Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:5 - ಪರಿಶುದ್ದ ಬೈಬಲ್‌

5 ಸೇವಕನು ಅವನಿಗೆ, “ಆ ಕನ್ಯೆಯು ನನ್ನೊಡನೆ ಈ ದೇಶಕ್ಕೆ ಬರಲು ಒಪ್ಪದಿದ್ದರೆ, ನಾನು ನಿನ್ನ ಮಗನನ್ನು ನಿನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಬೇಕೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಆ ಸೇವಕನು, “ಒಂದು ವೇಳೆ ನನ್ನೊಡನೆ ಈ ದೇಶಕ್ಕೆ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟು ಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದಕ್ಕೆ ಆ ಸೇವಕ, “ಒಂದು ವೇಳೆ ಆ ಕನ್ಯೆಗೆ ಈ ನಾಡಿಗೆ ನನ್ನೊಡನೆ ಬರಲು ಇಷ್ಟವಿಲ್ಲದೆ ಹೋದೀತು. ಆಗ, ನೀವು ಬಿಟ್ಟುಬಂದ ನಾಡಿಗೆ ನಿಮ್ಮ ಮಗನನ್ನು ಮರಳಿ ಕರೆದುಕೊಂಡು ಹೋಗಬಹುದೆ?” ಎಂದು ವಿಚಾರಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದಕ್ಕೆ ಆ ಸೇವಕನು - ಒಂದು ವೇಳೆ ನನ್ನ ಹಿಂದೆ ಈ ದೇಶಕ್ಕೆ ಬರುವದಕ್ಕೆ ಆ ಕನ್ಯೆಗೆ ಇಷ್ಟವಿಲ್ಲದೆ ಹೋದೀತು; ನೀನು ಬಿಟ್ಟುಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗಬೇಕನ್ನುತ್ತೀಯೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಸೇವಕನು ಅವನಿಗೆ, “ಒಂದು ವೇಳೆ ನನ್ನನ್ನು ಹಿಂಬಾಲಿಸಿ, ಈ ದೇಶಕ್ಕೆ ಬರಲು ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:5
8 ತಿಳಿವುಗಳ ಹೋಲಿಕೆ  

ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


ಜ್ಞಾನಿಯು ವಿವೇಚಿಸಿ ಕಾರ್ಯಮಾಡುವನು; ಮೂಢನಾದರೋ ತನ್ನ ಕಾರ್ಯಗಳಿಂದಲೇ ತನ್ನ ಮೂಢತನವನ್ನು ತೋರಿಸಿಕೊಳ್ಳುತ್ತಾನೆ.


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನೀನು ಅವರನ್ನು ಬಿಡದೆ ಇನ್ನೂ ತಡೆದರೆ,


ಅವರು ರೆಬೆಕ್ಕಳನ್ನು ಕರೆದು, “ಈಗಲೇ ಈ ಮನುಷ್ಯನೊಡನೆ ಹೋಗಲು ನಿನಗೆ ಇಷ್ಟವಿದೆಯೋ?” ಎಂದು ಕೇಳಿದರು. ರೆಬೆಕ್ಕಳು, “ಹೌದು, ನಾನು ಹೋಗುತ್ತೇನೆ” ಅಂದಳು.


ನನ್ನ ಸ್ವದೇಶದಲ್ಲಿರುವ ನನ್ನ ಸ್ವಜನರ ಬಳಿಗೆ ಹೋಗಿ ನನ್ನ ಮಗನಾದ ಇಸಾಕನಿಗೆ ಕನ್ನಿಕೆಯನ್ನು ಹುಡುಕಿ ಕರೆದುಕೊಂಡು ಬರುವುದಾಗಿಯೂ ಭೂಪರಲೋಕಗಳ ದೇವರಾದ ಯೆಹೋವನ ಮೇಲೆ ಪ್ರಮಾಣಮಾಡು” ಎಂದು ಹೇಳಿದನು.


ಅಬ್ರಹಾಮನು ಅವನಿಗೆ, “ಇಲ್ಲ, ಆ ದೇಶಕ್ಕೆ ನನ್ನ ಮಗನನ್ನು ಕರೆದುಕೊಂಡು ಹೋಗಬೇಡ.


ನಾನು ನನ್ನ ಒಡೆಯನಿಗೆ, ‘ಆ ಕನ್ಯೆಯು ಈ ದೇಶಕ್ಕೆ ನನ್ನೊಂದಿಗೆ ಬರಲು ಒಪ್ಪದಿರಬಹುದು’ ಎಂದು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು