Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:3 - ಪರಿಶುದ್ದ ಬೈಬಲ್‌

3 ದೇವರು ತನ್ನ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ಆ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿ ಆ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:3
22 ತಿಳಿವುಗಳ ಹೋಲಿಕೆ  

“ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.


ನಂತರ ಯೇಸು ಫರಿಸಾಯರಿಗೆ, “ಸಬ್ಬತ್‌ದಿನವನ್ನು ನಿರ್ಮಾಣ ಮಾಡಿರುವುದು ಜನರ ಸಹಾಯಕ್ಕಾಗಿ. ಆದರೆ ಜನರನ್ನು ಸೃಷ್ಟಿಸಿರುವುದು ಸಬ್ಬತ್‌ದಿನಕ್ಕೆ ಅವರು ಅಧೀನರಾಗಿರಲಿ ಎಂದಲ್ಲ.


ಅವರ ವಿಶ್ರಾಂತಿ ದಿವಸಗಳ ಬಗ್ಗೆ ತಿಳಿಸಿದೆನು. ಆ ವಿಶೇಷ ದಿವಸಗಳು ನನಗೂ ಅವರಿಗೂ ಇರುವ ಸಂಬಂಧಕ್ಕೆ ಒಂದು ಗುರುತಾಗಿತ್ತು. ನಾನೇ ಯೆಹೋವನೆಂದೂ ನಾನು ಅವರನ್ನು ನನಗೆ ವಿಶೇಷವಾದವರನ್ನಾಗಿ ಮಾಡಿಕೊಳ್ಳುತ್ತಿರುವೆನೆಂದೂ ಅವು ತೋರಿಸುತ್ತಿದ್ದವು.


ಬಳಿಕ ಆ ಸ್ತ್ರೀಯರು ಯೇಸುವಿನ ದೇಹಕ್ಕೆ ಹಚ್ಚಲು ಪರಿಮಳದ್ರವ್ಯಗಳನ್ನು ಸಿದ್ಧಮಾಡುವುದಕ್ಕಾಗಿ ಹೊರಟುಹೋದರು. ಸಬ್ಬತ್ ದಿನದಲ್ಲಿ ಅವರು ವಿಶ್ರಮಿಸಿಕೊಂಡರು. ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಸಬ್ಬತ್‌ದಿನದಂದು ಜನರೆಲ್ಲರೂ ವಿಶ್ರಾಂತಿ ತೆಗೆದುಕೊಳ್ಳಬೇಕಿತ್ತು.


“ನೀವು ವಾರದಲ್ಲಿ ಆರುದಿನ ಕೆಲಸ ಮಾಡುವಿರಿ. ಆದರೆ ಏಳನೆಯ ದಿನದಲ್ಲಿ ನೀವು ವಿಶ್ರಮಿಸಿಕೊಳ್ಳಬೇಕು. ನೀವು ಬಿತ್ತುವ ಮತ್ತು ಕೊಯ್ಯುವ ಸಮಯದಲ್ಲಿಯೂ ವಿಶ್ರಮಿಸಿಕೊಳ್ಳಬೇಕು.


ಅವರಿಗೆ ನಿನ್ನ ವಿಶೇಷ ದಿನವಾದ ಸಬ್ಬತ್ತನ್ನು ತಿಳಿಸಿದೆ. ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಕಟ್ಟಳೆಗಳನ್ನು ತಿಳಿಸಿದೆ.


“ಆರು ದಿನಗಳಲ್ಲಿ ನಿಮ್ಮ ಕೆಲಸ ಮಾಡಿರಿ. ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಿರಿ. ಏಳನೆಯ ದಿನದಲ್ಲಿ ನಿಮ್ಮ ಗುಲಾಮರೂ ಎತ್ತುಗಳೂ ಕತ್ತೆಗಳೂ ವಿದೇಶಿಯರೂ ವಿಶ್ರಮಿಸಿಕೊಳ್ಳಲಿ.


ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಕ್ತಾಯಗೊಳಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡನು.


ಇದು ಆಕಾಶದ ಮತ್ತು ಭೂಮಿಯ ಚರಿತ್ರೆ. ದೇವರು ಭೂಮಿಯನ್ನು ಮತ್ತು ಆಕಾಶವನ್ನು ಸೃಷ್ಟಿಸಿದಾಗ ನಡೆದ ಸಂಗತಿಗಳೇ ಈ ಚರಿತ್ರೆ.


ದೇವರು ತಾನು ಸೃಷ್ಟಿಸಿದ್ದನ್ನೆಲ್ಲಾ ನೋಡಿದಾಗ, ಅವು ಆತನಿಗೆ ಒಳ್ಳೆಯದಾಗಿ ಕಂಡವು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಆರನೆ ದಿನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು