Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:1 - ಪರಿಶುದ್ದ ಬೈಬಲ್‌

1 ಯೆಹೋವನು ಸಾರಳಿಗೆ ಮಾಡಿದ ವಾಗ್ದಾನವನ್ನು ಮರೆಯದೆ ಈಡೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ತಾವು ಹೇಳಿದ್ದಂತೆಯೇ ಸಾರಳಿಗೆ ನೆರವಾದರು. ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ತಾನು ಹೇಳಿದ್ದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಸಾರಳಿಗೆ ವಾಗ್ದಾನ ಮಾಡಿದಂತೆ ಆಕೆಗೆ ದಯೆತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:1
23 ತಿಳಿವುಗಳ ಹೋಲಿಕೆ  

ಯೆಹೋವನ ಮಾತುಗಳು ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ.


ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು. ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು.


ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.


ಅದಕ್ಕೆ ದೇವರು ಅವನಿಗೆ, “ಇಲ್ಲ! ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ, ‘ಇಸಾಕ’ ಎಂದು ಹೆಸರಿಡಬೇಕು. ನಾನು ಒಂದು ಒಡಂಬಡಿಕೆಯನ್ನು ಅವನೊಡನೆ ಮಾಡಿಕೊಳ್ಳುವೆನು. ಆ ಒಡಂಬಡಿಕೆಯು ಅವನ ಎಲ್ಲಾ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.


ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.


ಮಾನವ ಸಹಜವಾದ ರೀತಿಯಲ್ಲಿ ಅಬ್ರಹಾಮನ ಮಗನು ಆ ದಾಸಿಯಲ್ಲಿ ಹುಟ್ಟಿದನು. ಸ್ವತಂತ್ರಳಾಗಿದ್ದ ಸ್ತ್ರೀಯಲ್ಲಿ ಹುಟ್ಟಿದ ಮಗನಾದರೋ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನದ ಫಲವಾಗಿದ್ದನು.


ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


ಯೆಹೋವನು ಹನ್ನಳಿಗೆ ದಯೆತೋರಿದನು. ಅವಳಿಗೆ ಮೂರು ಮಂದಿ ಗಂಡುಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾದ ಸಮುವೇಲನು ಯೆಹೋವನ ಸನ್ನಿಧಿಯಲ್ಲಿ ದೊಡ್ಡವನಾದನು.


ಅಬ್ರಹಾಮನ ಒಬ್ಬ ಮಗನು ಮಾನವ ಸಹಜವಾದ ರೀತಿಯಲ್ಲಿ ಜನಿಸಿದನು. ಅಬ್ರಹಾಮನ ಮತ್ತೊಬ್ಬ ಮಗನು ದೇವರ ವಾಗ್ದಾನದ ಫಲವಾಗಿ ದೇವರಾತ್ಮನ ಶಕ್ತಿಯಿಂದ ಜನಿಸಿದನು. ನನ್ನ ಸಹೋದರ ಸಹೋದರಿಯರೇ, ನೀವು ಸಹ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೀರಿ. ಮಾನವ ಸಹಜವಾದ ರೀತಿಯಲ್ಲಿ ಜನಿಸಿದ್ದ ಮಗನು ಮತ್ತೊಬ್ಬ ಮಗನನ್ನು ಹಿಂಸೆಪಡಿಸಿದನು. ಇದೇ ಈಗಲೂ ನಡೆಯುತ್ತಿದೆ.


ನೊವೊಮಿಯು ಮೋವಾಬ್ ಬೆಟ್ಟಪ್ರದೇಶದಲ್ಲಿದ್ದಾಗ ಯೆಹೋವನು ತನ್ನ ಜನರಿಗೆ ಕರುಣೆತೋರಿ ಆಹಾರವನ್ನು ಒದಗಿಸಿರುವ ಸುದ್ದಿಯು ನೊವೊಮಿಗೆ ತಿಳಿಯಿತು. ಆದ್ದರಿಂದ ಆಕೆಯು ಮೋವಾಬ್ ಬೆಟ್ಟಪ್ರದೇಶವನ್ನು ಬಿಟ್ಟು ತನ್ನ ಊರಿಗೆ ಹೋಗಲು ನಿರ್ಧರಿಸಿದಳು. ಅವಳ ಸೊಸೆಯಂದಿರು ಸಹ ಅವಳ ಸಂಗಡ ಹೋಗಲು ತೀರ್ಮಾನಿಸಿದರು.


ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.


ಆದರೆ ನಾನು ನನ್ನ ಒಡಂಬಡಿಕೆಯನ್ನು ಇಸಾಕನೊಡನೆ ಮಾಡಿಕೊಳ್ಳುವೆನು. ಸಾರಳಲ್ಲಿ ಹುಟ್ಟುವ ಮಗನೇ ಇಸಾಕನು. ಮುಂದಿನ ವರ್ಷ ಇದೇ ಸಮಯದಲ್ಲಿ ಇಸಾಕನು ಹುಟ್ಟುವನು” ಎಂದು ಹೇಳಿದನು.


ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.


“ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ. ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.


ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು.


ಯೆಹೋವನೇ, ನಿನ್ನ ಜನರಿಗೆ ದಯೆತೋರುವಾಗ ನನ್ನನ್ನು ಜ್ಞಾಪಿಸಿಕೊಂಡು ದಯೆತೋರು. ನಿನ್ನ ಜನರನ್ನು ರಕ್ಷಿಸುವಾಗ ನನ್ನನ್ನು ನೆನಪು ಮಾಡಿಕೊಂಡು ರಕ್ಷಿಸು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಇದಲ್ಲದೆ ಯೆಹೋವನು ಅವನಿಗೆ, “ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, ‘ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ.


ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.


ಸಾರಳು ನನ್ನ ಒಡೆಯನ ಹೆಂಡತಿ. ಆಕೆ ತುಂಬಾ ವಯಸ್ಸಾಗಿರುವಾಗ ಒಬ್ಬ ಗಂಡುಮಗನನ್ನು ಹೆತ್ತಳು. ನನ್ನ ಒಡೆಯನು ತನ್ನ ಆಸ್ತಿಯನ್ನೆಲ್ಲ ಆ ಮಗನಿಗೇ ಕೊಟ್ಟಿದ್ದಾನೆ.


ಎಲ್ಕಾನನ ಕುಟುಂಬದವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ, ರಾಮಾತಯಿಮಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಎಲ್ಕಾನನು ಹನ್ನಳನ್ನು ಕೂಡಿದನು. ಯೆಹೋವನು ಹನ್ನಳನ್ನು ಜ್ಞಾಪಿಸಿಕೊಂಡನು.


ಆ ಸ್ತ್ರೀಯು ಗರ್ಭಿಣಿಯಾದಳು. ಎಲೀಷನು ಹೇಳಿದಂತೆ, ಮುಂದಿನ ವಂಸತದಲ್ಲಿ ಅವಳು ಒಬ್ಬ ಮಗನಿಗೆ ಜನ್ಮನೀಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು