ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗುವುದಿಲ್ಲ; ಅವಳಿಗಾಗುವ ಉಪದ್ರವಗಳು ನಿಮಗೆ ಸಂಭವಿಸುವುದಿಲ್ಲ.


ದೇವರು ಹೀಗೆನ್ನುತ್ತಾನೆ: “ಸುಪ್ರಸನ್ನತೆಯ ಕಾಲದಲ್ಲಿ ನಾನು ನಿನಗೆ ಕಿವಿಗೊಟ್ಟೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು.” ಇದೇ ಆ “ಸುಪ್ರಸನ್ನತೆಯ ಕಾಲ.” ಇದೇ ಆ “ರಕ್ಷಣೆಯ ದಿನ.”


ಆದರೆ ಅಲ್ಲಿಗೆ ಬೇಗನೆ ಓಡಿಹೋಗು, ನೀನು ಆ ಊರಿಗೆ ಸುರಕ್ಷಿತವಾಗಿ ಸೇರುವತನಕ ನಾನು ಸೊದೋಮನ್ನು ನಾಶಗೊಳಿಸಲಾಗುವುದಿಲ್ಲ” ಎಂದು ಹೇಳಿದನು. (ಆ ಊರಿಗೆ ಚೋಗರ್ ಎಂದು ಕರೆಯಲಾಯಿತು; ಯಾಕೆಂದರೆ ಅದು ಚಿಕ್ಕ ಊರು.)


ಅವರು ನಗರದ ಹೊರಕ್ಕೆ ಬಂದ ಮೇಲೆ ಆ ಪುರುಷರಲ್ಲಿ ಒಬ್ಬನು, “ಈಗ ಓಡಿಹೋಗಿ ನಿಮ್ಮ ಪ್ರಾಣವನ್ನು ಕಾಪಾಡಿಕೊಳ್ಳಿ; ನಗರದ ಕಡೆಗೆ ತಿರುಗಿ ನೋಡಬೇಡಿ; ಕಣಿವೆಯ ಯಾವ ಸ್ಥಳದಲ್ಲೂ ನಿಂತುಕೊಳ್ಳಬೇಡಿ; ತಪ್ಪಿಸಿಕೊಂಡು ಬೆಟ್ಟಗಳಿಗೆ ಓಡಿಹೋಗಿರಿ; ಇಲ್ಲವಾದರೆ, ಈ ನಗರದೊಡನೆ ನೀವೂ ನಾಶವಾಗುವಿರಿ” ಎಂದು ಹೇಳಿದನು.


ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣುಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಈ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಈ ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಈ ಮಾತು ಅವರಿಗೆ ತಮಾಷೆಯಂತೆ ಕಂಡಿತು.


ಆದರೆ ಲೋಟನು ಗಲಿಬಿಲಿಗೊಂಡು ತಡಮಾಡಲು ಆ ಇಬ್ಬರು ಪುರುಷರು ಲೋಟನನ್ನೂ ಅವನ ಹೆಂಡತಿಯನ್ನೂ ಅವನ ಇಬ್ಬರು ಹೆಣ್ಣುಮಕ್ಕಳನ್ನೂ ಕೈಹಿಡಿದುಕೊಂಡು ನಗರದ ಹೊರಕ್ಕೆ ಸುರಕ್ಷಿತವಾಗಿ ತಂದುಬಿಟ್ಟರು. ಹೀಗೆ ಯೆಹೋವನು ಲೋಟನಿಗೂ ಅವನ ಕುಟುಂಬದವರಿಗೂ ದಯೆತೋರಿದನು.


ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು