Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:50 - ಪರಿಶುದ್ದ ಬೈಬಲ್‌

50 ಅದಕ್ಕೆ ಲಾಬಾನನು ಮತ್ತು ಬೆತೂವೇಲನು, “ನಿನ್ನನ್ನು ಯೆಹೋವನೇ ಕಳುಹಿಸಿದ್ದಾನೆ. ನಡೆಯತಕ್ಕದ್ದನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅದಕ್ಕೆ ಲಾಬಾನನೂ, ಬೆತೂವೇಲನೂ, “ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂ ಹೌದೆಂದೂ, ಅಲ್ಲವೆಂದೂ ಹೇಳಲಾರೆವು. ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಅದಕ್ಕೆ ಲಾಬಾನನು ಮತ್ತು ಬೆತೂವೇಲನು, ” ಇದು ಸರ್ವೇಶ್ವರ ಸ್ವಾಮಿಯಿಂದಲೇ ಬಂದ ಸೂಚನೆ, ಇದಕ್ಕೆ ನಾವು ನಿನಗೆ 'ಹೌದು - ಇಲ್ಲ’ ಎಂದು ಹೇಳಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅದಕ್ಕೆ ಲಾಬಾನನು ಬೆತೂವೇಲನೂ - ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಅದಕ್ಕೆ ಲಾಬಾನನು ಮತ್ತು ಬೆತೂಯೇಲನು, “ಈ ಕಾರ್ಯವು ಯೆಹೋವ ದೇವರಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:50
15 ತಿಳಿವುಗಳ ಹೋಲಿಕೆ  

ಇದು ಯೆಹೋವನಿಂದಲೇ ಆಯಿತು. ನಮಗಂತೂ ಇದು ಆಶ್ಚರ್ಯಕರವಾಗಿದೆ!


ಆ ರಾತ್ರಿ ದೇವರು ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆಯಾಗಿರು; ನೀನು ಯಾಕೋಬನಿಗೆ ಹೇಳುವ ಪ್ರತಿಯೊಂದು ಮಾತಿನ ಬಗ್ಗೆ ಎಚ್ಚರಿಕೆಯಾಗಿರು” ಎಂದು ಹೇಳಿದನು.


ನಿನಗೆ ಕೇಡುಮಾಡಲು ನನಗೆ ಶಕ್ತಿಯಿದೆ. ಆದರೆ ಕಳೆದ ರಾತ್ರಿ ನಿನ್ನ ತಂದೆಯ ದೇವರು ಕನಸಿನಲ್ಲಿ ನನಗೆ ಕಾಣಿಸಿಕೊಂಡು, ನಿನಗೆ ಕೇಡುಮಾಡಕೂಡದೆಂದು ನನಗೆ ಎಚ್ಚರಿಕೆ ಕೊಟ್ಟನು.


ಇದು ಪ್ರಭುವಿನಿಂದ ಆಯಿತು. ಇದು ನಮಗೆ ಆಶ್ಚರ್ಯವಾಗಿ ತೋರುತ್ತದೆ.’”


ಅಬ್ಷಾಲೋಮನು ಅಮ್ನೋನನನ್ನು ದ್ವೇಷಿಸಿದನು. ಅಬ್ಷಾಲೋಮನು ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಏನನ್ನೂ ಅಮ್ನೋನನಿಗೆ ಹೇಳಲಿಲ್ಲ. ಅಮ್ನೋನನು ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅಬ್ಷಾಲೋಮನು ಅಮ್ನೋನನನ್ನು ದ್ವೇಷಿಸಿದನು.


ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು.


ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’


ರೆಬೆಕ್ಕಳ ತಾಯಿ ಮತ್ತು ಅಣ್ಣನು ಅವರಿಗೆ, “ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು” ಎಂದು ಹೇಳಿದರು.


ಆಮೇಲೆ ಆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳ್ಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು.


ಆಗ ರೆಬೆಕ್ಕಳು ಬೇಗನೆ ಹೋಗಿ ಈ ಸಂಗತಿಗಳನ್ನೆಲ್ಲಾ ತನ್ನ ಕುಟುಂಬದವರಿಗೆ ತಿಳಿಸಿದಳು.


ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು.


ಅವರು ಹೊರಡಲು ಸಿದ್ಧರಾಗಿದ್ದಾಗ ಅವರು ರೆಬೆಕ್ಕಳಿಗೆ, “ನಮ್ಮ ತಂಗಿಯೇ, ನೀನು ಕೋಟ್ಯಾನುಕೋಟಿ ಜನರ ತಾಯಿಯಾಗು. ನಿನ್ನ ಸಂತತಿಗಳವರು ತಮ್ಮ ಶತ್ರುಗಳನ್ನು ಸೋಲಿಸಿ ಅವರ ನಗರಗಳನ್ನು ವಶಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.


ರೆಬೆಕ್ಕಳು ನಿಮ್ಮವಳು. ನೀನು ಆಕೆಯನ್ನು ಕರೆದುಕೊಂಡು ಹೋಗಿ ಯೆಹೋವನ ಇಷ್ಟಕ್ಕನುಸಾರವಾಗಿ ನಿನ್ನ ಒಡೆಯನ ಮಗನಿಗೆ ಮದುವೆ ಮಾಡಿಸು” ಎಂದು ಹೇಳಿದರು.


ರಾಜನು ಜನರ ಅಪೇಕ್ಷೆಯನ್ನು ನೆರವೇರಿಸಲಿಲ್ಲ. ನೆಬಾಟನ ಮಗನಾದ ಯಾರೊಬ್ಬಾಮನಿಗೆ ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಲು ಯೆಹೋವನೇ ಹೀಗೆ ಮಾಡಿದನು. ಯೆಹೋವನು ಪ್ರವಾದಿಯಾದ ಅಹೀಯನ ಮೂಲಕ ಈ ವಾಗ್ದಾನವನ್ನು ಮಾಡಿದ್ದನು. ಅಹೀಯನು ಶೀಲೋವಿನವನು.


ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದ್ದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು