Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:33 - ಪರಿಶುದ್ದ ಬೈಬಲ್‌

33 ಅಬ್ರಹಾಮನು ಬೇರ್ಷೆಬದಲ್ಲಿ ವಿಶೇಷವಾದ ಒಂದು ಮರವನ್ನು ನೆಟ್ಟನು. ಆ ಸ್ಥಳದಲ್ಲಿ ಅವನು ಸದಾಕಾಲ ಜೀವಿಸುವ ದೇವರಾದ ಯೆಹೋವನಿಗೆ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲವೃಕ್ಷವನ್ನು ನೆಟ್ಟು ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು, ಅಲ್ಲಿ ನಿತ್ಯ ದೇವರಾಗಿರುವ ಯೆಹೋವ ದೇವರ ಹೆಸರನ್ನು ಹೇಳಿ ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:33
22 ತಿಳಿವುಗಳ ಹೋಲಿಕೆ  

ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ದೇವರಾದ ಯೆಹೋವನು ಜ್ಞಾನಿಯೆಂಬುದನ್ನು ನೀನು ಖಂಡಿತವಾಗಿಯೂ ಕೇಳಿರುವೆ. ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ.


ಬೆಟ್ಟಗಳು ಹುಟ್ಟುವುದಕ್ಕಿಂತ ಮೊದಲಿಂದಲೂ ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲಿನಿಂದಲೂ ನೀನೇ ದೇವರು. ಯಾವಾಗಲೂ ದೇವರಾಗಿದ್ದಾತನು ನೀನೇ! ಯಾವಾಗಲೂ ದೇವರಾಗಿರುವಾತನೂ ನೀನೇ!


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ಆದರೆ ರಹಸ್ಯವಾದ ಆ ಸತ್ಯವನ್ನು ಈಗ ನಮಗೆ ತೋರಿಸಲಾಗಿದೆ. ಮತ್ತು ಆ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಆಜ್ಞಾಪಿಸಿರುವುದು ಇದನ್ನೇ. ಎಲ್ಲಾ ಜನರು ನಂಬಿಕೊಂಡು ದೇವರಿಗೆ ವಿಧೇಯರಾಗಲೆಂದು ರಹಸ್ಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಸದಾಕಾಲ ಜೀವಿಸುತ್ತಾನೆ.


ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು.


ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು.


ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.


ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಆ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಆ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ.


ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.


“ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ಕಟ್ಟುವಾಗ ಅದರ ಪಕ್ಕದಲ್ಲಿ ಅಶೇರ್ ದೇವತೆಗೆ ಗೌರವವನ್ನು ತರುವಂಥ ಯಾವ ಮರದ ಕಂಬಗಳನ್ನು ನೆಡಬಾರದು;


ಆದ್ದರಿಂದ ಇಸಾಕನು ಆ ಬಾವಿಗೆ ಷಿಬಾ ಎಂದು ಹೆಸರಿಟ್ಟನು. ಇಂದಿಗೂ ಆ ನಗರಕ್ಕೆ ಬೇರ್ಷೆಬ ಎಂದು ಕರೆಯುತ್ತಾರೆ.


ಆದ್ದರಿಂದ ಆ ಸ್ಥಳದಲ್ಲಿ ಇಸಾಕನು ಯಜ್ಞವೇದಿಕೆಯನ್ನು ಕಟ್ಟಿ ಯೆಹೋವನನ್ನು ಆರಾಧಿಸಿದನು. ಇಸಾಕನು ಆ ಸ್ಥಳದಲ್ಲಿ ಪಾಳೆಯಮಾಡಿಕೊಂಡನು; ಅವನ ಸೇವಕರು ಅಲ್ಲಿ ಒಂದು ಬಾವಿಯನ್ನು ತೋಡಿದರು.


ಇಸಾಕನು ಆ ಸ್ಥಳದಿಂದ ಬೇರ್ಷೆಬಕ್ಕೆ ಹೋದನು.


ಯೇಸು ಕ್ರಿಸ್ತನು ನಿನ್ನೆ ಇದ್ದಂತೆ ಇಂದಿಗೂ ಇದ್ದಾನೆ. ಸದಾಕಾಲ ಹಾಗೆಯೇ ಇರುವನು.


ಬೇರ್ಷೆಬದಲ್ಲಿ ಒಪ್ಪಂದವನ್ನು ಮಾಡಿಕೊಂಡ ಮೇಲೆ ಅಬೀಮೆಲೆಕನು ಮತ್ತು ಅವನ ಸೈನ್ಯಾಧಿಕಾರಿಯು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.


“ಯೆಹೋವನು ಎಂದೆಂದಿಗೂ ಆಳುವನು!”


ನನ್ನ ಕೈಗಳನ್ನು ಆಕಾಶದ ಕಡೆಗೆತ್ತಿ ವಚನ ಕೊಡುತ್ತೇನೆ. ನಾನು ನಿತ್ಯಕಾಲಕ್ಕೆ ಜೀವಿಸುವುದು ಎಷ್ಟು ಸತ್ಯವೋ ಅದೇರೀತಿ ಇವೆಲ್ಲವೂ ನೆರವೇರುವವು.


ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. ಆದಿಯಿಂದಲೂ ಇರುವಾತನು ನೀನೊಬ್ಬನೇ!


ಆಗ ಹಬಕ್ಕೂಕನು ಹೇಳಿದ್ದೇನೆಂದರೆ, ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು