Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:6 - ಪರಿಶುದ್ದ ಬೈಬಲ್‌

6 “ಸ್ವಾಮೀ, ನೀನು ನಮ್ಮ ಮಹಾನಾಯಕರುಗಳಲ್ಲಿ ಒಬ್ಬನು. ತೀರಿಕೊಂಡ ನಿನ್ನ ಹೆಂಡತಿಯ ಸಮಾಧಿಗಾಗಿ ನಮ್ಮಲ್ಲಿರುವ ಸ್ಮಶಾನಗಳಲ್ಲಿ ಅತ್ಯುತ್ತಮವಾದ ಸ್ಥಳವನ್ನು ನೀನು ತೆಗೆದುಕೊಳ್ಳಬಹುದು. ನಿನ್ನ ಹೆಂಡತಿಯನ್ನು ಸಮಾಧಿಮಾಡಲು ನಮ್ಮಲ್ಲಿ ಯಾರೂ ಅಡ್ಡಿ ಮಾಡುವುದಿಲ್ಲ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಒಡೆಯಾ, ನಮ್ಮ ಮಾತನ್ನು ಕೇಳು, ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ. ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಳಿಡು. ನಮ್ಮಲ್ಲಿ ಯಾರೂ ನಿನಗೆ ಸಮಾಧಿಯನ್ನು ಕೊಡುವುದಿಲ್ಲ ಎಂದು ಹೇಳಲಾರರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:6
19 ತಿಳಿವುಗಳ ಹೋಲಿಕೆ  

ಯೆಹೋವನು ನನ್ನ ಒಡೆಯನನ್ನು ಪ್ರತಿಯೊಂದರಲ್ಲಿಯೂ ಬಹಳವಾಗಿ ಆಶೀರ್ವದಿಸಿದ್ದಾನೆ. ನನ್ನ ಒಡೆಯನು ಮಹಾವ್ಯಕ್ತಿಯಾಗಿದ್ದಾನೆ. ಯೆಹೋವನು ಅಬ್ರಹಾಮನಿಗೆ ಅನೇಕ ಕುರಿಹಿಂಡುಗಳನ್ನೂ ದನಕರುಗಳ ಮಂದೆಗಳನ್ನೂ ಕೊಟ್ಟಿದ್ದಾನೆ. ಅಬ್ರಹಾಮನಿಗೆ ಬೇಕಾದಷ್ಟು ಬೆಳ್ಳಿಬಂಗಾರಗಳಿವೆ. ಅನೇಕ ಸೇವಕರಿದ್ದಾರೆ. ಅನೇಕ ಒಂಟೆಗಳೂ ಕತ್ತೆಗಳೂ ಇವೆ.


ಲೋಟನು ಸೆರೆಯಾಳಾಗಿರುವುದು ಅಬ್ರಾಮನಿಗೆ ತಿಳಿಯಿತು. ಆದ್ದರಿಂದ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿದ ಗಂಡಾಳುಗಳನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವರಲ್ಲಿ ಮುನ್ನೂರ ಹದಿನೆಂಟು ಮಂದಿ ತರಬೇತಿ ಹೊಂದಿದ್ದ ಸೈನಿಕರಾಗಿದ್ದರು. ಅಬ್ರಾಮನು ಅವರೊಡನೆ ಹೊರಟು ಶತ್ರುಗಳನ್ನು ದಾನ್ ಊರಿನವರೆಗೂ ಹಿಂದಟ್ಟಿದನು.


ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.


ಆರೋನನು, “ಕೋಪಗೊಳ್ಳಬೇಡ. ಇವರು ಯಾವಾಗಲೂ ಪಾಪಮಾಡಲು ಸಿದ್ಧರಾಗಿರುವುದು ನಿನಗೆ ಗೊತ್ತೇ ಇದೆ.


ಮೊದಲು ನಮ್ಮ ಚೀಲಗಳಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ಮತ್ತೆ ತಂದುಕೊಟ್ಟೆವು. ಆದ್ದರಿಂದ ಖಂಡಿತವಾಗಿ ನಾವು ನಿನ್ನ ಒಡೆಯನ ಮನೆಯಿಂದ ಬೆಳ್ಳಿಯನ್ನಾಗಲಿ ಬಂಗಾರವನ್ನಾಗಲಿ ಕದ್ದುಕೊಂಡಿಲ್ಲ.


ಈ ಬಟ್ಟಲಿನಲ್ಲಿ ನನ್ನ ಒಡೆಯನು ಕುಡಿಯುತ್ತಾನೆ. ದೇವರಿಗೆ ಪ್ರಶ್ನೆಗಳನ್ನು ಕೇಳಲು ಅವನು ಈ ಬಟ್ಟಲನ್ನೇ ಉಪಯೋಗಿಸುವನು. ನೀವು ಅವನ ಬಟ್ಟಲನ್ನು ಕದ್ದುಕೊಂಡು ತಪ್ಪುಮಾಡಿದಿರಿ’ ಎಂದು ಹೇಳು” ಎಂಬುದಾಗಿ ತಿಳಿಸಿದನು.


ಸಹೋದರರು ಅವನಿಗೆ, “ಇಲ್ಲ! ಸ್ವಾಮೀ, ನಿಮ್ಮ ಸೇವಕರಾದ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೇವೆ.


ಆಗ ನೀನು, ‘ಪಶುಗಳು ನಿನ್ನ ಸೇವಕನಾದ ಯಾಕೋಬನವು. ನನ್ನ ಒಡೆಯನಾದ ಏಸಾವನೇ, ಯಾಕೋಬನು ಇವುಗಳನ್ನು ನಿನಗೆ ಉಡುಗೊರೆಯಾಗಿ ಕಳುಹಿಸಿದ್ದಾನೆ. ಅಲ್ಲದೆ ಅವನು ಸಹ ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ತಿಳಿಸಬೇಕು” ಎಂದು ಹೇಳಿದನು.


ಆಗ ರಾಹೇಲಳು ತನ್ನ ತಂದೆಗೆ, “ಅಪ್ಪಾ, ನನ್ನ ಮೇಲೆ ಕೋಪಗೊಳ್ಳಬೇಡ. ನಿನ್ನ ಮುಂದೆ ನಿಂತುಕೊಳ್ಳಲು ನನಗೆ ಸಾಧ್ಯವಿಲ್ಲ. ಯಾಕೆಂದರೆ ನಾನು ಮುಟ್ಟಾಗಿದ್ದೇನೆ” ಎಂದು ಹೇಳಿದಳು. ಲಾಬಾನನು ಪಾಳೆಯದಲ್ಲೆಲ್ಲಾ ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಾಗಲಿಲ್ಲ.


ರೆಬೆಕ್ಕಳು ಕೂಡಲೇ ತನ್ನ ಕೊಡವನ್ನು ಹೆಗಲ ಮೇಲಿಂದ ಕೆಳಗಿಳಿಸಿ ಅವನಿಗೆ ಕುಡಿಯಲು ನೀರನ್ನು ಕೊಟ್ಟು, “ಅಯ್ಯಾ, ನೀರನ್ನು ಕುಡಿ” ಅಂದಳು.


ಆಮೇಲೆ ಅಬೀಮೆಲೆಕನು ಮತ್ತು ಫೀಕೋಲನು ಅಬ್ರಹಾಮನೊಡನೆ ಮಾತಾಡಿದರು. ಫೀಕೋಲನು ಅಬೀಮೆಲೆಕನ ಸೈನ್ಯಾಧಿಕಾರಿಯಾಗಿದ್ದನು. ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಮಾಡುವ ಪ್ರತಿಯೊಂದರಲ್ಲೂ ದೇವರು ನಿನ್ನೊಡನೆ ಇದ್ದಾನೆ.


ಆದ್ದರಿಂದ ಸಾರಳಿಗೆ ನಂಬಲಾಗಲಿಲ್ಲ. ಆಕೆ ತನ್ನೊಳಗೆ, “ಈಗಾಗಲೇ ನನಗೆ ವಯಸ್ಸಾಗಿದೆ; ನನ್ನ ಗಂಡನಿಗೂ ವಯಸ್ಸಾಗಿದೆ” ಅಂದುಕೊಂಡಳು.


ಆಗ ಅಬ್ರಾಮನು ತುಂಬ ಐಶ್ವರ್ಯವಂತನಾಗಿದ್ದನು. ಅವನಿಗೆ ಅನೇಕ ಪಶುಗಳಿದ್ದವು; ಬಹಳ ಬೆಳ್ಳಿಬಂಗಾರಗಳಿದ್ದವು.


ಆಗ ರೂತಳು, “ನನ್ನ ಸ್ವಾಮೀ, ನೀವು ನನಗೆ ತುಂಬ ದಯೆ ತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲದಿದ್ದರೂ ನೀವು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು.


ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ಹಿತ್ತಿಯರು ಅಬ್ರಹಾಮನಿಗೆ,


ಅಬ್ರಹಾಮನು ಎದ್ದುನಿಂತು ಅವರಿಗೆ ನಮಸ್ಕರಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು