Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:4 - ಪರಿಶುದ್ದ ಬೈಬಲ್‌

4 ಇದು ಆಕಾಶದ ಮತ್ತು ಭೂಮಿಯ ಚರಿತ್ರೆ. ದೇವರು ಭೂಮಿಯನ್ನು ಮತ್ತು ಆಕಾಶವನ್ನು ಸೃಷ್ಟಿಸಿದಾಗ ನಡೆದ ಸಂಗತಿಗಳೇ ಈ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದರು. ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:4
27 ತಿಳಿವುಗಳ ಹೋಲಿಕೆ  

ಇದು ಆದಾಮನ ಕುಟುಂಬ ಚರಿತ್ರೆ. ದೇವರು ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿ ಮಾಡಿದನು.


ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”


ಯೋಬನೇ, ಮಳೆಗೆ ತಂದೆಯಿರುವನೇ? ಇಬ್ಬನಿಯ ಹನಿಗಳನ್ನು ನಿರ್ಮಿಸಿದವರು ಯಾರು?


ಈ ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.


ಯೆಹೋವನೇ ಯುದ್ಧವೀರನು. ಆತನ ನಾಮಧೇಯವು ಯೆಹೋವನೇ.


ಎದೋಮನೆಂಬ ಏಸಾವನ ಕುಟುಂಬ ಚರಿತ್ರೆ:


ದೇವರು ತಾನು ಸೃಷ್ಟಿಸಿದ್ದನ್ನೆಲ್ಲಾ ನೋಡಿದಾಗ, ಅವು ಆತನಿಗೆ ಒಳ್ಳೆಯದಾಗಿ ಕಂಡವು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಆರನೆ ದಿನವಾಯಿತು.


ದೇವರಿಗೆ ಬೆಳಕು ಒಳ್ಳೆಯದಾಗಿ ಕಂಡಿತು. ಬಳಿಕ ದೇವರು ಕತ್ತಲೆಯಿಂದ ಬೆಳಕನ್ನು ಬೇರ್ಪಡಿಸಿದನು.


ಯೆಹೋವನಲ್ಲದೆ ಬೇರೆ ಯಾವ ದೇವರೂ ಇಲ್ಲ. ನಮ್ಮ ದೇವರಲ್ಲದೆ ಬೇರೆ ಯಾವ ಬಂಡೆಯೂ ಇಲ್ಲ.


“ನಮ್ಮ ಪಿತೃಗಳ ದೇವರಾದ ಯೆಹೋವನೇ, ನೀನು ಪರಲೋಕದಲ್ಲಿರುವ ದೇವರು. ಲೋಕದ ಎಲ್ಲಾ ದೇಶಗಳನ್ನಾಳುವವನು ನೀನೇ. ಬಲಸಾಮರ್ಥ್ಯವುಳ್ಳವನು ನೀನೇ, ಯಾರೂ ನಿನಗೆದುರಾಗಿ ನಿಲ್ಲಲಾರರು.


ಲೇವಿಯು ನೂರಮೂವತ್ತೇಳು ವರ್ಷ ಜೀವಿಸಿದನು. ಲೇವಿಯ ಗಂಡುಮಕ್ಕಳ ವಂಶಾವಳಿ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.


ಏಸಾವನು ಎದೋಮ್ ಜನರ ತಂದೆ. ಸೇಯೀರ್ ದೇಶದಲ್ಲಿ ವಾಸವಾಗಿದ್ದ ಏಸಾವನ ಕುಟುಂಬದವರ ಹೆಸರುಗಳು:


ಇದು ಇಸಾಕನ ಚರಿತ್ರೆ. ಅಬ್ರಹಾಮನಿಗೆ ಇಸಾಕ ಎಂಬ ಹೆಸರಿನ ಮಗನಿದ್ದನು.


ಇದು ಇಷ್ಮಾಯೇಲನ ವಂಶಾವಳಿ: ಇಷ್ಮಾಯೇಲನು ಅಬ್ರಹಾಮನ ಮತ್ತು ಹಾಗರಳ ಮಗನು. (ಈಜಿಪ್ಟಿನವಳಾದ ಹಾಗರಳು ಸಾರಳ ಸೇವಕಿ.)


ಇದು ಶೇಮನ ಕುಟುಂಬ ಚರಿತ್ರೆ. ಜಲಪ್ರಳಯದ ಎರಡು ವರ್ಷಗಳ ನಂತರ ಶೇಮನು 100 ವರ್ಷದವನಾಗಿದ್ದಾಗ ಅರ್ಪಕ್ಷದ್ ಎಂಬ ಮಗನನ್ನು ಪಡೆದನು.


ನೋಹನ ಗಂಡುಮಕ್ಕಳು: ಶೇಮ್, ಹಾಮ್ ಮತ್ತು ಯೆಫೆತ್. ಜಲಪ್ರಳಯದ ನಂತರ ಈ ಮೂವರು ಅನೇಕ ಗಂಡುಮಕ್ಕಳನ್ನು ಪಡೆದರು. ಶೇಮನಿಗೂ ಹಾಮನಿಗೂ ಯೆಫೆತನಿಗೂ ಹುಟ್ಟಿದ ಗಂಡುಮಕ್ಕಳು:


ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.


ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.


ಆಗ ನೀರಿನ ಅಧಿಪತಿಯಾದ ದೂತನು ದೇವರಿಗೆ ಹೇಳಿದ್ದು ನನಗೆ ಕೇಳಿಸಿತು: “ನೀನೇ ವರ್ತಮಾನ ಕಾಲದಲ್ಲಿರುವಾತನು. ನೀನೊಬ್ಬನೇ ಪರಿಶುದ್ಧನು. ನೀನು ನೀಡಿದ ಈ ತೀರ್ಪುಗಳಲ್ಲೆಲ್ಲಾ ನೀನು ನ್ಯಾಯವಂತನಾಗಿರುವೆ.


ಆ ಹಿರಿಯರು ಹೀಗೆ ಹೇಳಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ಭೂತಕಾಲದಲ್ಲಿ ಇದ್ದಾತನೇ, ವರ್ತಮಾನ ಕಾಲದಲ್ಲಿ ಇರುವಾತನೇ, ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀನು ನಿನ್ನ ಮಹಾ ಅಧಿಕಾರವನ್ನು ಉಪಯೋಗಿಸಿ ನಿನ್ನ ಆಡಳಿತವನ್ನು ಆರಂಭಿಸಿದ್ದರಿಂದ ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.


ಏಷ್ಯಾ ಪ್ರದೇಶದಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನೆಂದರೆ: ವರ್ತಮಾನ, ಭೂತ, ಭವಿಷ್ಯತ್ಕಾಲಗಳಲ್ಲಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ! ನೀನೇ, ಹೌದು, ನೀನೊಬ್ಬನೇ ದೇವರು!


ಆಗ ದೇವರು, “ಬೆಳಕಾಗಲಿ” ಅನ್ನಲು ಬೆಳಕಾಯಿತು.


ದೇವರು ತನ್ನ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ಆ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು.


“ಯೋಬನೇ, ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದೆ? ನೀನು ಬಹು ಜಾಣನಾಗಿದ್ದರೆ ನನಗೆ ಉತ್ತರಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು