Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:20 - ಪರಿಶುದ್ದ ಬೈಬಲ್‌

20 ದೇವರು ಆ ಮಗುವಿನ ಸಂಗಡವಿದ್ದ ಕಾರಣ ಆ ಮಗುವು ಬೆಳೆದು ದೊಡ್ಡವನಾದನು; ಕಾಡಿನಲ್ಲಿ ವಾಸವಾಗಿದ್ದು ಚತುರ ಬಿಲ್ಲುಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹುಡುಗನ ಸಂಗಡ ದೇವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರು ಆ ಹುಡುಗನ ಸಂಗಡ ಇದ್ದರು. ಹುಡುಗನು ಬೆಳೆದು ಮರುಭೂಮಿಯಲ್ಲಿ ವಾಸಮಾಡಿ ಬಿಲ್ಲುಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:20
13 ತಿಳಿವುಗಳ ಹೋಲಿಕೆ  

“ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.


ಆದರೆ ಯೆಹೋವನು ಯೋಸೇಫನ ಸಂಗಡವಿದ್ದು ಕರುಣೆತೋರಿದನು. ಸ್ವಲ್ಪಕಾಲವಾದ ಮೇಲೆ ಸೆರೆಮನೆಯ ಮುಖ್ಯಾಧಿಕಾರಿಯು ಯೋಸೇಫನನ್ನು ಪ್ರೀತಿಸತೊಡಗಿದನು.


ಇಷ್ಮಾಯೇಲನು ಕಾಡುಕತ್ತೆಯಂತೆ ಗಡುಸಾಗಿದ್ದು ಸ್ವತಂತ್ರವಾಗಿರುವನು. ಅವನು ಪ್ರತಿಯೊಬ್ಬರಿಗೂ ವಿರೋಧವಾಗಿರುವನು; ಪ್ರತಿಯೊಬ್ಬರೂ ಅವನಿಗೆ ವಿರೋಧವಾಗಿರುವರು. ಅವನು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಾ ತನ್ನ ಸಹೋದರರ ಸಮೀಪದಲ್ಲಿ ವಾಸಿಸಿದರೂ ಅವರಿಗೆ ವಿರೋಧವಾಗಿರುವನು.” ಎಂದು ಹೇಳಿ ಹೊರಟುಹೋದನು.


ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು.


ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಎಂದು ಹೇಳಿದನು.


ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು.


“ನೀನು ಇಷ್ಮಾಯೇಲನ ಬಗ್ಗೆ ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ನಾನು ಅವನನ್ನು ಆಶೀರ್ವದಿಸುವೆನು. ಅವನು ಅನೇಕ ಮಕ್ಕಳನ್ನು ಪಡೆದುಕೊಳ್ಳುವನು. ಹನ್ನೆರಡು ಮಹಾನಾಯಕರುಗಳಿಗೆ ಅವನು ತಂದೆಯಾಗುವನು. ಅವನ ಸಂತತಿಯು ಮಹಾಜನಾಂಗವಾಗುವುದು.


ಯೆಹೋವನ ಮುಂದೆ ಅವನು ಚತುರ ಬೇಟೆಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು ಅವನಿಗೆ ಹೋಲಿಸಿ, “ಅವನು ನಿಮ್ರೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು.


ಆದ್ದರಿಂದ ನಿನ್ನ ಬಿಲ್ಲುಬಾಣಗಳನ್ನು ತೆಗೆದುಕೊಂಡು ಬೇಟೆಗೆ ಹೋಗು. ನನಗೋಸ್ಕರ ಒಂದು ಪ್ರಾಣಿಯನ್ನು ಬೇಟೆಯಾಡಿಕೊಂಡು ಬಂದು


ಬಾಲಕ ಯೇಸು ಬೆಳೆದು ಬಲಗೊಂಡು ಸಂಪೂರ್ಣ ಜ್ಞಾನಿಯಾದನು. ದೇವರ ಆಶೀರ್ವಾದವು ಆತನೊಡನೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು