Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:17 - ಪರಿಶುದ್ದ ಬೈಬಲ್‌

17-18 ಈ ಜಮೀನು ಮಮ್ರೆಗೆ ಪೂರ್ವದಲ್ಲಿರುವ ಮಕ್ಪೇಲದಲ್ಲಿತ್ತು. ಅಬ್ರಹಾಮನು ಆ ಜಮೀನಿಗೂ ಅದರಲ್ಲಿದ್ದ ಗವಿಗೂ ಜಮೀನಿನಲ್ಲಿದ್ದ ಎಲ್ಲಾ ಮರಗಳಿಗೂ ಒಡೆಯನಾದನು. ಎಫ್ರೋನನಿಗೂ ಅಬ್ರಹಾಮನಿಗೂ ಆದ ಒಪ್ಪಂದಕ್ಕೆ ನಗರದವರೆಲ್ಲರು ಸಾಕ್ಷಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಜಮೀನು, ಅದಕ್ಕೆ ಸೇರಿದ ಗವಿ, ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿದ್ದ ಮರಗಳು, ಇವೆಲ್ಲವೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂವಿುಯು, ಅದಕ್ಕೆ ಸೇರಿದ ಗವಿಯೂ ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳೂ ಸಹಿತವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋನನ ಹೊಲವೂ, ಆ ಹೊಲದಲ್ಲಿರುವ ಗವಿಯೂ, ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:17
14 ತಿಳಿವುಗಳ ಹೋಲಿಕೆ  

ಅವರು ಅವನ ಶರೀರವನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡು ಹೋಗಿ ಮಕ್ಪೇಲದಲ್ಲಿದ್ದ ಗವಿಯಲ್ಲಿ ಸಮಾಧಿ ಮಾಡಿದರು. ಮಮ್ರೆಯ ಬಯಲಿನಲ್ಲಿದ್ದ ಈ ಗವಿಯನ್ನು ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿದ್ದನು.


ಅವನ ಗಂಡುಮಕ್ಕಳಾದ ಇಸಾಕ ಮತ್ತು ಇಷ್ಮಾಯೇಲರು ಅವನನ್ನು ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಈ ಗವಿಯು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಜಮೀನಿನಲ್ಲಿದೆ. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.


ಅಬ್ರಹಾಮನು ಆ ಜಮೀನನ್ನು ಮತ್ತು ಅದರಲ್ಲಿದ್ದ ಗವಿಯನ್ನು ಹಿತ್ತಿಯರಿಂದ ಕೊಂಡುಕೊಂಡನು. ಅದು ಅವನ ಆಸ್ತಿಯಾಯಿತು. ಅವನು ಅದನ್ನು ಸಮಾಧಿ ಸ್ಥಳವನ್ನಾಗಿ ಉಪಯೋಗಿಸಿದನು.


ಬಳಿಕ ಅವರ ದೇಹಗಳನ್ನು ಶೇಕೆಮಿಗೆ ಸಾಗಿಸಲಾಯಿತು. ಅಲ್ಲಿಯ ಸಮಾಧಿಯೊಂದರಲ್ಲಿ ಅವರನ್ನು ಹೂಳಲಾಯಿತು. (ಅಬ್ರಹಾಮನು ಹಾಮೋರನ ಗಂಡುಮಕ್ಕಳಿಂದ ಕೊಂಡುಕೊಂಡದ್ದು ಈ ಸಮಾಧಿಯನ್ನೇ. ಅವನು ಅವರಿಗೆ ಬೆಳ್ಳಿಯನ್ನು ಕ್ರಯವಾಗಿ ಕೊಟ್ಟಿದ್ದನು.)


ಅವಿಶ್ವಾಸಿಗಳೊಂದಿಗೆ ವ್ಯವಹರಿಸುವಾಗ ಜ್ಞಾನವುಳ್ಳವರಾಗಿರಿ. ನಿಮ್ಮ ಸಮಯವನ್ನು ಅತ್ಯುತ್ತಮವಾದ ರೀತಿಯಲ್ಲಿ ಬಳಸಿರಿ.


ಆದ್ದರಿಂದ ನೀವು ಹೇಗೆ ಜೀವಿಸುತ್ತಿದ್ದೀರಿ ಎಂಬುದರ ಬಗ್ಗೆ ಬಹು ಎಚ್ಚರಿಕೆಯಿಂದಿರಿ. ಅವಿವೇಕಿಗಳಂತೆ ಜೀವಿಸದೆ ವಿವೇಕಿಗಳಾಗಿ ಜೀವಿಸಿರಿ.


“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.


ನನ್ನ ಪೂರ್ವಿಕರನ್ನು ಸಮಾಧಿ ಮಾಡಿದ ಸ್ಥಳದಲ್ಲಿಯೇ ನನ್ನನ್ನು ಸಮಾಧಿ ಮಾಡು. ನನ್ನನ್ನು ಈಜಿಪ್ಟಿನಿಂದ ತೆಗೆದುಕೊಂಡು ಹೋಗಿ ನಮ್ಮ ಕುಟುಂಬದವರ ಸ್ಮಶಾನದಲ್ಲಿ ಸಮಾಧಿ ಮಾಡು” ಎಂದು ಹೇಳಿದನು. ಯೋಸೇಫನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಪ್ರಮಾಣ ಮಾಡಿದನು.


ಅಬ್ರಹಾಮನು ಹಿತ್ತಿಯರಿಂದ ಕೊಂಡುಕೊಂಡ ಈ ಗವಿಯಲ್ಲೇ ಅಬ್ರಹಾಮನನ್ನು ಅವನ ಹೆಂಡತಿಯಾದ ಸಾರಳ ಜೊತೆಯಲ್ಲಿ ಸಮಾಧಿಮಾಡಲಾಯಿತು.


ಯೋಬನೇ, ಬೆಳಕನ್ನೂ ಕತ್ತಲೆಯನ್ನೂ ಅವುಗಳ ಉಗಮಸ್ಥಳಕ್ಕೆ ತೆಗೆದುಕೊಂಡು ಹೋಗಬಲ್ಲೆಯಾ? ಅಲ್ಲಿಗೆ ಹೋಗುವ ಮಾರ್ಗ ನಿನಗೆ ಗೊತ್ತಿದೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು