Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:8 - ಪರಿಶುದ್ದ ಬೈಬಲ್‌

8 ಅಬ್ರಹಾಮನು, “ಮಗನೇ, ಯಜ್ಞಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದು ಹೇಳಿದನು. ಹೀಗೆ ಅಬ್ರಹಾಮನು ಮತ್ತು ಅವನ ಮಗನು ಆ ಸ್ಥಳಕ್ಕೆ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಅಬ್ರಹಾಮನು, “ಬಲಿಗೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುತ್ತಾರೆ, ಮಗನೇ,” ಎಂದು ಉತ್ತರಕೊಟ್ಟ. ಅವರಿಬ್ಬರೂ ಹಾಗೇ ಮುಂದಕ್ಕೆ ಸಾಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಗನೇ, ಹೋಮಕ್ಕೆ ಬೇಕಾದ ಕುರಿಯನ್ನು ದೇವರೇ ಒದಗಿಸುವನು ಅಂದನು. ಹೀಗೆ ಅವರಿಬ್ಬರೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಬ್ರಹಾಮನು, “ನನ್ನ ಮಗನೇ, ದೇವರೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿಸುವರು,” ಎಂದು ಉತ್ತರಕೊಟ್ಟನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:8
14 ತಿಳಿವುಗಳ ಹೋಲಿಕೆ  

ಸಮೀಪದಲ್ಲಿ ನಡೆದುಹೋಗುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕೆ ದೇವರು ನೇಮಿಸಿದ ಕುರಿಮರಿ!” ಎಂದು ಹೇಳಿದನು.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಈ ದೇವದೂತರು ಗಟ್ಟಿಯಾದ ಧ್ವನಿಯಿಂದ ಇಂತೆಂದರು: “ವಧಿತನಾದ ಕುರಿಮರಿಯು ಅಧಿಕಾರವನ್ನು, ಸಂಪತ್ತನ್ನು, ಜ್ಞಾನವನ್ನು, ಬಲವನ್ನು, ಗೌರವವನ್ನು, ಪ್ರಭಾವವನ್ನು, ಸ್ತೋತ್ರವನ್ನು ಪಡೆಯಲು ಯೋಗ್ಯನಾಗಿದ್ದಾನೆ!”


ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಯೇಸು ತನ್ನ ಶಿಷ್ಯರ ಕಡೆಗೆ ದೃಷ್ಟಿಸಿ, “ಇದು ಮನುಷ್ಯರಿಗೆ ಅಸಾಧ್ಯವಾದ ಕಾರ್ಯ. ಆದರೆ ದೇವರಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.


ಅಮಚ್ಯನು ಆ ದೇವರ ಮನುಷ್ಯನಿಗೆ, “ಹಾಗಾದರೆ, ನಾನು ಈಗಾಗಲೇ ಅವರಿಗೆ ಕೊಟ್ಟಿರುವ ಹಣಕ್ಕೇನು ಮಾಡಲಿ?” ಎಂದು ಕೇಳಿದನು. ದೇವರ ಮನುಷ್ಯನು ಉತ್ತರಿಸಿದ್ದೇನೆಂದರೆ, “ಯೆಹೋವನ ಬಳಿಯಲ್ಲಿ ಯಾವ ಕೊರತೆಯೂ ಇಲ್ಲ. ನಿನಗೆ ಅದಕ್ಕಿಂತ ಅಧಿಕವಾಗಿ ಕೊಡಲು ಆತನು ಶಕ್ತನಾಗಿದ್ದಾನೆ” ಎಂದು ಹೇಳಿದನು.


ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆದನು. ಅಬ್ರಹಾಮನು, “ಏನು ಮಗನೇ?” ಎಂದು ಉತ್ತರಿಸಿದನು. ಇಸಾಕನು, “ಕಟ್ಟಿಗೆ ಮತ್ತು ಬೆಂಕಿ ನನಗೆ ಕಾಣಿಸುತ್ತಿವೆ. ಆದರೆ ಯಜ್ಞಕ್ಕೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದನು.


ದೇವರು ತಿಳಿಸಿದ್ದ ಸ್ಥಳಕ್ಕೆ ಬಂದರು. ಅಲ್ಲಿ ಅಬ್ರಹಾಮನು ಒಂದು ಯಜ್ಞವೇದಿಕೆಯನ್ನು ಕಟ್ಟಿ ಅದರ ಮೇಲೆ ಕಟ್ಟಿಗೆಯನ್ನು ಜೋಡಿಸಿದನು; ಆಮೇಲೆ ಅವನು ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಯಜ್ಞವೇದಿಕೆಯ ಮೇಲಿದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.


ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.


ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೋರ್ಡನ್ ನದಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಅವರಿಬ್ಬರೂ ಮುಂದೆ ಸಾಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು