Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:5 - ಪರಿಶುದ್ದ ಬೈಬಲ್‌

5 ‘ಈಕೆ ನನಗೆ ತಂಗಿಯಾಗಬೇಕು’ ಎಂದು ಅಬ್ರಹಾಮನೇ ಹೇಳಿದನು. ಅಲ್ಲದೆ ಈಕೆಯೂ ‘ಅವನು ನನ್ನ ಸಹೋದರ’ ಎಂದು ಹೇಳಿದಳು. ನಾನು ನಿರಪರಾಧಿ. ನಾನು ಮಾಡಲಿದ್ದ ತಪ್ಪು ನನಗೆ ತಿಳಿದಿರಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಮನುಷ್ಯನೇ ಈಕೆ ನನಗೆ ತಂಗಿಯಾಗಬೇಕೆಂದು ಹೇಳಿದ; ಈಕೆಯೂ ಆತನು ನನಗೆ ಅಣ್ಣನಾಗಬೇಕೆಂದು ಹೇಳಿದಳು. ಶುದ್ಧಮನಸ್ಸಿನಿಂದ ಹಾಗೂ ಶುದ್ಧಹಸ್ತದಿಂದ ಈ ಕಾರ್ಯಮಾಡಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ತಾನೇ ಹೇಳಲಿಲ್ಲವೇ. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯರ್ಥಾರ್ಥಮನಸ್ಸಿನಿಂದಲೂ ಶುದ್ಧಹಸ್ತದಿಂದಲೂ ಇದನ್ನು ಮಾಡಿದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ನನಗೆ, ‘ಅವಳು ನನ್ನ ತಂಗಿ,’ ಎಂದು ಹೇಳಲಿಲ್ಲವೋ? ಅವಳೇ, ‘ಅವನು ನನ್ನ ಅಣ್ಣ,’ ಎಂದು ಹೇಳಿದ್ದಾಳೆ. ಆದ್ದರಿಂದ ನಾನು ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಹಸ್ತದಿಂದಲೂ ಇದನ್ನು ಮಾಡಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:5
21 ತಿಳಿವುಗಳ ಹೋಲಿಕೆ  

ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು.


ನಿನ್ನ ತಂದೆಯಾದ ದಾವೀದನು ಸೇವೆಮಾಡಿದಂತೆ ನೀನೂ ನನ್ನ ಸೇವೆಮಾಡಬೇಕು, ಅವನು ನ್ಯಾಯವಂತನಾಗಿದ್ದನು ಮತ್ತು ಯಥಾರ್ಥವಂತನಾಗಿದ್ದನು; ನೀನು ನನ್ನ ನಿಯಮಗಳಿಗೆ ವಿಧೇಯನಾಗಿರಬೇಕು ಮತ್ತು ನಾನು ನಿನಗೆ ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.


ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು.


ವಿಶ್ವಾಸಿಗಳಾದ ನಿಮ್ಮೊಡನೆ ನಾವಿದ್ದಾಗ ತಪ್ಪಿಲ್ಲದವರಾಗಿಯೂ ಪರಿಶುದ್ಧರಾಗಿಯೂ ಮತ್ತು ನಿರ್ದೋಷಿಗಳಾಗಿಯೂ ಜೀವಿಸಿದ್ದೆವು. ಇದು ನಿಜವೆಂಬುದು ನಿಮಗೂ ತಿಳಿದಿದೆ ಮತ್ತು ದೇವರಿಗೂ ತಿಳಿದಿದೆ.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು.


ಸಧರ್ಮಿಯು ಒಳ್ಳೆಯ ರೀತಿಯಲ್ಲಿ ಜೀವಿಸುತ್ತಾನೆ; ಅವನ ಮಕ್ಕಳಿಗೆ ಆಶೀರ್ವಾದವಾಗುವುದು.


ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ. ಕೆಡುಕರು ತಮ್ಮ ಮೋಸಕೃತ್ಯಗಳ ಮೂಲಕ ತಮ್ಮನ್ನೇ ನಾಶಮಾಡಿಕೊಳ್ಳುತ್ತಾರೆ.


ದಾವೀದನು ಯಥಾರ್ಥಹೃದಯದಿಂದಲೂ ಬಹು ವಿವೇಕದಿಂದಲೂ ಇಸ್ರೇಲರನ್ನು ನಡೆಸಿದನು.


ಹೀಗಿರಲು, ನನ್ನ ಹೃದಯವನ್ನು ನಾನೇಕೆ ನಿರ್ಮಲಗೊಳಿಸಿಕೊಳ್ಳಲಿ? ನನ್ನ ಕೈಗಳನ್ನು ನಾನೇಕೆ ಸ್ವಚ್ಛಗೊಳಿಸಿಕೊಳ್ಳಲಿ?


ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.


ದೇವರೇ, ನೀನು ನಿಜವಾಗಿಯೂ ಒಳ್ಳೆಯವನು. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ಕಾಪಾಡು.


ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ ಶುದ್ಧ ಹೃದಯವುಳ್ಳವರೂ ನನ್ನ ಹೆಸರಿನಲ್ಲಿ ಮೋಸ ಪ್ರಮಾಣ ಮಾಡದವರೂ ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು.


‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ!


ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.


“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.


“ನಮ್ಮ ದೇವರು ಯೆಹೋವನೇ! ನಮ್ಮ ದೇವರು ಯೆಹೋವನೇ ಎಂದು ಇನ್ನೊಮ್ಮೆ ನಾವು ಹೇಳುತ್ತೇವೆ. ನಾವು ಇದನ್ನು ಏಕೆ ಮಾಡಿದೆವೆಂಬುದು ದೇವರಿಗೆ ತಿಳಿದಿದೆ. ನೀವೂ ಅದನ್ನು ತಿಳಿದುಕೊಂಡಿರಬೇಕೆಂಬುದು ನಮ್ಮ ಆಶೆ. ನಾವು ಮಾಡಿದ್ದನ್ನು ನೀವು ವಿವೇಚಿಸಿ ನೋಡಬಹುದು. ನಾವೇನಾದರೂ ತಪ್ಪುಮಾಡಿದ್ದೇವೆಂದು ಅನಿಸಿದ್ದಲ್ಲಿ ಆಗ ನೀವು ನಮ್ಮನ್ನು ಕೊಲ್ಲಬಹುದು.


ಆದ್ದರಿಂದ ನೀನು ನನಗೆ ತಂಗಿಯಾಗಬೇಕೆಂದು ಜನರಿಗೆ ಹೇಳು. ಆಗ ಅವರು ನನ್ನನ್ನು ನಿನ್ನ ಸಹೋದರನೆಂದು ಭಾವಿಸಿ ನನ್ನನ್ನು ಕೊಲ್ಲದೆ ನನಗೆ ದಯೆತೋರುವರು. ಹೀಗೆ ನೀನು ನನ್ನ ಪ್ರಾಣ ಉಳಿಸುವೆ” ಎಂದು ಹೇಳಿದನು.


ದೇವರು ನನ್ನನ್ನು ತಂದೆಯ ಮನೆಯಿಂದ ಹೊರಡಿಸಿ ಪರಸ್ಥಳಗಳಲ್ಲಿ ಸಂಚರಿಸುವಂತೆ ಮಾಡಿದ್ದರಿಂದ ನಾನು ಸಾರಳಿಗೆ, ‘ನಿನ್ನಿಂದ ನನಗೆ ಒಂದು ಉಪಕಾರವಾಗಬೇಕು. ಅದೇನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು ಎಂದು ಆಕೆಗೆ ತಿಳಿಸಿದೆನು’” ಎಂದನು.


ಅಬೀಮೆಲೆಕನು ಸಾರಳಿಗೆ, “ನಾನು ನಿನ್ನ ಅಣ್ಣನಾದ ಅಬ್ರಹಾಮನಿಗೆ ಒಂದು ಸಾವಿರ ಬೆಳ್ಳಿಯ ನಾಣ್ಯಗಳನ್ನು ಕೊಡುವೆ. ನಡೆದ ಈ ಘಟನೆಗಳಿಗೆ ಇದು ಪ್ರಾಯಶ್ಚಿತ್ತವಾಗಿದೆ. ನೀನು ನಿಷ್ಕಳಂಕಳೆಂದು ಇದು ಪ್ರತಿಯೊಬ್ಬರಿಗೂ ಸಾಕ್ಷಿಯಾಗಿರಲಿ” ಎಂದು ಹೇಳಿದನು.


ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು