Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:11 - ಪರಿಶುದ್ದ ಬೈಬಲ್‌

11 ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ಅಬ್ರಹಾಮನು - ಈ ಸ್ಥಳದವರು ದೇವರ ಭಯವಿಲ್ಲದವರಾಗಿ ನನ್ನ ಹೆಂಡತಿಯ ನಿವಿುತ್ತ ನನ್ನನ್ನು ಕೊಂದಾರೆಂದು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:11
16 ತಿಳಿವುಗಳ ಹೋಲಿಕೆ  

ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.


ಆಗ ನೀನು ಯೆಹೋವನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವೆ; ದೈವಜ್ಞಾನವನ್ನು ಹೊಂದಿಕೊಳ್ಳುವೆ.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


ಇಸಾಕನ ಹೆಂಡತಿಯಾದ ರೆಬೆಕ್ಕಳು ತುಂಬ ಸೌಂದರ್ಯವತಿಯಾಗಿದ್ದಳು. ಆ ಸ್ಥಳದ ಗಂಡಸರು ರೆಬೆಕ್ಕಳ ಬಗ್ಗೆ ಇಸಾಕನನ್ನು ಕೇಳಿದರು. ಇಸಾಕನು ಅವರಿಗೆ, “ಆಕೆ ನನ್ನ ತಂಗಿ” ಎಂದು ಹೇಳಿದನು. ರೆಬೆಕ್ಕಳು ತನಗೆ ಹೆಂಡತಿಯಾಗಬೇಕೆಂದು ಅವರಿಗೆ ತಿಳಿದರೆ ಆಕೆಯನ್ನು ತೆಗೆದುಕೊಳ್ಳಲು ಅವರು ತನ್ನನ್ನು ಕೊಲ್ಲಬಹುದೆಂಬ ಹೆದರಿಕೆಯಿಂದ ಇಸಾಕನು ಹಾಗೆ ಹೇಳಿದನು.


ಈಜಿಪ್ಟಿನ ಗಂಡಸರು ನಿನ್ನನ್ನು ನೋಡಿ, ‘ಈಕೆ ಇವನ ಹೆಂಡತಿ’ ಎಂದು ತಿಳಿದು ನಿನ್ನನ್ನು ಪಡೆದುಕೊಳ್ಳುವುದಕ್ಕಾಗಿ ನನ್ನನ್ನು ಕೊಂದು ನಿನ್ನನ್ನು ಜೀವಂತವಾಗಿ ಉಳಿಸುವರು.


ಇದಲ್ಲದೆ ದೇವರು ಮನುಷ್ಯರಿಗೆ, ‘ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನ; ದುಷ್ಟತನವನ್ನು ತೊರೆದುಬಿಡುವುದೇ ವಿವೇಕ’ ಎಂದು ಹೇಳಿದನು.”


ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;


ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು.


“ಅವರಿಗೆ ದೇವರಲ್ಲಿ ಭಯವಾಗಲಿ ಗೌರವವಾಗಲಿ ಇಲ್ಲ.”


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು.


ದುಷ್ಟರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


ನೀನು ಭಯಪಟ್ಟಿದ್ದೇಕೆ? ನನಗೆ ಹೀಗೆ ಮಾಡಿದ್ದೇಕೆ?” ಎಂದು ಕೇಳಿದನು.


ಆಕೆ ನನ್ನ ಹೆಂಡತಿಯೇನೋ ನಿಜ, ಆದರೆ ಆಕೆ ನನಗೆ ತಂಗಿಯೂ ಆಗಬೇಕು. ಆಕೆ ನನ್ನ ತಂದೆಯ ಮಗಳು; ನನ್ನ ತಾಯಿಯ ಮಗಳಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು