Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:17 - ಪರಿಶುದ್ದ ಬೈಬಲ್‌

17 ಆದರೆ ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರದ ಹಣ್ಣನ್ನು ಮಾತ್ರ ನೀನು ತಿನ್ನಕೂಡದು. ಒಂದುವೇಳೆ ಆ ಮರದ ಹಣ್ಣನ್ನು ತಿಂದರೆ ನೀನು ಸಾಯುವೆ!” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದ ದಿನ ಸತ್ತೇಹೋಗುವಿ ಎಂದು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಒಳ್ಳೆಯದರ, ಕೆಟ್ಟದ್ದರ ತಿಳುವಳಿಕೆಯ ಮರದ ಹಣ್ಣನ್ನು ನೀನು ತಿನ್ನಬಾರದು. ಏಕೆಂದರೆ, ನೀನು ಅದನ್ನು ತಿಂದ ದಿನವೇ ಸಾಯುವಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:17
43 ತಿಳಿವುಗಳ ಹೋಲಿಕೆ  

ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಈ ಆಸೆಗಳು ಅವನಿಂದ ಪಾಪವನ್ನು ಮಾಡಿಸುತ್ತದೆ. ನಂತರ ಪಾಪವು ಬೆಳೆದು ಸಾವನ್ನು ತರುತ್ತದೆ.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು.


ಆದರೆ ವಿಧವೆಯಾದವಳು ತನ್ನ ಇಚ್ಛೆಪೂರೈಕೆಗಾಗಿ ತನ್ನ ಜೀವಿತವನ್ನು ಬಳಸಿಕೊಳ್ಳುವುದಾದರೆ ಅವಳು ಬದುಕಿದ್ದರೂ ಸತ್ತಂತೆಯೇ.


ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”


ಆದಾಮನ ಸಂಬಂಧದಿಂದ ಎಲ್ಲರೂ ಸಾಯುತ್ತಾರೆ. ಇದೇರೀತಿ ಕ್ರಿಸ್ತನ ಸಂಬಂಧದಿಂದ ನಾವೆಲ್ಲರೂ ಮತ್ತೆ ಜೀವಂತರಾಗುತ್ತೇವೆ.


ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.


ಕೇಡುಮಾಡಲು ಮರಣಕ್ಕಿರುವ ಶಕ್ತಿಯು ಪಾಪವೇ. ಪಾಪದ ಶಕ್ತಿಯು ಧರ್ಮಶಾಸ್ತ್ರವೇ.


ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.


ನಿಮ್ಮನ್ನು ಸಾಯಿಸಲು ನನಗೆ ಇಷ್ಟವಿಲ್ಲ. ನೀವು ನನ್ನ ಕಡೆಗೆ ಹಿಂದಿರುಗಿ ಜೀವಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಆಮೇಲೆ ದೇವರಾದ ಯೆಹೋವನು ಪುರುಷನಿಗೆ, “ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು.


ದೇವರು ಪುರುಷನಿಗೆ, “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಆ ಮರದ ಹಣ್ಣನ್ನು ನೀನು ತಿಂದೆಯಾ? ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲಾ!” ಎಂದು ಹೇಳಿದನು.


ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.


‘ಈ ಕೆಟ್ಟ ಮನುಷ್ಯನು ಸಾಯುವನು’ ಎಂದು ನಾನು ಹೇಳಿದರೆ, ನೀನು ಹೋಗಿ ಆ ಮನುಷ್ಯನನ್ನು ಎಚ್ಚರಿಸಬೇಕು. ಆದರೆ ನೀನು ಅವನನ್ನು ಎಚ್ಚರಿಸದೆ ಹೋದರೆ, ಅವನ ಜೀವಿತವನ್ನು ಬದಲಾಯಿಸಿಕೊಳ್ಳಲು ಹೇಳದೆ ಹೋದರೆ, ಪಾಪಮಾಡಬೇಡ ಎಂದು ಹೇಳದೆ ಹೋದರೆ, ಆ ದುಷ್ಟನು ಸಾಯುವನು. ಯಾಕೆಂದರೆ, ಅವನು ಪಾಪಮಾಡಿದನು. ಆದರೆ ಅವನ ಮರಣಕ್ಕೆ ನಿನ್ನನ್ನು ಕಾರಣನನ್ನಾಗಿ ಮಾಡುತ್ತೇನೆ.


ಎಲ್ಲಾ ಪ್ರಾಣಗಳು ನನ್ನವೇ. ತಂದೆಯ ಪ್ರಾಣವೂ ಮಗನ ಪ್ರಾಣವೂ ನನ್ನವೇ. ಪಾಪಮಾಡುವವನು ಮಾತ್ರ ಸಾಯುವನು.


ಆಮೇಲೆ ಮೃತ್ಯುವನ್ನೂ ಪಾತಾಳವನ್ನೂ ಬೆಂಕಿಯ ಕೆರೆಗೆ ಎಸೆಯಲಾಯಿತು. ಈ ಬೆಂಕಿಯ ಕೆರೆಯು ಎರಡನೆಯ ಮರಣ.


ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


“ಒಂದುವೇಳೆ ನಾನು ಒಬ್ಬ ದುಷ್ಟನಿಗೆ ನೀನು ಸಾಯುವಿ ಎಂದು ಹೇಳಿದರೆ ಅವನು ತನ್ನ ಜೀವಿತವನ್ನು ಬದಲಾಯಿಸಿ, ದುಷ್ಟತ್ವವನ್ನು ನಿಲ್ಲಿಸಿ, ಅವನು ನೀತಿವಂತನಾಗಿ ಬಾಳಿ


“ಈ ದಿನ ಎರಡು ಮಾರ್ಗಗಳಲ್ಲಿ ಯಾವುದನ್ನು ಬೇಕಾದರೂ ಆರಿಸಿಕೊಳ್ಳಲು ನಾನು ನಿಮಗೆ ಅವಕಾಶ ಕೊಟ್ಟಿದ್ದೇನೆ. ಪರಲೋಕವೂ ಭೂಮಿಯೂ ಅದಕ್ಕೆ ಸಾಕ್ಷಿ. ನೀವು ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಬಹುದು. ಜೀವವನ್ನಾರಿಸಿಕೊಂಡರೆ, ಆಶೀರ್ವಾದವು ಸಿಗುವುದು. ಮರಣವು ನಿಮಗೆ ಶಾಪವನ್ನು ತರುವುದು. ಆದ್ದರಿಂದ ಜೀವವನ್ನು ಆರಿಸಿಕೊಳ್ಳಿರಿ, ನೀವೂ ನಿಮ್ಮ ಮಕ್ಕಳೂ ಬಾಳುವಿರಿ.


“ಈ ದಿನ ನೀವು ಜೀವ ಮತ್ತು ಮರಣ; ಶುಭ ಮತ್ತು ಅಶುಭ ಇವುಗಳನ್ನು ಆಯ್ಕೆಮಾಡಿಕೊಳ್ಳಲು ನಿಮಗೆ ಅವಕಾಶ ಮಾಡಿಕೊಟ್ಟಿದ್ದೇನೆ.


ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.


ಸೊಲೊಮೋನನು ಶಿಮ್ಮಿಯನ್ನು ಕರೆಯಿಸಿ, “ನೀನು ಜೆರುಸಲೇಮನ್ನು ಬಿಟ್ಟುಹೋದರೆ ಮರಣಶಿಕ್ಷೆಯಾಗುವುದೆಂದು ನಾನು ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದೆನು. ನೀನು ಬೇರೆಲ್ಲಾದರೂ ಹೋದರೆ ಅದು ನಿನ್ನ ಸ್ವಂತ ತಪ್ಪಾಗುವುದೆಂದೂ ನಿನ್ನನ್ನು ಕೊಲ್ಲಲಾಗುವುದೆಂದೂ ನಾನು ನಿನ್ನನ್ನು ಎಚ್ಚರಿಸಿದ್ದೆನು. ಅದಕ್ಕೆ ನೀನೂ ಒಪ್ಪಿಗೆ ನೀಡಿ ನನಗೆ ವಿಧೇಯನಾಗಿರುವುದಾಗಿ ತಿಳಿಸಿದ್ದೆ.


ಇಸ್ರೇಲನ್ನು ರಕ್ಷಿಸುವ ಯೆಹೋವನಾಣೆಯಿಟ್ಟು ಹೇಳುತ್ತಿದ್ದೇನೆ, ನನ್ನ ಸ್ವಂತ ಮಗನಾದ ಯೋನಾತಾನನೇ ಈ ಪಾಪ ಮಾಡಿದ್ದರೂ ಅವನು ಸಾಯಲೇಬೇಕು” ಎಂದು ಹೇಳಿದನು. ಜನರಲ್ಲಿ ಯಾರೊಬ್ಬರೂ ಮಾತನಾಡಲಿಲ್ಲ.


“ಲೇವಿಯರು, ‘ಧರ್ಮಶಾಸ್ತ್ರವನ್ನು ಪ್ರೋತ್ಸಾಹಿಸುವದಕ್ಕೂ ಅವುಗಳನ್ನು ಅನುಸರಿಸುವದಕ್ಕೂ ನಿರಾಕರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.”


ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದ್ದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ದೇವರಾದ ಯೆಹೋವನು ಆ ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನೂ ಅಲ್ಲದೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರವನ್ನೂ ಬೆಳೆಸಿದನು.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಪವಿತ್ರರೂ ಧನ್ಯರೂ ಆಗಿದ್ದಾರೆ. ಈ ಜನರ ಮೇಲೆ ಎರಡನೆ ಮರಣಕ್ಕೆ ಅಧಿಕಾರವಿಲ್ಲ. ಆ ಜನರು ದೇವರಿಗೆ ಮತ್ತು ಕ್ರಿಸ್ತನಿಗೆ ಯಾಜಕರಾಗಿರುತ್ತಾರೆ. ಅವರು ಆತನೊಂದಿಗೆ ಒಂದು ಸಾವಿರ ವರ್ಷ ಆಳುತ್ತಾರೆ.


ಯೆಹೋವನು ಜನರಿಗೆ ತಿಳಿಸಬೇಕೆಂದು ಹೇಳಿದ ಎಲ್ಲವನ್ನು ಯೆರೆಮೀಯನು ಹೇಳಿ ಮುಗಿಸಿದನು. ಆಗ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಯೆರೆಮೀಯನನ್ನು ಹಿಡಿದುಕೊಂಡರು. ಅವರು “ನೀನು ಇಂಥಾ ಭಯಂಕರವಾದ ವಿಷಯವನ್ನು ಹೇಳಿದ್ದಕ್ಕಾಗಿ ನಿನಗೆ ಮರಣವೇ ಗತಿ!


ಆದರೆ ರಾಜನು, “ಅಹೀಮೆಲೆಕನೇ, ನೀನು ಮತ್ತು ನಿನ್ನ ಬಂಧುಗಳೆಲ್ಲರೂ ಸಾಯಲೇಬೇಕು!” ಎಂದು ಹೇಳಿದನು.


ಇಷಯನ ಮಗ ಬದುಕಿರುವವರೆಗೆ ನೀನು ರಾಜನಾಗುವುದೇ ಇಲ್ಲ; ನಿನಗೆ ರಾಜ್ಯಾಧಿಕಾರವೂ ಸಿಗುವುದಿಲ್ಲ. ಈಗ ದಾವೀದನನ್ನು ಕರೆದುಕೊಂಡು ಬಾ! ಅವನೊಬ್ಬ ಸತ್ತಮನುಷ್ಯ!” ಎಂದು ಹೇಳಿದನು.


ಸೌಲನು, “ನಾನು ನನ್ನ ಆಣೆಯನ್ನು ನೆರವೇರಿಸದಿದ್ದರೆ ಯೆಹೋವನು ಬಹುಶಃ ನನಗೆ ಬಹಳ ಕೆಟ್ಟದ್ದನ್ನು ಮಾಡಬಹುದು. ಯೋನಾತಾನನು ಸಾಯಲೇಬೇಕು” ಎಂದು ಹೇಳಿದನು.


ನೀನು ನಗರವನ್ನು ಬಿಟ್ಟು ಕಿದ್ರೋನ್ ಹೊಳೆಯ ಹಿಂದಕ್ಕೆ ಹೋದರೆ, ನಿನ್ನನ್ನು ಕೊಲ್ಲಲಾಗುವುದು. ಅದು ನಿನ್ನ ಸ್ವಂತ ತಪ್ಪಾಗುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು