Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:2 - ಪರಿಶುದ್ದ ಬೈಬಲ್‌

2 ಲೋಟನು ಅವರಿಗೆ, “ಸ್ವಾಮಿಗಳೇ, ದಯವಿಟ್ಟು ನನ್ನ ಮನೆಗೆ ಬನ್ನಿ. ನಾನು ನಿಮ್ಮನ್ನು ಉಪಚರಿಸುವೆನು. ನಿಮ್ಮ ಕೈಕಾಲುಗಳನ್ನು ತೊಳೆದುಕೊಂಡು ಈ ರಾತ್ರಿ ನಮ್ಮ ಮನೆಯಲ್ಲೇ ಇರಿ. ನಾಳೆ ಮುಂಜಾನೆ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ದೇವದೂತರು, “ಈ ಚೌಕದಲ್ಲಿ ನಾವು ಈ ರಾತ್ರಿ ಕಳೆಯುತ್ತೇವೆ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ರಾತ್ರಿ ತಂಗಿರಿ. ಕಾಲುಗಳನ್ನು ತೊಳೆದುಕೊಳ್ಳಿ. ಬೆಳಿಗ್ಗೆ ಎದ್ದು ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸ್ವಾವಿುಗಳೇ, ನಿಮ್ಮ ದಾಸನ ಮನೆಗೆ ಬಂದು ಇಳುಕೊಂಡು ಕಾಲುಗಳನ್ನು ತೊಳಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡುಕೊಂಡು ಹೋಗಬಹುದು ಅಂದನು. ಅವರು - ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಸ್ವಾಮಿಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ತಂಗಿ, ರಾತ್ರಿ ಕಳೆಯಿರಿ. ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ. ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ಹಾಗಲ್ಲ, ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:2
15 ತಿಳಿವುಗಳ ಹೋಲಿಕೆ  

ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಲು ನೀರನ್ನು ತಂದುಕೊಡುವೆನು. ನೀವು ಮರದ ಕೆಳಗೆ ವಿಶ್ರಾಂತಿ ತೆಗೆದುಕೊಳ್ಳಿರಿ.


ಅತಿಥಿಸತ್ಕಾರ ಮಾಡಿರಿ. ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.


ಬಳಿಕ ಯೇಸು ಸ್ತ್ರೀಯ ಕಡೆಗೆ ನೋಡಿ ಸಿಮೋನನಿಗೆ, “ಈ ಸ್ತ್ರೀಯು ನಿನಗೆ ಕಾಣುತ್ತಿರುವಳೇ? ನಾನು ನಿನ್ನ ಮನೆಯೊಳಗೆ ಬಂದಾಗ ನೀನು ನನ್ನ ಪಾದಗಳಿಗೆ ನೀರು ಕೊಡಲಿಲ್ಲ. ಆದರೆ ಈಕೆ ತನ್ನ ಕಣ್ಣೀರಿನಿಂದ ನನ್ನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿಂದ ಒರೆಸಿದಳು.


ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ಶಿಷ್ಯರ ಕಾಲುಗಳನ್ನು ತೊಳೆದು ತಾನು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಅವರ ಪಾದಗಳನ್ನು ಒರಸಿದನು.


ಆ ಸಾಯಂಕಾಲ, ದೇವದೂತರಿಬ್ಬರು ಸೊದೋಮ್ ನಗರಕ್ಕೆ ಬಂದರು. ನಗರದ ಬಾಗಿಲುಗಳ ಬಳಿ ಕುಳಿತುಕೊಂಡಿದ್ದ ಲೋಟನು ದೇವದೂತರನ್ನು ಕಂಡು, ಅವರ ಬಳಿಗೆ ಹೋಗಿ ನಮಸ್ಕರಿಸಿದನು.


ಆದರೆ ಲೋಟನು ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದರಿಂದ ಅವರು ಅವನ ಮನೆಗೆ ಹೋದರು. ಲೋಟನು ಅವರಿಗಾಗಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಅಡಿಗೆ ಮಾಡಿಸಿದನು. ದೇವದೂತರು ಅದನ್ನು ಊಟಮಾಡಿದರು.


ಲಾಬಾನನು ಅವನಿಗೆ, “ಯೆಹೋವನ ಆಶೀರ್ವಾದ ಹೊಂದಿದವನೇ, ಒಳಗೆ ಬಾ. ನೀನು ಹೊರಗಡೆ ನಿಂತುಕೊಳ್ಳಬೇಕಾಗಿಲ್ಲ. ನೀನು ಇಳಿದುಕೊಳ್ಳುವುದಕ್ಕಾಗಿ ಕೋಣೆಯನ್ನೂ ನಿನ್ನ ಒಂಟೆಗಳಿಗಾಗಿ ಸ್ಥಳವನ್ನೂ ಸಿದ್ಧಪಡಿಸಿದ್ದೇನೆ” ಎಂದು ಹೇಳಿದನು.


ಸೇವಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋಗಿ ಅವರಿಗೆ ನೀರನ್ನು ಕೊಟ್ಟನು. ಅವರು ತಮ್ಮ ಕಾಲುಗಳನ್ನು ತೊಳೆದುಕೊಂಡರು. ಬಳಿಕ ಅವನು ಅವರ ಕತ್ತೆಗಳಿಗೆ ಆಹಾರವನ್ನು ಹಾಕಿದನು.


“ನಾನು ನನ್ನ ಮೇಲಂಗಿಯನ್ನು ತೆಗೆದಿದ್ದೇನೆ; ಅದನ್ನು ಮತ್ತೆ ಹಾಕಿಕೊಳ್ಳಲು ನನಗೆ ಇಷ್ಟವಿಲ್ಲ. ನಾನು ನನ್ನ ಪಾದಗಳನ್ನು ತೊಳೆದಿದ್ದೇನೆ. ಅವುಗಳನ್ನು ಮತ್ತೆ ಕೊಳೆಮಾಡಲು ನನಗೆ ಇಷ್ಟವಿಲ್ಲ.”


ನಂತರ ದಾವೀದನು ಊರೀಯನಿಗೆ, “ಮನೆಗೆ ಹೋಗಿ ವಿಶ್ರಾಂತಿಯನ್ನು ಪಡೆ” ಎಂದನು. ಊರೀಯನು ರಾಜನ ಮನೆಯನ್ನು ಬಿಟ್ಟುಹೋದನು. ಊರೀಯನಿಗೆ ರಾಜನು ಕೊಡುಗೆಗಳನ್ನು ಸಹ ಕಳುಹಿಸಿದನು.


ನಾನು ಅಪರಿಚಿತರನ್ನು ನನ್ನ ಮನೆಗೆ ಯಾವಾಗಲೂ ಆಹ್ವಾನಿಸುತ್ತಿದ್ದೆನು. ಆದ್ದರಿಂದ ರಾತ್ರಿಯಲ್ಲಿ ಅವರು ಬೀದಿಗಳಲ್ಲಿ ಮಲಗಿಕೊಳ್ಳಬೇಕಾಗಿರಲಿಲ್ಲ.


ಅಂತೆಯೇ, ನಿನ್ನ ನೆರೆಯವನ ಮನೆಗೆ ಪದೇಪದೇ ಹೋಗಬೇಡ. ನೀನು ಹೋದರೆ, ಅವನು ನಿನ್ನ ಮೇಲೆ ಬೇಸರಗೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು