Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:49 - ಪರಿಶುದ್ದ ಬೈಬಲ್‌

49 ಈಗ ನಿಮ್ಮ ಅಭಿಪ್ರಾಯವನ್ನು ತಿಳಿಸಿರಿ. ನೀವು ನನ್ನ ಒಡೆಯನಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಿಮ್ಮ ಮಗಳನ್ನು ಕೊಡುವಿರಾ? ಅಥವಾ ಕೊಡುವುದಿಲ್ಲವೇ? ನಿಮ್ಮ ಉತ್ತರಕ್ಕನುಸಾರವಾಗಿ ನಾನು ಮುಂದಿನ ಕಾರ್ಯದ ಬಗ್ಗೆ ಆಲೋಚಿಸುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ, ನಂಬಿಕೆಯಿಂದಲೂ ನಡೆಯುವುದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ನನ್ನ ಪ್ರಯಾಣ ಮುಂದುವರೆಸುತ್ತೇನೆ” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಹೀಗಿರುವಲ್ಲಿ ನೀವು ನನ್ನೊಡೆಯನಿಗೆ ಪ್ರತಿ ಪ್ರೀತಿಯನ್ನೂ ಪ್ರಾಮಾಣಿಕತೆಯನ್ನೂ ತೋರಲು ಒಪ್ಪಿದರೆ ನನಗೆ ಹೇಳಿ; ಇಲ್ಲವಾದರೆ ಇಲ್ಲವೆನ್ನಿ; ಆಗ ಯಾವ ಕಡೆ ತಿರುಗಬೇಕೆಂದು ನನಗೆ ಗೊತ್ತಾಗುತ್ತದೆ,” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಡೆಯುವದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ತಿರುಗಿಕೊಂಡು ಹೋಗುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಆದ್ದರಿಂದ ನೀವು ನನ್ನ ಯಜಮಾನನಿಗೆ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ವರ್ತಿಸುವುದಾದರೆ ನನಗೆ ತಿಳಿಸಿರಿ. ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ, ಎಡಗಡೆಯಾದರೂ ತಿರುಗಿಕೊಂಡುಹೋಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:49
6 ತಿಳಿವುಗಳ ಹೋಲಿಕೆ  

ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.


ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.


ಪ್ರೀತಿಯೂ ನಂಬಿಗಸ್ತಿಕೆಯೂ ನಿನ್ನನ್ನು ಬಿಟ್ಟು ಹೋಗದಿರಲಿ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ.


ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ.


ಅವರು ಸೀಹೋನನಿಗೆ, ‘ನಿನ್ನ ರಾಜ್ಯವನ್ನು ನಾವು ದಾಟುವಂತೆ ನಮಗೆ ಅಪ್ಪಣೆ ಕೊಡು. ನಾವು ಮಾರ್ಗದಲ್ಲಿ ಬಲಕ್ಕಾಗಲಿ ಎಡಕ್ಕಾಗಲಿ ಹೋಗುವುದಿಲ್ಲ.


ನಿಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲಗಳಲ್ಲಿಯಾಗಲಿ ದ್ರಾಕ್ಷಿತೋಟಗಳಲ್ಲಿಯಾಗಲಿ ಹಾದುಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ತಮ್ಮ ದೇಶದ ಮೇರೆಗಳನ್ನು ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು