ಆದಿಕಾಂಡ 24:7 - ಪರಿಶುದ್ದ ಬೈಬಲ್7 ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, ‘ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು’ ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ನಾಡಿನಿಂದಲೂ ನನ್ನನ್ನು ಇಲ್ಲಿಗೆ ಕರೆತಂದು, ‘ನಿನ್ನ ಸಂತತಿಗೆ ಈ ನಾಡನ್ನು ಕೊಡುತ್ತೇನೆ,’ ಎಂದು ಪರಲೋಕ ದೇವರಾದ ಸರ್ವೇಶ್ವರ ಸ್ವಾಮಿ ಪ್ರಮಾಣಮಾಡಿ ಹೇಳಿದ್ದಾರೆ. ಅವರೇ ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೆ ಹೆಣ್ಣು ತರುವುದಕ್ಕೆ ಅನುಕೂಲ ಮಾಡಿಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು - ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನೆಂದು ಪ್ರಮಾಣಮಾಡಿ ಹೇಳಿದ ಪರಲೋಕದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳುವಂತೆ ಅನುಕೂಲಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು. ಅಧ್ಯಾಯವನ್ನು ನೋಡಿ |
ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.
‘ಈಜಿಪ್ಟಿನಿಂದ ಬಂದ ಈ ಜನರಲ್ಲಿ ಮತ್ತು ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಹೆಚ್ಚು ವಯಸ್ಸಾದ ನಿಮ್ಮವರೆಲ್ಲಾ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಯಾರೂ ನನ್ನನ್ನು ನಿಜವಾಗಿಯೂ ಅನುಸರಿಸದೆ ಹೋದದ್ದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಅವರಿಬ್ಬರೇ ಹೊರತು ಬೇರೆ ಯಾರೂ ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದನು.
ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.